ಮೈಸೂರು, ಜು. 30- ಕೆಪಿಸಿಸಿ ಶಿಫಾರಸ್ಸಿನ ಮೇರೆಗೆ 14 ಅನರ್ಹ ಶಾಸಕರನ್ನು ಉಚ್ಚಾಟಿಸಿ ಎಐಸಿಸಿ ಆದೇಶ ಹೊರಡಿಸಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ರೆಸಾರ್ಟ್ಗೆ ತೆರಳಿ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿದ್ದ, ಅನರ್ಹ ಶಾಸಕರಾದ ರಮೇಶ್ ಜಾರಕಿಹೊಳಿ, ಮುಗುರೇಶ್ ಕುಮಟಳ್ಳಿ, ಭೈರತಿ ಬಸವರಾಜು, ಎಸ್.ಟಿ. ಸೋಮಶೇಖರ್, ಮುನಿರತ್ನ, ರೋಷನ್ ಬೇಗ್, ಪ್ರತಾಪ್ ಗೌಡ ಪಾಟೀಲ್, ಆನಂದ್ ಸಿಂಗ್, ಎಂಟಿಬಿ ನಾಗರಾಜು, ಡಾ. ಕೆ. ಸುಧಾಕರ್, ಬಿ.ಸಿ. ಪಾಟೀಲ್, ಶಿವರಾಂ ಹೆಬ್ಬಾರ್, ಶ್ರೀಮಂತ ಪಾಟೀಲ್ ಮತ್ತು ಕೆಪಿಜೆಪಿ ಶಾಸಕರಾಗಿ ಆಯ್ಕೆಯಾಗಿ ನಂತರ ಪಕ್ಷವನ್ನು ಕಾಂಗ್ರೆಸ್ನಲ್ಲಿ ವಿಲೀನ ಗೊಳಿಸಿದ್ದ ಆರ್. ಶಂಕರ್ ಅವರನ್ನು ಪಕ್ಷದಿಂದ ಉಚ್ಚಾ ಟಿಸಿ ಆದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣು ಗೋಪಲ್ ಆದೇಶ ಹೊರಡಿಸಿದ್ದಾರೆ. ಅನರ್ಹ ಶಾಸಕರು ಪ್ರತಿನಿಧಿಸಿದ್ದ ಕ್ಷೇತ್ರಗಳ ವ್ಯಾಪ್ತಿಯ ಕಾಂಗ್ರೆಸ್ ಸಮಿತಿ ಗಳನ್ನು ವಿಸರ್ಜಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ವೈ. ಘೋರ್ಪಡೆ ಆದೇಶ ಹೊರಡಿಸಿದ್ದಾರೆ.