ಮೈಸೂರು: ಮೈಸೂರು ಮಹಾನಗರಪಾಲಿಕೆ ಆರೋ ಗ್ಯಾಧಿಕಾರಿಯಾಗಿ ಡಾ.ಎಂ.ಎಸ್. ಜಯಂತ್ ಅವರನ್ನು ನೇಮಿಸಲಾಗಿದೆ.
ಪಾಂಡವಪುರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಮುಖ್ಯ ವೈದ್ಯಾಧಿಕಾರಿಯಾಗಿದ್ದ ಅವರನ್ನು ನಗರ ಪಾಲಿಕೆಗೆ ವರ್ಗಾವಣೆ ಮಾಡಿ ನಗರಾ ಭಿವೃದ್ಧಿ ಇಲಾಖೆ ಅಧೀನ ಕಾರ್ಯ ದರ್ಶಿ ನಾಗರಾಜ್ ಅವರು ಮೇ 27ರಂದು ಆದೇಶ ಹೊರಡಿಸಿದ್ದಾರೆ. ಪಾಲಿಕೆ ಆರೋಗ್ಯಾಧಿ ಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಬಿ.ನಾಗರಾಜ್ ಅವರು ಸಹ ನಗರ ಪಾಲಿಕೆಯ ಆರೋಗ್ಯಾಧಿಕಾರಿ (ಕಿರಿಯ ಶ್ರೇಣಿ)ಯಾಗಿ ಮುಂದುವರೆಯಲಿದ್ದಾರೆ. ಡಾ.ಎಂ.ಎಸ್.ಜಯಂತ್ ಅವರು ಇಂದು ಅಧಿಕಾರ ವಹಿಸಿಕೊಂಡರು.