ಮತದಾನದ ಮಹತ್ವ ಕುರಿತ ಜಾಗೃತಿ ಜಾಥಾಗೆ ಚಾಲನೆ

ಮಡಿಕೇರಿ: ಮತದಾನದ ಮಹತ್ವ ಕುರಿತ ಜಾಗೃತಿ ಜಾಥಾಗೆ ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ಅಧ್ಯಕ್ಷರಾದ ಕೆ.ಲಕ್ಷ್ಮಿ ಪ್ರಿಯಾ ಗುರುವಾರ ಚಾಲನೆ ನೀಡಿದರು.

ಮತದಾನ ನಮ್ಮಿಂದ, ಮತದಾನ ಹೆಮ್ಮೆಯಿಂದ, ಮತ ಹಕ್ಕು ಚಲಾಯಿಸುವುದು ಕರ್ತವ್ಯವಾಗಿದೆ. ತಪ್ಪದೇ ಮತ ಚಲಾಯಿಸಿ ಎಂದು ಸ್ವೀಪ್ ಅಧ್ಯಕ್ಷರು ಹಾಗೂ ಜಿಪಂ ಸಿಇಒ ಕೆ.ಲಕ್ಷ್ಮಿಪ್ರಿಯಾ ಕರೆ ನೀಡಿದರು.

ಹದಿನೆಂಟು ವರ್ಷ ಪೂರ್ಣಗೊಂಡ ಪ್ರತಿಯೊಬ್ಬರೂ ಮತದಾರರ ಚುನಾ ವಣಾ ಗುರುತಿನ ಚೀಟಿ ಪಡೆದು ಕಡ್ಡಾ ಯವಾಗಿ ಮತ ಚಲಾಯಿಸುವಂತಾಗ ಬೇಕು. ಜೊತೆಗೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವಂತಾಗಬೇಕು ಎಂದು ಜಿಪಂ ಸಿಇಒ ಸಲಹೆ ಮಾಡಿದರು.

ವಿದ್ಯುನ್ಮಾನ ಮತಯಂತ್ರದಲ್ಲಿ ಕಂಟ್ರೊಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್ ಹಾಗೂ ವಿವಿ ಪ್ಯಾಟ್ ಪ್ರಮುಖವಾಗಿದೆ. ವಿವಿ ಪ್ಯಾಟ್‍ನಿಂದ ಮತವನ್ನು ಯಾರಿಗೆ ಚಲಾಯಿಸಿದ್ದೇವೆ ಎಂಬುದನ್ನು ಖಾತರಿ ಪಡಿಸಿಕೊಳ್ಳಲು ಸಹಕಾರಿಯಾಗಿದೆ. ಆ ದಿಸೆಯಲ್ಲಿ ಅರ್ಹರೆಲ್ಲರೂ ಮತದಾನ ಮಾಡುವಂತಾಗಬೇಕು ಎಂದು ಕೆ.ಲಕ್ಷ್ಮಿಪ್ರಿಯಾ ಕೋರಿದರು. ಮಹಿಳಾ ಮತ್ತು ಮಕ್ಕಳ ಅಭಿ ವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅರುಂಧತಿ ಮಾತನಾಡಿ, ಪ್ರಜಾಪ್ರಭುತ್ವ ಬಲಪಡಿಸಲು ಏಕೈಕ ಅವಕಾಶ ಮತದಾನ ವಾಗಿದ್ದು, ಮತದಾನ ಎಂಬ ಅಸ್ತ್ರವನ್ನು ಬಳಸಿಕೊಳ್ಳಬೇಕು. ಯಾವುದೇ ಕಾರ ಣಕ್ಕೂ ಮತದಾನದಿಂದ ವಂಚಿತರಾಗ ಬಾರದೆಂದು ಅವರು ಮನವಿ ಮಾಡಿದರು.

ಪೌರಾಯುಕ್ತ ಎಂ.ಎಲ್.ರಮೇಶ್ ಮಾತನಾಡಿ, ಪ್ರಜಾಪ್ರಭುತ್ವದ ಜನತಂತ್ರದ ಹಬ್ಬದಲ್ಲಿ ಮತದಾರರು ಪವಿತ್ರ ಮತದಾನ ಕಾರ್ಯದಲ್ಲಿ ಮತ ಚಲಾಯಿಸಬೇಕು. ಇದ ರಿಂದ ಉತ್ತಮ ಸಮಾಜ ಕಟ್ಟಲು ಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಅರ್ಹರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಇತರರಿಗೂ ಮಾಹಿತಿ ನೀಡುವಂತಾಗಬೇಕು. ಜೊತೆಗೆ ಅರ್ಹರು ಮತ ದಾನ ಮಾಡಿದ್ದಾರೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಜಿಪಂ ಸಹಾಯಕ ಕಾರ್ಯದರ್ಶಿ ಶ್ರೀಕಂಠ ಮೂರ್ತಿ, ನಗರಸಭೆಯ ಸುಜಾತ, ರಮೇಶ್, ಬಷೀರ್, ಶಿಶು ಅಭಿವೃಧ್ಧಿ ಯೋಜನಾ ಇಲಾ ಖೆಯ ವ್ಯವಸ್ಥಾಪಕರಾದ ಸುನಿತಾ, ಮಮ್ತಾಜ್, ಮಂಜುನಾಥ್, ಯಶೋಧ, ಪ್ರಿಯಾ, ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರು ಇತರರು ಇದ್ದರು. ಜಾಥಾವೂ ನಗರದ ಮಹದೇವ ಪೇಟೆ ಮುಖ್ಯರಸ್ತೆ ಮೂಲಕ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ, ಜನರಲ್ ತಿಮ್ಮಯ್ಯ ವೃತ್ತ ಮೂಲಕ ಕಾವೇರಿ ಕಲಾ ಕ್ಷೇತ್ರದಲ್ಲಿ ಕೊನೆಗೊಂಡಿತು.