ಕೊರೊನಾ ಲಸಿಕೆ ಅಮೃತ ಮಹೋತ್ಸವ ಅಭಿಯಾನದ ಅಂಗವಾಗಿ ೧೮ ವರ್ಷ ಮೇಲ್ಪಟ್ಟವರಿಗೆ ೭೫ ದಿನ ಮುನ್ನೆಚ್ಚರಿಕಾ ಉಚಿತ ಡೋಸ್
ಮೈಸೂರು

ಕೊರೊನಾ ಲಸಿಕೆ ಅಮೃತ ಮಹೋತ್ಸವ ಅಭಿಯಾನದ ಅಂಗವಾಗಿ ೧೮ ವರ್ಷ ಮೇಲ್ಪಟ್ಟವರಿಗೆ ೭೫ ದಿನ ಮುನ್ನೆಚ್ಚರಿಕಾ ಉಚಿತ ಡೋಸ್

July 17, 2022

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟ

೭೫೦೦ ಕೇಂದ್ರಗಳಲ್ಲಿ ಲಸಿಕಾ ವ್ಯವಸ್ಥೆ

ಬೆಂಗಳೂರು, ಜು.೧೬(ಕೆಎಂಶಿ)-ಕೊರೊನಾ ಲಸಿಕೆ ಅಮೃತ ಮಹೋತ್ಸವ ಅಭಿಯಾನದ ಅಂಗ ವಾಗಿ ಮುಂದಿನ ೭೫ ದಿನಗಳವರೆಗೆ ೧೮ ವರ್ಷ ಮೇಲ್ಪಟ್ಟ ನಾಗರಿಕರು ಉಚಿತವಾಗಿ ಮುನ್ನೆಚ್ಚರಿಕಾ ಡೋಸ್ ಕೋವಿಡ್ ಲಸಿಕೆ ಪಡೆದುಕೊಳ್ಳಲು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.

ಆರೋಗ್ಯ ಇಲಾಖೆ ಆಯೋಜಿಸಿದ್ದ ೧೮ ವರ್ಷ ಮೇಲ್ಪಟ್ಟ ನಾಗರಿಕರಿಗೆ ಮುನ್ನೆಚ್ಚರಿಕಾ ಡೋಸ್ ನೀಡುವ ಕೋವಿಡ್ ಲಸಿಕಾಕರಣ ಅಮೃತ ಅಭಿ ಯಾನ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿ, ಮಾತನಾಡಿದರು. ಕರ್ನಾಟಕದಲ್ಲಿ ೭೫ ದಿನಗಳ ಲಸಿಕೆ ಅಭಿಯಾನದಲ್ಲಿ ೭೫೦೦ ಕೇಂದ್ರಗಳಲ್ಲಿ ಲಸಿಕೆ ಗಳನ್ನು ನಿರಂತರವಾಗಿ ನೀಡಲಾಗುತ್ತಿದ್ದು, ಆರೋಗ್ಯ ಕಾರ್ಯಕರ್ತರು ಅಭಿಯಾನ ರೀತಿಯಲ್ಲಿ ಕೆಲಸ ಮಾಡಲು ಸರ್ಕಾರ ಎಲ್ಲ ಸಹಕಾರ ನೀಡಲಿದೆ. ಆರೋಗ್ಯವಂತ ಸಮಾಜ, ಆರ್ಥಿಕವಾಗಿ ಸಬಲ ವಾದ ಸಮಾಜವನ್ನು ನಿರ್ಮಿಸುತ್ತದೆ. ಆರೋಗ್ಯ, ಶಿಕ್ಷಣ ಸರಿಯಾಗಿದ್ದರೆ ಮಾತ್ರ ರಾಜ್ಯ ಪ್ರಗತಿ ಹೊಂದಲು ಸಾಧ್ಯ. ಈ ದಿಸೆಯಲ್ಲಿ ಲಸಿಕೆ ಅಭಿಯಾನ ಮಹತ್ವದ ಹೆಜ್ಜೆಯಾಗಿದೆ ಎಂದರು. ಕೋವಿಡ್ ಬಂದವರಲ್ಲಿ ಕೋವಿಡ್ ನಂತರ ಪರಿಣಾಮಗಳು ಇದ್ದೇ ಇರುತ್ತದೆ. ಈ ಪರಿಣಾಮಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿ ಸುವ ಮೂಲಕ ಅದನ್ನು
ಕುಗ್ಗಿಸಬಹುದಾಗಿದೆ. ಈ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಕೇಂದ್ರ ಸರ್ಕಾರ ಕ್ರಮ ಗಳನ್ನು ತೆಗೆದುಕೊಳ್ಳಲು ಸೂಚಿಸಿದೆ. ಕೇಂದ್ರ ಸರ್ಕಾರ ‘ಹರ್ ಘರ್ ದಸ್ತಕ್’ ಅಭಿಯಾನದ ಮೂಲಕ ಮನೆ ಮನೆಗೆ ತೆರಳಿ ಲಸಿಕೆ ನೀಡುವ ಕಾರ್ಯಕ್ರಮ ನಡೆಸುತ್ತಿದೆ ಎಂದರು.

