ಕಾಯಕ ಯೋಜನೆಗೆ ಚಾಲನೆ; ಬಡವರ ಬಂಧು  ಯೋಜನೆ ಫಲಾನುಭವಿಗಳಿಗೆ ಚೆಕ್ ವಿತರಣೆ
ಮೈಸೂರು

ಕಾಯಕ ಯೋಜನೆಗೆ ಚಾಲನೆ; ಬಡವರ ಬಂಧು ಯೋಜನೆ ಫಲಾನುಭವಿಗಳಿಗೆ ಚೆಕ್ ವಿತರಣೆ

December 21, 2018

ಬೆಳಗಾವಿ: ಬಡ್ಡಿರಹಿತ ಸಾಲ ಸೌಲಭ್ಯ ಒದಗಿಸುವ ಬಡವರ ಬಂಧು ಯೋಜನೆಯ ಲಾಭ ವನ್ನು ರಾಜ್ಯದಲ್ಲಿರುವ ಒಟ್ಟು 4.5 ಲಕ್ಷ ಬೀದಿ ಬದಿ ವ್ಯಾಪಾರಿಗಳ ಕುಟುಂಬಗಳಿಗೂ ತಲುಪಿಸಲಾಗುವುದು. ಅದೇ ರೀತಿ ಕಾಯಕ ಯೋಜನೆಯಡಿ ಮಹಿಳಾ ಸಂಘಗಳು ತಯಾರಿಸುವ ಉತ್ಪನ್ನಗಳನ್ನು ಸರ್ಕಾರದ ವತಿಯಿಂದಲೇ ಖರೀದಿಸುವ ಬಗ್ಗೆ ಚಿಂತನೆ ನಡೆಸ ಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ಸಹಕಾರ ಇಲಾಖೆಯ ವತಿಯಿಂದ ಧರ್ಮನಾಥ ಭವನದಲ್ಲಿ ಗುರುವಾರ (ಡಿ.20) ಏರ್ಪಡಿಸಿದ್ದ ‘ಕಾಯಕ’ ಯೋಜನೆಯ ಉದ್ಘಾಟನೆ ಮತ್ತು ‘ಬಡವರ ಬಂಧು’ ಯೋಜನೆಯ ಫಲಾನುಭವಿಗಳಿಗೆ ಚೆಕ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಾಯಕ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳಿಗೆ ವಿವಿಧ ಬಗೆಯ ಉತ್ಪಾದನೆಗಳ ತಯಾರಿಕೆ ಮತ್ತು ಮಾರಾಟಕ್ಕೆ ತರಬೇತಿ ನೀಡಲಾಗುವುದು. ಅಂತಹ ಸಂಘಗಳು ತಯಾರಿಸುವ ಉತ್ಪನ್ನಗಳನ್ನು ಸರ್ಕಾರದ ಮೂಲಕವೇ ಖರೀದಿಸುವ ಮೂಲಕ ಅವರಿಗೆ ನೆರವಾಗುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಬಡವರು ಸಾಲದಿಂದ ಜೀವನ ನಿರ್ವಹಣೆ ಮಾಡು ತ್ತಿದ್ದು, ಅವರಿಗೆ ಆರ್ಥಿಕ ನೆರವು ನೀಡಲು ಬಡವರ ಬಂಧು ಹಾಗೂ ಕಾಯಕ ಯೋಜನೆ ರೂಪಿಸಲಾ ಗಿದೆ. ಪ್ರತಿ ಬಡ ಕುಟುಂಬವು ನೆಮ್ಮದಿಯ ಬದುಕು ನಡೆಸಬೇಕು. ಮುಂದಿನ ದಿನಗಳಲ್ಲಿ ಆ ರೀತಿಯ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶ ನಮ್ಮದು ಎಂದು ಕುಮಾರಸ್ವಾಮಿ ಹೇಳಿದರು.

ದಾರಿತಪ್ಪಿಸುವ ಕೆಲಸ: ರೈತರ 46 ಸಾವಿರ ಕೋಟಿ ರೂಪಾಯಿ ಸಾಲಮನ್ನಾ ಮಾಡುವ ಸವಾಲು ನಮ್ಮ ಮುಂದಿದೆ. ಆದರೆ ಕೆಲವರು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದು, ಯಾರೂ ಇದಕ್ಕೆ ಕಿವಿಗೊಡದೇ ನನ್ನ ಮೇಲೆ ವಿಶ್ವಾಸ ಇಡಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿ ಮಾಡಿಕೊಂಡರು.

