ರೈತರು, ನಾಗರಿಕರಿಗೆ ಸುಲಭ ಸಾಲಕ್ಕಾಗಿ ಗ್ರಾಪಂಗೊಂದು `ಪ್ಯಾಕ್ಸ್’ ಸ್ಥಾಪನೆ
ಮೈಸೂರು

ರೈತರು, ನಾಗರಿಕರಿಗೆ ಸುಲಭ ಸಾಲಕ್ಕಾಗಿ ಗ್ರಾಪಂಗೊಂದು `ಪ್ಯಾಕ್ಸ್’ ಸ್ಥಾಪನೆ

March 3, 2021

ಬೆಂಗಳೂರು, ಮಾ.2(ಕೆಎಂಶಿ)-ಸುಲಭವಾಗಿ ರೈತರಿಗೆ ಮತ್ತು ನಾಗರಿಕರಿಗೆ ಸಾಲ ದೊರೆಯಬೇಕು ಎಂಬ ಹಿನ್ನೆಲೆಯಲ್ಲಿ ಪ್ರತಿ ಗ್ರಾಮ ಪಂಚಾ ಯಿತಿಗೊಂದು ಸಹಕಾರ ಪತ್ತಿನ ಸಹಕಾರ ಸಂಘ (ಪ್ಯಾಕ್ಸ್)ವನ್ನು ಸ್ಥಾಪನೆ ಮಾಡ ಲಾಗುವುದು ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯ ಮಂತ್ರಿಗಳು ಈ ಸಂಬಂಧ ಅಧಿಕೃತ ಘೋಷಣೆ ಹೊರ ಗೆಡವಲಿದ್ದಾರೆ ಎಂದರು. ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಸಹಕಾರಿ ಇಲಾಖೆಯಡಿ ಬರುವ ಸಂಸ್ಥೆಗಳಲ್ಲಿ 5 ಸಾವಿರ ಹುದ್ದೆಗಳನ್ನು ಸೃಷ್ಟಿಸಲು ತೀರ್ಮಾನಿ ಸಿದ್ದು, ಈಗಾಗಲೇ ಪ್ರಕ್ರಿಯೆ ಆರಂಭಗೊಂಡಿದೆ ಎಂದರು.

ಆತ್ಮನಿರ್ಭರ ಯೋಜನೆಯ ಅನುಷ್ಠಾನದಲ್ಲಿ ದೇಶ ದಲ್ಲಿಯೇ ಕರ್ನಾಟಕ ರಾಜ್ಯವು ಮುಂದಿದೆ. ಈ ಮೂಲಕ ಪ್ರಥಮ ಸ್ಥಾನದಲ್ಲಿ ಈ ಯೋಜನೆಯನ್ನು ಅನುಷ್ಠಾನ ಗೊಳಿಸಿದ್ದು, ಇದಕ್ಕೆ ಕೇಂದ್ರ ಹಾಗೂ ನಬಾರ್ಡ್ ಸಹ ಶ್ಲಾಘನೆ ವ್ಯಕ್ತಪಡಿಸಿದೆ. ಆತ್ಮನಿರ್ಭರ ಯೋಜನೆಯಡಿ 1 ಸಾವಿರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಪ್ರತಿ ಸಂಘಕ್ಕೆ 2 ಕೋಟಿ ರೂಪಾಯಿಯಂತೆ ಸಾಲ ನೀಡಿಕೆಗೆ ಅವಕಾಶವಿದ್ದು, ಈ ಪೈಕಿ 1549 ಸಹಕಾರ ಸಂಘಗಳನ್ನು ಗುರುತಿಸಿ, 949 ಪ್ಯಾಕ್ಸ್ ಗಳಿಗೆ ಪ್ರಸ್ತಾವನೆ ಸಲ್ಲಿಕೆಯಾ ಗಿತ್ತು. ಇದರಲ್ಲಿ 614 ಪ್ಯಾಕ್ಸ್‍ಗಳಿಗೆ 198.96 ಕೋಟಿ ರೂ. ಮಂಜೂರಾಗಿರುತ್ತದೆ ಎಂದರು. ಹೀಗಾಗಿ ಇದರ ಅನುಷ್ಠಾನಕ್ಕಾಗಿ 21 ಡಿಸಿಸಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್ ಹಾಗೂ ಪ್ಯಾಕ್ಸ್‍ಗಳ ಮುಖಾಂತರ ಸಮರ್ಪಕವಾಗಿ ಕಾರ್ಯ ನಿರ್ವಹಿ ಸಿವೆ. ಇದಕ್ಕೋಸ್ಕರ ಅಧಿಕಾರಿಗಳ ಹಾಗೂ ಆಡಳಿತ ಮಂಡಳಿ ಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಸಚಿವರು ಹೇಳಿದರು.

