ಬೆಂಡೆಕುತ್ತಿ ಬಳಿ ಆನೆ ದಾಳಿ: ವಾಹನ ಜಖಂ, ಚಾಲಕನಿಗೆ ಗಾಯ
ಕೊಡಗು

ಬೆಂಡೆಕುತ್ತಿ ಬಳಿ ಆನೆ ದಾಳಿ: ವಾಹನ ಜಖಂ, ಚಾಲಕನಿಗೆ ಗಾಯ

March 10, 2019

ಗೋಣಿಕೊಪ್ಪಲು: ಕಾಡಾನೆ ದಾಳಿಯಿಂದ ವಾಹನ ಜಖಂಗೊಂಡಿರುವ ಘಟನೆ ನಿಟ್ಟೂರು ಗ್ರಾಮದಲ್ಲಿ ನಡೆದಿದೆ. ವಾಹನ ಚಲಾಯಿಸುತ್ತಿದ್ದ ನಿಟ್ಟೂರು ಗ್ರಾಮದ ಮಹೇಶ್ (28) ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶನಿವಾರ ಬೆಳಿಗ್ಗೆ 8 ಗಂಟೆ ವೇಳೆ ಕಾರ್ಮಿಕರನ್ನು ಕರೆದುಕೊಂಡು ಬರಲು ಮಾರುತಿ ವ್ಯಾನ್ ನಲ್ಲಿ ತಟ್ಟೆಕೆರೆಗೆ ತೆರಳುತ್ತಿದ್ದ ಸಂದರ್ಭ ಬೆಂಡೆಕುತ್ತಿ ಎಂಬಲ್ಲಿ ಕಿರಿದಾದ ರಸ್ತೆಯಲ್ಲಿ ತೋಟದಿಂದ ಬಂದ ಕಾಡಾನೆ ವಾಹನದ ಮೇಲೆ ದಿಢೀರ್ ದಾಳಿ ನಡೆಸಿದೆ.
ಕೋರೆಯಲ್ಲಿ ಚುಚ್ಚಿದ ಪರಿಣಾಮ ವಾಹನದ ಮುಂಭಾಗ ಜಖಂಗೊಂಡಿದೆ. ಮಹೇಶ್ ಅವರ ಕಾಲು ಹಾಗೂ ಕೈಗೆ ಗಾಯವಾಗಿದೆ. ಈ ಬಗ್ಗೆ ಮಾಹಿತಿ ಪಡೆದ ನಾಗರಹೊಳೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.

Translate »