ಮೈಸೂರಿನ ಹಿಂದಿನ ಡಿಸಿ ಬಿ.ಶರತ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಮೈಸೂರು

ಮೈಸೂರಿನ ಹಿಂದಿನ ಡಿಸಿ ಬಿ.ಶರತ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

October 19, 2020

ಮೈಸೂರು, ಅ.18-ಹಠಾತ್ ವರ್ಗಾವಣೆಯಿಂದ ಖಿನ್ನತೆಗೊಳಗಾಗಿದ್ದ ಐಎಎಸ್ ಅಧಿಕಾರಿ ಬಿ.ಶರತ್ ತೀವ್ರ ಅಸ್ವಸ್ಥರಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿಯಾಗಿ ಕೊರೊನಾ ನಿಯಂ ತ್ರಣದಲ್ಲಿ ಮಹತ್ವದ ಪಾತ್ರ ವಹಿಸಿದ್ದ ಶರತ್ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಇವರ ವರ್ಗಾವಣೆ ರದ್ದುಪಡಿಸುವಂತೆ ಕಲಬುರಗಿ ಯಲ್ಲಿ ಸಾಕಷ್ಟು ಪ್ರತಿಭಟನೆಗಳು ನಡೆದಿದ್ದವು. ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾ ವಣೆಯಾದ ಕೇವಲ 29 ದಿನಗಳಲ್ಲೇ ಅವರನ್ನು ಸ್ಥಳ ತೋರಿಸದೇ ವರ್ಗಾವಣೆ ಮಾಡಿ ಅವರ ಸ್ಥಳಕ್ಕೆ ರೋಹಿಣಿ ಸಿಂಧೂರಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇವರ ವರ್ಗಾವಣೆ ವಿರುದ್ಧ ಮೈಸೂರಿನಲ್ಲೂ ಕೂಡ ಪ್ರತಿಭಟನೆಗಳು ನಡೆದಿದ್ದವು. ಕೇವಲ 29 ದಿನಗಳಲ್ಲೇ ಮೈಸೂರು ಜಿಲ್ಲಾಧಿಕಾರಿ ಸ್ಥಾನದಿಂದ ತಮ್ಮನ್ನು ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಶರತ್ ಅವರು ಸಿಎಟಿ ಮೊರೆ ಹೋಗಿದ್ದು, ವಿಚಾರಣೆ ಮುಂದೂಡಲ್ಪಟ್ಟಿದೆ. ಈ ಎಲ್ಲಾ ಬೆಳವಣಿಗೆಗಳಿಂದ ಖಿನ್ನತೆಗೊಳಗಾಗಿದ್ದ ಶರತ್ ಅವರು, ಶನಿವಾರ ಸಂಜೆ ಅಸ್ವಸ್ಥರಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

 

Translate »