ಇಲ್ಲಿಯವರೆಗೆ ಒಟ್ಟು 21.64 ಲಕ್ಷ ರೈತರಿಗೆ ರೂ.141 79.22 ಕೋಟಿಗಳ, ಅಲ್ಪಾವಧಿ ಕೃಷಿ ಸಾಲ ಮತ್ತು 0.36 ಲಕ್ಷ ರೈತರಿಗೆ ರೂ.800.51 ಕೋಟಿಗಳ ಮಧ್ಯಮಾ ವಧಿ/ದೀರ್ಘಾವಧಿ ಸಾಲ ವಿತರಣೆ ಮಾಡಿದ್ದು, ಒಟ್ಟು ರೂ. 14979.73 ವಿತರಿಸಲಾಗಿದೆ ಹಾಗೂ ಶೇ.90.56 ರ ಪ್ರಗತಿ ಸಾಧಿಸಲಾಗಿದೆ ಎಂದು ಎಸ್.ಟಿ.ಸೋಮ ಶೇಖರ್ ಮಾಹಿತಿ ನೀಡಿದರು. ಅಲ್ಪಾವಧಿ ಸಾಲ ಶೇ.107, ಮಧ್ಯಾವಧಿ ಸಾಲ ಶೇ.111, ದೀರ್ಘಾವಧಿ ಸಾಲ ಶೇ.76, ಸ್ವಸಹಾಯ ಗುಂಪುಗಳ ಸಾಲ ಶೇ.71, ಕಾಯಕ ಯೋಜನೆಯಡಿ ಶೇ.61, ಬಡವರಬಂಧು ಯೋಜನೆ ಯಡಿ ಶೇ.52, ಹೈನುಗಾರಿಕೆ /ಮೀನುಗಾರಿಕೆ ಯೋಜನೆ ಯಡಿ ಶೇ.97, ಕೃಷಿಯೇತರ ಸಾಲದಲ್ಲಿ ಶೇ. 92, ಪಟ್ಟಣ ಬ್ಯಾಂಕ್ ಗಳಲ್ಲಿ ಶೇ. 87, ಕ್ರೆಡಿಟ್ ಸೊಸೈಟಿಯಲ್ಲಿ ಶೇ.92 ಹಾಗೂ ವಿವಿಧೋದ್ದೇಶ ಯೋಜನೆಗಳಡಿ ಶೇ.90ರಷ್ಟು ಸಾಲ ನೀಡಲಾಗಿದ್ದು, ಒಟ್ಟಾರೆಯಾಗಿ ಶೇ. 96 ಸಾಲವಿತರಣೆಯಲ್ಲಿ ಗುರಿ ಮುಟ್ಟಲಾಗಿದೆ. ಹಾಕಿದ ಗುರಿಯನ್ನು ಈ ತಿಂಗಳೊಳಗೆ ಮುಟ್ಟುವಂತೆ ಅಧಿಕಾರಿ ಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಈಗಾಗಲೇ ಸಾಲಮನ್ನಾ ಬಾಕಿ ಮೊತ್ತ 295.14 ಕೋಟಿ ರೂ. ಬಿಡುಗಡೆಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇನ್ನು 40 ಸಾವಿರ ರೈತರಿಗೆ ಪ್ರಯೋಜನ ಸಿಗಬೇಕಿದ್ದು, ಈ ಬಗ್ಗೆ ವಿವರವನ್ನು ಕಲೆ ಹಾಕಿ ಬಜೆಟ್ ಅನುದಾನದಲ್ಲಿ ಸೇರಿಸಿ ಘೋಷಿಸಲಾಗುವುದು ಎಂದು ಸೋಮಶೇಖರ್ ತಿಳಿಸಿದರು. ಸಾಲಮನ್ನಾ ಯೋಜನೆಯ ಹಣವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದಾರೆಂಬ ಮಾಹಿತಿ ಬಂದಿದೆ. ಹೀಗಾಗಿ ಶೀಘ್ರದಲ್ಲಿ ಉಳಿದ ಬಾಕಿದಾರರ ಬಗ್ಗೆಯೂ ಗಮನಹರಿಸಿದ್ದೇವೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

Translate »