ಅರ್ಹ ಮತದಾರ ಸಂಖ್ಯೆ 25,59,855,30,650 ಹೊಸ ಸೇರ್ಪಡೆ, 22,625 ರದ್ದು
ಮೈಸೂರು

ಅರ್ಹ ಮತದಾರ ಸಂಖ್ಯೆ 25,59,855,30,650 ಹೊಸ ಸೇರ್ಪಡೆ, 22,625 ರದ್ದು

January 6, 2023

ಮೈಸೂರು, ಜ.5- ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಇಂದು(ಜ.5) ಅಂತಿಮ ಮತದಾರರ ಪಟ್ಟಿ ಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಯಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟ ಸಂಬಂಧ ಹಮ್ಮಿಕೊಂಡಿದ್ದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿ ಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ರಾಜ್ಯ ಇವರ ಅಧಿ ಕೃತ ಜಾಲತಾಣ hಣಣಠಿs://ಛಿeo.ಞಚಿಡಿಟಿಚಿಣಚಿಞಚಿ.gov.iಟಿ ದಲ್ಲಿ ಲಭ್ಯವಿದ್ದು, ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದ ಬಗ್ಗೆ ಪರಿಶೀಲಿಸಿಕೊಳ್ಳ ಬಹುದಾಗಿದೆ. ಅಲ್ಲದೆ ಸರಿಯಾದ ಹೆಸರನ್ನು ನಮೂದು ಗಳೊಂದಿಗೆ ನೋಂದಾಯಿಸಿದ
ಬಗ್ಗೆ ಖಚಿತಪಡಿಸಿಕೊಳ್ಳಬಹುದು ಎಂದು ತಿಳಿಸಿದರು. ಮೈಸೂರು ಜಿಲ್ಲೆಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ 12,72,155 ಪುರುಷ ಮತದಾರರು, 12, 87,502 ಮಹಿಳಾ ಮತದಾರರು ಹಾಗೂ 198 ತೃತೀಯ ಲಿಂಗ ಮತದಾರರು ಸೇರಿ ದಂತೆ ಒಟ್ಟು 25,59,855 ಮತದಾರರು ಇದ್ದಾರೆ. ಇವರಲ್ಲಿ 30,650 ಯುವ ಮತ ದಾರರು ಸೇರ್ಪಡೆಯಾಗಿದ್ದಾರೆ. ವಿವಿಧ ಕಾರಣಗಳಿಂದ 22,625 ಪ್ರಕರಣಗಳನ್ನು ಕೈಬಿಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 2,905 ಮತಗಟ್ಟೆಗಳಿದ್ದು, ವಿವಿಧ ರಾಜಕೀಯ ಪಕ್ಷಗಳು ಪ್ರತಿ ಮತಗಟ್ಟೆಗೆ ರಾಜಕೀಯ ಏಜೆಂಟ್‍ಗಳನ್ನು ನೇಮಿಸಬೇಕು ಎಂದು ಮಾಹಿತಿ ನೀಡಿದರು. ಪ್ರಸಕ್ತ 2023ರ ವಾರ್ಷಿಕ ಮತದಾರರ ಪಟ್ಟಿಯ ಪರಿಷ್ಕ ರಣೆ ಸಂದರ್ಭದಲ್ಲಿ ಜನವರಿ 01ರ ಅರ್ಹತಾ ದಿನಾಂಕದ ಜೊತೆಗೆ, 01ನೇ ಏಪ್ರಿಲ್, 01ನೇ ಜುಲೈ ಮತ್ತು 01ನೇ ಅಕ್ಟೋಬರ್ ಗೆ 18 ವರ್ಷ ತುಂಬುವ ಯುವ ಮತ ದಾರರು ಮತದಾರರ ಪಟ್ಟಿಗೆ ಹೆಸರು ಸೇರಿ ಸಲು ಮುಂಗಡ ಅರ್ಜಿ ಸಲ್ಲಿಸಲು ಅವ ಕಾಶವಿದೆ. ಇದರಿಂದ 18 ವರ್ಷಗಳನ್ನು ಪೂರೈಸಿದ ಯುವಕರು ನೋಂದಣಿಗಾಗಿ ಮುಂದಿನ ವರ್ಷದ ವಿಶೇಷ ಪರಿಷ್ಕರಣೆ ವರೆಗೆ ಕಾಯುವುದನ್ನು ತಪ್ಪಿಸಲಾಗಿದೆ. ಮತ್ತು ಮಧ್ಯಂತರ ಅವಧಿಯಲ್ಲಿ ನಡೆಯುವ ಚುನಾವಣೆಗಳಲ್ಲಿ ಮತ ಚಲಾವಣೆಗೆ ಅವಕಾಶ ದೊರೆಯಲಿದೆ ಎಂದರು.

