ಭವ್ಯ ಭಾರತಕಟ್ಟಲುಯುವಜನತೆ ಸನ್ನದ್ಧರಾಗಿ
News

ಭವ್ಯ ಭಾರತಕಟ್ಟಲುಯುವಜನತೆ ಸನ್ನದ್ಧರಾಗಿ

August 14, 2022

ಬೆಂಗಳೂರು, ಆ. 13(ಕೆಎಂಶಿ)- ಭವ್ಯ ಭಾರತಕಟ್ಟಲುಯುವಜನತೆ ಸನ್ನದ್ಧರಾಗಬೇಕು. ದೇಶ ಮೊದಲು, ದೇಶದನಂತರ ನಾವೆಲ್ಲರೂಎಂಬುದನ್ನು ಪ್ರತಿ ಪಾದಿಸಬೇಕು. ಸಂಕುಚಿತ, ಸ್ವಾರ್ಥ ಮನೋ ಭಾವನೆಯನ್ನುತೊರೆದು, ದೇಶಕ್ಕಾಗಿ ನಿಲ್ಲುವಕರ್ತವ್ಯ ನಮ್ಮೆಲ್ಲರದ್ದಾಗಿದೆಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯುವಜನತೆಗೆಕರೆ ನೀಡಿದರು.

ಅವರುಇಂದುಕನ್ನಡ ಮತ್ತು ಸಂಸ್ಕೃತಿಇಲಾಖೆಯ ವತಿಯಿಂದ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಸ್ವಾತಂತ್ರ್ಯಅಮೃತ ಮಹೋತ್ಸವದ ಅಂಗವಾಗಿ ಹರ್‍ಘರ್‍ತಿರಂಗಾಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಸ್ವಾತಂತ್ರ್ಯಪೂರ್ವದಲ್ಲಿಜನರುದೇಶಕ್ಕಾಗಿ ಪ್ರಾಣಕೊಡುತ್ತಿದ್ದರು. ಈಗ ದೇಶಕ್ಕಾಗಿ ಬದುಕಿ, ದುಡಿಯಬೇಕು. ಭವ್ಯ ಭಾರತದ ನಿರ್ಮಾಣದಲ್ಲಿಯುವಕರುತಮ್ಮದುಡಿಮೆಯ ಮೂಲಕ ಪಾಲನ್ನು ನೀಡ ಬೇಕು. ಇನ್ನು ಮುಂದಿನ 25 ವರ್ಷಗಳ ಕಾಲ ದೇಶಕ್ಕಾಗಿ ನಾನೇನು ಮಾಡಿದ್ದೇನೆಎಂಬುದಕ್ಕೆಉತ್ತರ ಕಂಡುಕೊಳ್ಳಬೇಕಾಗಿದೆ.

ಯುವಕರೆಂದರೆ ಶಕ್ತಿ, ಯುವಕರೆಂದರೆ ಭವಿಷ್ಯ. ನಮ್ಮ ನಾಡಿಗೆ ನವಕರ್ನಾಟಕ ದಿಂದ ನವಭಾರತ ನಿರ್ಮಾಣ ಮಾಡ ಬೇಕಿದೆ. ಪ್ರಧಾನಮಂತ್ರಿಗಳು 5 ಟ್ರಿಲಿಯನ್‍ಡಾಲರ್‍ಆರ್ಥಿಕತೆಯ ಸಂಕಲ್ಪ ಮಾಡಿದ್ದು, ಅದಕ್ಕೆಕರ್ನಾಟಕದಿಂದ 1 ಟ್ರಿಲಿಯನ್‍ಡಾಲರ್‍ಆರ್ಥಿಕತೆಯಕೊಡುಗೆಯನ್ನು ನೀಡುವಗುರಿಇದೆಎಂದರು. ಯುವಕರು ಭಾರತದ ಮುಂದಿನ ಭವಿಷ್ಯವನ್ನು ನಿರ್ಮಿಸುವ ಭಾಗ್ಯಶಾಲಿಗಳು. 75 ವರ್ಷ ವ್ಯಕ್ತಿಗಾದರೆದೊಡ್ಡ ವಯಸ್ಸು. ಅದೇದೇಶಕ್ಕಾದರೆ ನವ ತರುಣನ ವಯಸ್ಸು. ಯುವಕರಿಗೆ ಸೇರಿರುವಯುವದೇಶ ಭವ್ಯ ಭವಿಷ್ಯವಿರುವದೇಶ ನಮ್ಮದು. 46 % ಯುವಶಕ್ತಿಇರುವದೇಶ ಭಾರತ. ಸರ್ಕಾರದ ವತಿಯಿಂದ 1 ಕೋಟಿ 8 ಲಕ್ಷ ಧ್ವಜಗಳನ್ನು ನೀಡಿದ್ದೇವೆ. ಜನ ಸ್ವಪ್ರೇರಣೆಯಿಂದಧ್ವಜಕೊಂಡಿದ್ದಾರೆ.

