ಇಂದಿನಿಂದ ಭತ್ತ ಖರೀದಿ ಕೇಂದ್ರ ಆರಂಭ
ಚಾಮರಾಜನಗರ

ಇಂದಿನಿಂದ ಭತ್ತ ಖರೀದಿ ಕೇಂದ್ರ ಆರಂಭ

July 30, 2018

ಚಾಮರಾಜನಗರ:  ಸರ್ಕಾ ರದ ಕನಿಷ್ಟ ಬೆಂಬಲ ಬೆಲೆ ಯೋಜನೆ ಯಡಿ ರೈತರಿಂದ ಭತ್ತ ಖರೀದಿಸುವ ಸಲುವಾಗಿ ಜುಲೈ 30 ರಿಂದ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ ಎಂದು ಡಿಸಿ ಬಿ.ಬಿ.ಕಾವೇರಿ ತಿಳಿಸಿದ್ದಾರೆ.

ಚಾಮರಾಜನಗರ ತಾಲೂಕಿನ ಸಂತೇಮರ ಹಳ್ಳಿಯ ಎಪಿಎಂಸಿ ಆವರಣ ಮತ್ತು ಕೊಳ್ಳೇ ಗಾಲದ ಎಪಿಎಂಸಿ ಆವರಣದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ.

ಸರ್ಕಾರದ ಆದೇಶದಂತೆ ಖರೀದಿ ಪ್ರಕ್ರಿಯೆ ನಡೆಯಲಿದೆ. ಜುಲೈ 30 ರಿಂದ ಆಗಸ್ಟ್ 14ರ ವರೆಗೆ ರೈತರ ನೋಂದಣಿ ಕಾರ್ಯ ನಡೆಯಲಿದೆ. ತದನಂತರ ನೋಂದಣಿಯಾದ ರೈತರಿಂದ ಭತ್ತ ಖರೀದಿಸಲಾಗುತ್ತದೆ. ಸಾಮಾನ್ಯ ಭತ್ತವನ್ನು ಪ್ರತಿ ಕ್ವಿಂಟಾಲ್‍ಗೆ 1550ರೂ. ದರದಲ್ಲಿ ಖರೀದಿಸಲಾಗುತ್ತದೆ. ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಮಾತ್ರ ಭತ್ತ ಖರೀದಿಸ ಲಾಗುವುದು. ಗರಿಷ್ಠ 75 ಕ್ವಿಂಟಾಲ್‍ಗೆ ಮೀರದಂತೆ ಖರೀದಿಸಲು ಆದೇಶವಾ ಗಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಖರೀದಿ ಏಜೆ ನ್ಸಿಯನ್ನಾಗಿ ನೇಮಿಸಲಾಗಿದೆ.

ಆಧಾರ್ ನೊಂದಣಿ ಇರುವ ರೈತರಿಂದ ಮಾತ್ರ ಭತ್ತ ಖರೀದಿ ಮಾಡಲಾಗುತ್ತದೆ. ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯನ್ನು ತಂತ್ರಾಂಶದಲ್ಲಿ ನೋಂದಾಯಿಸಿ ಖರೀದಿಸಿದ ರೈತರ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲಾಗುತ್ತದೆ. ಜಿಲ್ಲೆಯ ರೈತರು ಬೆಂಬಲ ಬೆಲೆ ಯೋಜನೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ.ಬಿ ಕಾವೇರಿ ಮನವಿ ಮಾಡಿಕೊಂಡಿದ್ದಾರೆ.

Translate »