ರೈತರ ಸಾಲಮನ್ನಾ ಯೋಜನೆಯಡಿ ಉತ್ತರ ಕರ್ನಾ ಟಕದ ಬೆಳಗಾವಿ ಮತ್ತು ಗುಲ್ಬರ್ಗಾ ವಿಭಾಗದ 12 ಜಿಲ್ಲೆಗಳ ರೈತರಿಗೆ ಒಟ್ಟಾರೆ 29 ಸಾವಿರ ಕೋಟಿಯ ಸಾಲ ಮನ್ನಾ ಸೌಲಭ್ಯ ದೊರಕಲಿದೆ. ಬೀದರ್ ಜಿಲ್ಲೆ ಯಲ್ಲಿ 1636 ಕೋಟಿ ರೂ., ಕಲಬುರಗಿಯಲ್ಲಿ 3065 ಕೋಟಿ, ಯಾದಗಿರಿ ಜಿಲ್ಲೆಯಲ್ಲಿ1179 ಕೋಟಿ, ರಾಯ ಚೂರು ಜಿಲ್ಲೆಯಲ್ಲಿ 2210 ಕೋಟಿ, ಕೊಪ್ಪಳ ಜಿಲ್ಲೆಯಲ್ಲಿ 1098 ಕೋಟಿ, ಬಳ್ಳಾರಿ ಜಿಲ್ಲೆಯಲ್ಲಿ 2263 ಕೋಟಿ ರೂಪಾಯಿ, ಬೆಳಗಾವಿ ಜಿಲ್ಲೆಯಲ್ಲಿ 4719 ಕೋಟಿ, ಬಾಗಲಕೋಟೆ ಜಿಲ್ಲೆಯಲ್ಲಿ 3962 ಕೋಟಿ , ವಿಜಯಪುರ ಜಿಲ್ಲೆಯಲ್ಲಿ 3271 ಕೋಟಿ, ಧಾರವಾಡ ಜಿಲ್ಲೆಯಲ್ಲಿ 1854 ಕೋಟಿ, ಗದಗ 1815 ಕೋಟಿ ರೂ. ಹಾಗೂ ಹಾವೇರಿ ಜಿಲ್ಲೆಯಲ್ಲಿ 2113 ಕೋಟಿ ರೂಪಾಯಿ ಗಳಷ್ಟು ಮೊತ್ತದ ಸಾಲ ಮನ್ನಾ ಆಗಲಿದೆ.

ಆದಾಗ್ಯೂ ಉತ್ತರ ಕರ್ನಾಟಕದ ನಿರ್ಲಕ್ಷ್ಯ ಎಂದು ಬಿಂಬಿಸಲಾಗುತ್ತಿದೆ. ಉತ್ತರ ಕರ್ನಾಟಕ ನಿರ್ಲಕ್ಷಿಸುವ ಪ್ರಮೇಯವೇ ಇಲ್ಲ. ನನಗೆ ಉತ್ತರ ಕರ್ನಾಟಕ ಅಥವಾ ದಕ್ಷಿಣ ಕರ್ನಾಟಕ ಎಂಬ ಭೇದಭಾವ ಇಲ್ಲ. ನಾನು ನಿಮ್ಮವ. ರೈತರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಬಡವರು ಮತ್ತು ರೈತರ ನೆರವಿಗೆ ಸರ್ಕಾರ ಸದಾ ಬದ್ಧವಾಗಿದೆ. ರೈತರ ಸಾಲಮನ್ನಾ ಇಡೀ ರಾಷ್ಟ್ರಕ್ಕೆ ಮಾದರಿ ಯೋಜ ನೆಯಾಗಿದೆ. ಕೇಂದ್ರ ಸರ್ಕಾರ ಸೇರಿದಂತೆ ಅನೇಕ ರಾಜ್ಯದ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಪಡೆಯಲು ಮತ್ತು ಅಧ್ಯಯನಕ್ಕೆ ರಾಜ್ಯಕ್ಕೆ ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರೈತರನ್ನು ಸಾಲದಿಂದ ಮುಕ್ತಗೊಳಿಸಲು ವಿಭಿನ್ನ ಕೃಷಿ ಪದ್ಧತಿಗೆ ಪೆÇ್ರೀತ್ಸಾಹ ನೀಡಲು ಸರ್ಕಾರ ಉದ್ದೇಶಿಸಿದ್ದು, ಇದಕ್ಕೆ ಸ್ವಲ್ಪ ಕಾಲಾವಕಾಶ ಬೇಕಾಗು ತ್ತದೆ. ನಾನು ಅಥವಾ ಸರ್ಕಾರ ಯಾವುದೇ ಜಾತಿಗೆ ಸೀಮಿತವಾಗಿಲ್ಲ; ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಕಂಕಣಬದ್ಧವಾಗಿದ್ದು, ಕರ್ನಾಟಕವನ್ನು ದೇಶದಲ್ಲಿ ಮಾದರಿ ರಾಜ್ಯವಾಗಿ ನಿರ್ಮಿಸುವ ಗುರಿ ನಮ್ಮದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ಬಡವರ ಬಂಧು ಹಾಗೂ ಕಾಯಕ ಸಮ್ಮಿಶ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾ ಗಿವೆ. ಮೀಟರ್ ಬಡ್ಡಿಗೆ ಕಡಿವಾಣ ಹಾಕಬೇಕು ಎಂಬ ಉದ್ದೇಶದಿಂದ ಬಡವರ ಬಂಧು ಯೋಜನೆ ಜಾರಿಗೊಳಿ ಸಲಾಗಿದೆ. ಯಾವುದೇ ಬಡ್ಡಿ ಮತ್ತು ಖಾತ್ರಿ ಇಲ್ಲದೇ ಬೀದಿಬದಿ ವ್ಯಾಪಾರಸ್ಥರಿಗೆ 2ರಿಂದ 10 ಸಾವಿರ ರೂ. ವರೆಗೆ ಸಾಲ ನೀಡಲಾಗುತ್ತದೆ. ರಾಜ್ಯದಲ್ಲಿ ಇರುವ 4.5 ಲಕ್ಷ ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರ ನೆರವಾಗ ಬೇಕು ಎಂಬುದು ಮುಖ್ಯಮಂತ್ರಿಗಳ ಆಶಯವಾಗಿದೆ. ಆದಷ್ಟು ಬೇಗನೇ ರಾಜ್ಯದಾದ್ಯಂತ ಎಲ್ಲ ವ್ಯಾಪಾರಿ ಗಳಿಗೆ ಬಡವರ ಬಂಧು ಯೋಜನೆಯನ್ನು ವಿಸ್ತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಾಶೆಂಪುರ ಹೇಳಿದರು.