25 ಲಕ್ಷ ಮನೆಗಳ ಮೇಲೆ ಧ್ವಜ ಹಾರಾಡುತ್ತಿವೆ. ಪ್ರತಿಗ್ರಾಮ, ಮನೆಯಲ್ಲಿಧ್ವಜ ಹಾರಾಡುತ್ತಿದೆ. ತ್ರಿವರ್ಣದ ಶಕ್ತಿ ಎಲ್ಲರನ್ನುಒಗ್ಗೂಡಿಸುವ ಶಕ್ತಿ ಭಾರತದ ಶಕ್ತಿ ಇಡೀ ವಿಶ್ವವೇ ಗಮನಿಸುತ್ತಿದೆಎಂದರು. ಸ್ವಾತಂತ್ರ್ಯ ಸುಲಭವಾಗಿ ಬಂದಿಲ್ಲ. ಹಲವರ ಹೋರಾಟ, ತ್ಯಾಗ, ಬಲಿದಾನದಿಂದ ಬಂದಿದೆ.

ಸಾವಿರಾರುಜನಅನಾಮಧೇಯ ಹೋರಾಟಗಾರರು ಪ್ರಾಣತ್ಯಾಗ ಮಾಡಿದ್ದಾರೆ. ಸ್ವಾತಂತ್ರ್ಯಎಲ್ಲರ ಹಕ್ಕು. ಹೋರಾಟವೂ ಸಾವಿರಾರುಅನಾಮಧೇಯರಿಗೆ ಸೇರಿದೆ. ಯಾರದ್ದೇ ಸ್ವತ್ತಲ್ಲ. ಹೋರಾಟದಲ್ಲಿ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ವಿದ್ಯಾವಂತರುಎಲ್ಲರೂ ಸೇರಿದ್ದರು. ಸ್ವಾತಂತ್ರ್ಯ ಹೋರಾಟಕ್ಕೆ ದಿವ್ಯಇತಿಹಾಸವಿದೆ. ಮೊಟ್ಟ ಮೊದಲು ಸ್ವಾತಂತ್ರ್ಯ ಹೋರಾಟದ ಕಹಳೆಯನ್ನು ಮೊಳಗಿಸಿದ್ದು ಕನ್ನಡ ನಾಡಿನ ಹೆಮ್ಮೆಯರಾಣಿಕಿತ್ತೂರುರಾಣಿಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ. ಸ್ವಾತಂತ್ರ್ಯಕ್ಕಾಗಿ ಪ್ರಾಣಕೊಟ್ಟವರುರಾಜ್ಯದಲ್ಲಿಇದ್ದಾರೆ. ಮೈಲಾರ ಮಹಾದೇವಪ್ಪ ಬ್ರಿಟಿಷರಗುಂಡಿಗೆ ಬಲಿಯಾದರು.

ಸಾಹುಕಾರಚೆನ್ನಯ್ಯಅವರನ್ನು ನೆನಪಿಡಬೇಕು. ಇತಿಹಾಸದಲ್ಲಿದ್ದವರು ಭಾರತದ ಭವಿಷ್ಯ ಬರೆದಿದ್ದಾರೆಎಂದರು. ಪ್ರಧಾನಮಂತ್ರಿ ನರೇಂದ್ರಮೋದಿ ಅವರುದೇಶವನ್ನುದಕ್ಷತೆಯಿಂದ ನಡೆಸುತ್ತಿದ್ದಾರೆ. ಧೀಮಂತ ನಾಯಕರಾದಅವರು ಸಶಕ್ತ, ಸಂಪದ್ಭರಿತ ಭಾರತಕಟ್ಟಲು ಶ್ರಮಿಸುತ್ತಿದ್ದಾರೆ. ಆತ್ಮನಿರ್ಭರ ಭಾರತಎಂದುಕರೆಕೊಟ್ಟಿದ್ದಾರೆ. ರೈತರು, ವಿದ್ಯಾರ್ಥಿಗಳು, ಬಡವರು, ಮಹಿಳೆಯರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು `ಸಬ್ ಕಾ ಸಾಥ್, ಸಬ್ ಕಾ ವಿಕಾಸ್,ಸಬ್ ಕಾ ಪ್ರಯಾಸ್’ ಎಂಬುದು ಪ್ರಧಾನಮಂತ್ರಿಯವರ ಮೂಲಮಂತ್ರ. ಸ್ವಾತಂತ್ರ್ಯೋತ್ಸವ 75 ವರ್ಷಗಳ ಮುಂದಿನ 25 ವರ್ಷದಅಮೃತಕಾಲದಲ್ಲಿ ವಿಶ್ವದಲ್ಲಿ ಭಾರತವನ್ನು ಶ್ರೇಷ್ಠವಾಗಿಸುವ ಜವಾಬ್ದಾರಿ ನಮ್ಮೆಲ್ಲಯುವಕರ ಮೇಲಿದೆ. ಇದು ನಮ್ಮ ಬದ್ಧತೆ ಮತ್ತು ಸಂಕಲ್ಪ. ಸಮಬಾಳಿನ, ಸಮಪಾಲಿನ ಭಾರತ ನಿರ್ಮಾಣದ ಸಂಕಲ್ಪ ಮಾಡಬೇಕೆಂದುಯುವಕರಿಗೆಕರೆ ನೀಡಿದರು.

Translate »