ಈ ಮೊದಲು ಒಂದು ವಿಧಾನಸಭಾ ಕ್ಷೇತ್ರದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಸ್ಥಳಾಂತರಕ್ಕಾಗಿ ಚಾಲ್ತಿಯಲ್ಲಿದ್ದ ಅರ್ಜಿ ನಮೂನೆ-8ಎ ಯನ್ನು ರದ್ದು ಪಡಿಸಲಾಗಿದೆ. ನಮೂನೆ-8ಎ ರಲ್ಲಿದ್ದ ಸೌಲಭ್ಯವನ್ನು ಪರಿಷ್ಕರಿಸಿದ ನಮೂನೆ-8ರಲ್ಲಿ ಒದಗಿಸಲಾಗಿದೆ. 2022ರ ಸೆಪ್ಟೆಂಬರ್ 1ರ ನಂತರದಲ್ಲಿ ಸೇರ್ಪಡೆ ಅಥವಾ ತಿದ್ದುಪಡಿ ಮಾಡುವ ಮತದಾರರ ಗುರು ತಿನ ಚೀಟಿಯನ್ನು ಸ್ಪೀಡ್ ಪೆÇೀಸ್ಟ್ ಮುಖಾಂತರ ಮತದಾರರಿಗೆ ವಿತರಣೆ ಮಾಡಲಾಗುವುದು. ಮತದಾರರ ಪಟ್ಟಿಯ ಪರಿಷ್ಕರಣೆಯ ಸಲುವಾಗಿ 1950 ಮತ ದಾರರ ಸಹಾಯವಾಣಿಯನ್ನು ಪ್ರಾರಂಭಿ ಸಲಾಗುತ್ತಿದ್ದು, ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳವರು ಈ ಸಹಾಯ ವಾಣಿಯ ಸದುಪಯೋಗವನ್ನು ಪಡೆದು ಕೊಳ್ಳಬೇಕೆಂದು ತಿಳಿಸಿದರು.

ಮತದಾರರ ಪಟ್ಟಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಪಿರಿಯಾಪಟ್ಟಣ ತಾಲೂಕು ಕಚೇರಿ ದೂ.ಸಂ.08223-274175, ಕೆ.ಆರ್.ನಗರ ತಾಲೂಕು ಕಚೇರಿ ದೂ.ಸಂ. 08223-262371,262234, ಹುಣಸೂರು ತಾಲೂಕು ಕಚೇರಿ ದೂ. ಸಂ.08222-252040, ಹೆಚ್.ಡಿ.ಕೋಟೆ ತಾಲೂಕು ಕಚೇರಿ ದೂ.ಸಂ.08228-255600, ನಂಜನಗೂಡು ತಾಲೂಕು ಕಚೇರಿ ದೂ.ಸಂ. 08221-223108, ಮೈಸೂರು ತಾಲೂಕು ಕಚೇರಿ ದೂ.ಸಂ.0821-2414811, 2414812, ಮೈಸೂರು ಮಹಾನಗರ ಪಾಲಿಕೆ ದೂ.ಸಂ.0821-2418800, ಟಿ.ನರಸೀಪುರ ತಾಲೂಕು ಕಚೇರಿ ದೂ.ಸಂ.-08227-260210 ಸಂಪರ್ಕಿಸಬಹುದು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಬಿ.ಎಸ್.ಮಂಜುನಾಥ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್ ಎಂ. ಹಿರಿಯ ಕಾರ್ಯದರ್ಶಿ ಉತ್ತನಹಳ್ಳಿ ಶಿವಣ್ಣ, ಬಿ.ಜೆ.ಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಗಳಾದ, ವನಿಷ್‍ಕುಮಾರ್ ಎಸ್, ಕಾರ್ಯ ದರ್ಶಿ ಪಾಪಣ್ಣ ಉಪಸ್ಥಿತರಿದ್ದರು.

Translate »