ಕಾಡಾನೆ ಹಾವಳಿ ತಡೆಗೆ ಮೈಸೂರು-ಕೊಡಗು ಸೇರಿ ನಾಲ್ಕು ಜಿಲ್ಲೆಗಳಲ್ಲಿ ಟಾಸ್ಕ್‍ಫೋರ್ಸ್ ರಚನೆ

ಬೆಂಗಳೂರು, ನ.21(ಕೆಎಂಶಿ)- ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಆನೆ ಟಾಸ್ಕ್ ಫೆÇೀರ್ಸ್ ರಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆ ಯಲ್ಲಿ ಇಂದು ನಡೆದ ಸಭೆಯಲ್ಲಿ ನಿರ್ಧ ರಿಸಿ, ಸರ್ಕಾರಿ ಆದೇಶ ಹೊರಬಿದ್ದಿದೆ.

ಹಾಸನ, ಚಿಕ್ಕಮಗಳೂರು, ಮೈಸೂರು, ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ಹೆಚ್ಚಳವಾಗಿರುವುದರಿಂದ ಇದನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಉಪಅರಣ್ಯ ಸಂರಕ್ಷಣಾಧಿಕಾರಿ ಗಳ ಅಧ್ಯಕ್ಷತೆಯಲ್ಲಿ ಎಲಿಫೆಂಟ್ ಟಾಸ್ಕ್‍ಫೆÇೀರ್ಸ್ ರಚಿಸಲಾಗುವುದು. ಟಾಸ್ಕ್‍ಫೆÇೀರ್ಸ್‍ಗಳನ್ನು ತಕ್ಷಣ ದಿಂದಲೇ ರಚಿಸಿ ಕಾರ್ಯಪ್ರವೃತ್ತರಾಗಬೇಕಿದ್ದು, ಆಯಾ ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ ಈ ಕೆಳಕಂಡಂತೆ ಕಾರ್ಯನಿರ್ವಹಿಸ ಬೇಕಿದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ. ಕಾಡಾನೆ ಹಾವಳಿ ಇರುವ ಪ್ರದೇಶಗಳಲ್ಲಿ ಗಸ್ತು ತಿರುಗುವುದು, ಜನವಸತಿ, ಕೃಷಿ ಪ್ರದೇಶ ಹಾಗೂ ಕಾಫಿ ಎಸ್ಟೇಟ್‍ಗಳಲ್ಲಿ ಆನೆಗಳ ಚಲನವಲನ ಗುರುತಿಸಿ ಅರಣ್ಯಕ್ಕೆ ಆನೆಗಳನ್ನು ಹಿಮ್ಮೆಟ್ಟಿಸು ವುದು ಮುಂತಾದ ಕಾರ್ಯಗಳನ್ನು ಉಪ ಅರಣ್ಯ ಸಂರಕ್ಷ ಣಾಧಿಕಾರಿಗಳ ನಿರ್ದೇಶನದಲ್ಲಿ ಕೈಗೊಳ್ಳಬೇಕು.

ಕಾಡಾನೆ ಹಾವಳಿ ಕಂಡುಬರುವ ಸ್ಥಳಗಳಲ್ಲಿ ಆನೆಗಳ ಚಲನವಲನಗಳ ಬಗ್ಗೆ ಮಾಹಿತಿ ನೀಡುವುದು ಹಾಗೂ ಅರಣ್ಯ ಪ್ರದೇಶದೊಳಗೆ ಸಂಚರಿಸದಂತೆ ಸಾರ್ವಜನಿಕ ರಿಗೆ ಅರಿವು ಮೂಡಿಸುವುದು. ಪ್ರತಿ ಟಾಸ್ಕ್ ಫೆÇೀರ್ಸ್ ಕೇಂದ್ರಸ್ಥಾನದಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಿ ದೂರವಾಣಿ ಸಂಖ್ಯೆಯನ್ನು ಪ್ರಚುರಪಡಿಸುವುದು. ಆನೆಗಳನ್ನು ಹಿಮ್ಮೆಟ್ಟಿ ಸಲು ಅಗತ್ಯವಿರುವ ವಾಕಿಟಾಕಿ, ಬಂದೂಕು, ಪಟಾಕಿ ಇನ್ನಿತರೆ ಅವಶ್ಯಕ ಸಲಕರಣೆಗಳನ್ನು ಅರಣ್ಯ ಪಡೆ ಮುಖ್ಯಸ್ಥರು ಒದಗಿಸುವುದು. ಅರಣ್ಯ ಪಡೆ ಮುಖ್ಯಸ್ಥರು ಜಿಲ್ಲಾ ಟಾಸ್ಕ್ ಫೆÇೀರ್ಸ್‍ಗೆ ವಲಯ ಅರಣ್ಯಾಧಿಕಾರಿ, ಉಪವಲಯ ಅರಣ್ಯಾಧಿಕಾರಿ ಹಾಗೂ ಅರಣ್ಯ ರಕ್ಷಕರನ್ನು ಸ್ಥಳ ನಿಯುಕ್ತಿ ಗೊಳಿಸಿ ಕೂಡಲೇ ಆದೇಶ ಹೊರಡಿಸುವುದು. ಆನೆ ಹಾವಳಿ ಪ್ರದೇಶಗಳಿಗೆ ಕೂಡಲೇ ತಲುಪಲು ಅನುಕೂಲ ವಾಗುವಂತೆ ಪ್ರತಿ ಜಿಲ್ಲಾ ಟಾಸ್ಕ್‍ಪೆÇೀರ್ಸ್‍ಗೆ ಮೂರು ಬೊಲೆರೋ ಜೀಪ್‍ಗಳನ್ನು ಒದಗಿಸುವುದು ಹಾಗೂ ಕ್ಯಾಂಟರ್ ವಾಹನಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನಿಯೋಜಿಸುವುದು. ಆನೆಗಳನ್ನು ಹಿಮ್ಮೆಟ್ಟಿಸುವ ಸಂದರ್ಭಗಳಲ್ಲಿ ಪೆÇಲೀಸ್ ಇಲಾಖೆ ಸಹಾಯ ಪಡೆಯು ವುದು ಎಂದು ಆದೇಶದಲ್ಲಿ ಸೂಚಿಸಲಾಗಿದೆ.