ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರ ಸಾಲ ಮನ್ನಾ ಪ್ರಕ್ರಿಯೆ ಆರಂಭ
ಮೈಸೂರು

ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರ ಸಾಲ ಮನ್ನಾ ಪ್ರಕ್ರಿಯೆ ಆರಂಭ

November 6, 2018

ಬೆಂಗಳೂರು:  ಸಾಲ ಮನ್ನಾ ಯೋಜನೆಯ ಅನುಷ್ಠಾನದ ಪ್ರಗತಿಯನ್ನು ನಿರಂತರವಾಗಿ ಖುದ್ದು ಪರಿಶೀಲಿಸುತ್ತಿದ್ದು, ಅಧಿಕಾರಿಗಳ ತಂಡ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ಯೋಜನೆಯ ವ್ಯಾಪ್ತಿಗೆ ಬರುವ ರೈತರು ಆತಂಕಪಡುವೆ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಭೂ ದಾಖಲೆಗಳು ಮತ್ತು ಸರ್ವೇಕ್ಷಣಾ ಇಲಾಖೆಯ ಆಯುಕ್ತ ಮುನೀಶ್ ಮೌದ್ಗಿಲ್ ನೇತೃತ್ವದ ತಂಡವು ಸಾಲ ಮನ್ನಾ ಯೋಜನೆಗಾಗಿ ವಿಶೇಷ ತಂತ್ರಾಂಶ ರೂಪಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಜಾರಿಗೊಳಿಸಲು ಕ್ರಮ ವಹಿಸಲಾಗುತ್ತಿದೆ. ಸಾಲಮನ್ನಾ ಯೋಜನೆಗೆ ಅರ್ಹತೆ ಪಡೆದ ರೈತರು ಯಾರೂ ಗಾಬರಿಯಾಗಬೇಕಾಗಿಲ್ಲ ಎಂದು ಮುಖ್ಯ ಮಂತ್ರಿಗಳು ತಿಳಿಸಿದ್ದಾರೆ.
ಪ್ರಸ್ತುತ ರಾಷ್ಟ್ರೀಕೃತ ಬ್ಯಾಂಕುಗಳು ಕೃಷಿ ಸಾಲ ಪಡೆದ ರೈತರ ಮಾಹಿತಿ ಒದಗಿ ಸಿದ್ದು, ಈ ಮಾಹಿತಿಯನ್ನು ಸರ್ಕಾರ ಅಭಿವೃದ್ಧಿಪಡಿಸಿದ ತಂತ್ರಾಂಶದಲ್ಲಿ ಅಳ ವಡಿಸಿ, ಪರಿಶೀಲನೆ ನಡೆಸಲಾಗುತ್ತಿದೆ.

ಮೊದಲಿಗೆ ಸೇಡಂ ಮತ್ತು ದೊಡ್ಡ ಬಳ್ಳಾಪುರ ತಾಲೂಕುಗಳಲ್ಲಿ ನವೆಂಬರ್ 5ರಿಂದ ಪ್ರಾಯೋಗಿಕವಾಗಿ ಸಾಲ ಮನ್ನಾ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಈ ತಾಲೂಕು ಗಳ ಬ್ಯಾಂಕುಗಳ ಶಾಖೆಗಳು ಮಾಹಿತಿ ಪರಿಶೀಲನೆ ಪೂರ್ಣಗೊಳಿಸಿದ ನಂತರ ನವೆಂಬರ್ 12ರಿಂದ ರೈತರು ತಾವು ಸಾಲ ಪಡೆದ ಬ್ಯಾಂಕಿಗೆ ಭೇಟಿ ನೀಡಿ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಅವರು ಹೊಂದಿರುವ ಕೃಷಿ ಭೂಮಿಯ ಮಾಹಿತಿ ಒದಗಿಸುವಂತೆ ಸೂಚಿಸಲಾಗುವುದು. ನಂತರ ಇತರ ತಾಲೂಕುಗಳಲ್ಲಿ ಈ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸಹಕಾರಿ ಬ್ಯಾಂಕುಗಳಲ್ಲಿ ಈಗಾಗಲೇ ಮಾಹಿತಿ ಪರಿಶೀಲನಾ ಪ್ರಕ್ರಿಯೆ ಆರಂಭ ವಾಗಿದ್ದು, ನವೆಂಬರ್ ಅಂತ್ಯದೊಳಗೆ 6000 ಶಾಖೆಗಳ 20 ಲಕ್ಷ ರೈತರ ಮಾಹಿತಿ ಪರಿಶೀಲನೆ ನಡೆಸಲಾಗುವುದು.

ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಈ ಯೋಜನೆಯ ಅನುಷ್ಠಾನಕ್ಕೆ ನೋಡಲ್ ಅಧಿಕಾರಿಗಳಾಗಿರುತ್ತಾರೆ. ಈ ಯೋಜನೆ ಕುರಿತು ರೈತರ ಸಂದೇಹಗಳನ್ನು ಬಗೆಹರಿ ಸಲು ಶೀಘ್ರವೇ ಸಹಾಯವಾಣಿ ಪ್ರಾರಂ ಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ರೈತರಿಗೆ ಆಕ್ಸಿಸ್ ಬ್ಯಾಂಕ್ ಕೋಲ್ಕೊತ್ತಾದ ನ್ಯಾಯಾಲಯ ದಲ್ಲಿ ಮೊಕದ್ದಮೆ ಹೂಡಿದ್ದು, ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ , ಸಮಸ್ಯೆ ಬಗೆಹರಿಸುವಂತೆ ಇಂದೂ ಸಹ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಗಳಿಗೆ ಸೂಚಿಸಿದ್ದಾರೆ.

ರೈತರು ಹಾಗೂ ಆಕ್ಸಿಸ್ ಬ್ಯಾಂಕಿನ ಅಧಿ ಕಾರಿಗಳೊಂದಿಗೆ ಸಂಧಾನ ಸಭೆ ನಡೆಸು ವಂತೆ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದು ಅದರಂತೆ ಜಿಲ್ಲಾಧಿಕಾರಿಗಳು ನ.7 ರಂದು ಬ್ಯಾಂಕ್ ಅಧಿಕಾರಿಗಳು, ರೈತರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ರೈತರ ಸಮಸ್ಯೆಗಳಿಗೆ ಬ್ಯಾಂಕಿನ ಅಧಿಕಾರಿಗಳೊಂದಿಗೆ ಚರ್ಚಿಸಿ ಸೌಹಾರ್ದಯುತವಾಗಿ ರೈತರಿಗೆ ತೊಂದರೆಯಾಗದಂತೆ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Translate »