ವೈದ್ಯರು, ಅಧಿಕಾರಿಗಳು, ನರ್ಸುಗಳು, ಅರೆ ವೈದ್ಯಕೀಯ ಸಿಬ್ಬಂದಿ ಕೋವಿಡ್ ಸಂದರ್ಭದಲ್ಲಿ ನಾಯಕರಾಗಿ ಕೆಲಸ ಮಾಡಿದ್ದಾರೆ. ಕೋವಿಡ್ ಸೋಂಕಿತರಿಗೆ ಚಿಕಿತ್ಸೆ, ಲಸಿಕೆ ಬಗ್ಗೆ ಅರಿವು ಮೂಡಿಸಿರುವ ಅವರ ನಿಸ್ವಾರ್ಥ ಸೇವೆಯನ್ನು ಸರ್ಕಾರ ಗುರುತಿ ಸುತ್ತದೆ. ಅದರ ಪರಿಣಾಮ ರಾಜ್ಯದಲ್ಲಿ ಕೋವಿಡ್ ಮೊದಲ ಡೋಸ್ ೧೦೨% ಸಾಧನೆ, ೫.೪೯ ಕೋಟಿ ಲಸಿಕೆಗಳನ್ನು ನೀಡಲಾಗಿದೆ. ಎರಡನೇ ಡೋಸ್ ೫.೪೨ ಕೋಟಿ ಆಗಿದೆ. ಇದೊಂದು ಅದ್ಭುತವಾದ ಸಾಧನೆ. ಲಸಿಕೆ ಅಭಿಯಾನದಲ್ಲಿ ಭಾಗವಹಿಸಿರುವ ವೈದ್ಯರು, ಅಧಿಕಾರಿಗಳು, ನರ್ಸುಗಳು, ಅರೆ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತರು, ಪೊಲೀಸ್ ಸೇರಿದಂತೆ ಎಲ್ಲರಿಗೂ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು. ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ೧೮ ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕಾ ಡೋಸ್ ಅನ್ನು ಉಚಿತವಾಗಿ ನೀಡಲು ಆದೇಶಿಸಿದ್ದು, ಲಸಿಕೆಗಳನ್ನು ಪೂರೈಸಿದ್ದಾರೆ. ಇದೊಂದು ಮಹತ್ವಾಕಾಂಕ್ಷೆಯ ಕಾರ್ಯಕ್ರಮ. ಹಲವಾರು ಸಾಂಕ್ರಾಮಿಕ ರೋಗಗಳು ಕಾಣ ಸಿಕೊಂಡಾಗ ಲಸಿಕೀಕರಣ ಮಹತ್ವದ ಕೆಲಸವನ್ನು ಮಾಡಿದೆ.

ಮೊದಲು ರೋಗ ಉಲ್ಬಣವಾಗಿ ನಾಲ್ಕೆöÊದು ವರ್ಷಗಳ ನಂತರ ರೋಗಕ್ಕೆ ಲಸಿಕೆಗಳನ್ನು ವಿದೇಶದಲ್ಲಿ ಕಂಡುಹಿಡಿಯಲಾಗುತ್ತಿತ್ತು. ನಂತರ ದೊಡ್ಡ ಪ್ರಮಾಣದಲ್ಲಿ ಉತ್ಪಾದಿಸಿ ಭಾರತಕ್ಕೆ ಬರುವ ವೇಳೆಗೆ ೧೦-೧೨ ವರ್ಷಗಳು ಬೇಕಾಗುತ್ತಿತ್ತು. ಈಗ ಭಾರತದೇಶದಲ್ಲಿಯೇ ಲಸಿಕೆಗಳನ್ನು ತಯಾರಿಸಿ, ೧೩೦ ಕೋಟಿ ಜನಸಂಖ್ಯೆಗೆ ಯಶಸ್ವಿಯಾಗಿ ನೀಡಿ ಸಾಂಕ್ರಾಮಿಕವನ್ನು ನಿರ್ವಹಣೆಯೊಂದಿಗೆ ನಿಯಂತ್ರಣವನ್ನೂ ಮಾಡಲಾಯಿತು. ವಿದೇಶಗಳಿಗೂ ರಫುö್ತ ಮಾಡಲಾಯಿತು. ಇದು ನಮ್ಮ ವಿಜ್ಞಾನಿಗಳ ವಿಶ್ವಾಸವನ್ನು ಬಿಂಬಿಸುತ್ತದೆ.

Translate »