ಕಾಯಕ ಯೋಜನೆ: ಕಾಯಕವೇ ಕೈಲಾಸ ಎಂಬ ಬಸವಣ್ಣನವರ ನುಡಿಯಂತೆ ದುಡಿಯುವ ಕೈಗಳಿಗೆ ಆರ್ಥಿಕ ಬಲ ತುಂಬುವುದು ಈ ಕಾಯಕ ಯೋಜ ನೆಯ ಉದ್ದೇಶವಾಗಿದೆ. 5 ಲಕ್ಷ ರೂ.ವರೆಗೆ ಬಡ್ಡಿರಹಿತ ಸಾಲ ನೀಡಲು ಸರ್ಕಾರ ಮುಂದಾಗಿದೆ. ಕಾಯಕ ಯೋಜ ನೆಯು ಇಡೀ ದೇಶದಲ್ಲಿ ಮಾದರಿ. ಕಾಯಕ ಯೋಜನೆ ಯಡಿ ಉತ್ಪಾದಿಸಲಾಗುವ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಒದಗಿಸಲು ಕೂಡ ಯೋಜನೆ ರೂಪಿಸ ಲಾಗುತ್ತಿದೆ. ಈ ಯೋಜನೆಯಡಿ ಉತ್ಪಾದಿಸಲಾಗುವ ಉತ್ಪನ್ನಗಳು ಹಳ್ಳಿ, ಪಟ್ಟಣದಿಂದ ದೆಹಲಿಯವರೆಗೆ ಬಸ್ ನಿಲ್ದಾಣದಿಂದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಮಾರಾಟಕ್ಕೆ ಲಭ್ಯ ಇರಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ಸಹಕಾರ ಇಲಾಖೆಯು ಕಾರ್ಯಯೋಜನೆ ರೂಪಿಸಲಿದೆ ಎಂದು ಸಚಿವ ಬಂಡೆಪ್ಪ ಕಾಶೆಂಪುರ ಹೇಳಿದರು.

ಬಡ್ಡಿ ಸುಳಿಯಿಂದ ಬಡ ವ್ಯಾಪಾರಿಗಳನ್ನು ರಕ್ಷಿಸು ವುದು ಹಾಗೂ ದುಡಿಯುವ ಜನರಿಗೆ ಆರ್ಥಿಕ ನೆರವು ನೀಡುವ ಈ 2 ಯೋಜನೆಗಳನ್ನು ಜನರು ಸದುಪ ಯೋಗಪಡಿಸಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು ಎಂದು ಕಾಶೆಂಪುರ ಕರೆ ನೀಡಿದರು. ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್, ಸಣ್ಣ ಕೈಗಾ ರಿಕಾ ಸಚಿವ ಶ್ರೀನಿವಾಸ್, ಪಶುಸಂಗೋಪನೆ ಸಚಿವ ವೆಂಕಟರಾವ್ ನಾಡಗೌಡ, ಶಾಸಕ ಬಾಲಕೃಷ್ಣ, ಮೇಯರ್ ಬಸಪ್ಪ ಚಿಕ್ಕಲದಿನ್ನಿ, ಬಾಗಲಕೋಟೆ ಡಿಸಿಸಿ ಬ್ಯಾಂಕಿನ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಅಜಯ ಕುಮಾರ್ ಸರನಾಯಕ ಸೇರಿದಂತೆ ಹಿರಿಯ ಸಹಕಾರಿ ಗಳು ಮತ್ತು ಸಹಕಾರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಬಡವರ ಬಂಧು ಯೋಜನೆಯ ಫಲಾನುಭವಿಗಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಚೆಕ್ ವಿತರಿಸಿದರು.

Translate »