ಗಿರೀಶ್ ಕಾರ್ನಾಡ್ ಇನ್ನಿಲ್ಲ
ಮೈಸೂರು

ಗಿರೀಶ್ ಕಾರ್ನಾಡ್ ಇನ್ನಿಲ್ಲ

June 11, 2019

ಬೆಂಗಳೂರು: ಖ್ಯಾತ ಸಾಹಿತಿ, ರಂಗಭೂಮಿ, ಸಿನಿಮಾ ನಟರೂ ಆಗಿದ್ದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ (81) ಸೋಮವಾರ ಬೆಳಿಗ್ಗೆ ಅಸುನೀಗಿದ್ದಾರೆ. ಎಲ್ಲಾ ಸೀಮೆಗಳನ್ನು ಮೀರಿದ್ದ ಮಹಾನ್ ಪ್ರತಿಭೆ ಗಿರೀಶ್ ಕನ್ನಡದಲ್ಲಿ ನಾಟಕ ಸಾಹಿತ್ಯಕಾರರಾಗಿ, ಪ್ರಸಿದ್ಧ ರಂಗಭೂಮಿ ತಜ್ಞರಾಗಿ, ನಾಟಕಕಾರರಾಗಿ, ಚಲನಚಿತ್ರರಂಗದ ನಟರಾಗಿ ಹೆಸರಾಗಿದ್ದವರು.
ಗಿರೀಶ್ ಕಾರ್ನಾಡರ ನಿಧನದ ಹಿನ್ನೆಲೆ ಯಲ್ಲಿ ಇಂದು ರಾಜ್ಯ ಸರ್ಕಾರ ರಜೆ ಘೋಷಿಸ ಲಾಗಿತ್ತು. ಮೂರು ದಿನ ಸರ್ಕಾರಿ ಶೋಕಾ ಚರಣೆ ಘೋಷಿಸಿದೆ. ಕಾರ್ನಾಡರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ಅವರ ಕುಟುಂಬದವರು ಸಮ್ಮತಿ ನೀಡಲಿಲ್ಲ. ಅಲ್ಲದೆ ಯಾವುದೇ ಸರ್ಕಾರಿ ಅಧಿಕಾರಿ ಹಾಗೂ ರಾಜಕಾರಣಿಗಳಿಗೆ ಅಂತಿಮ ದರ್ಶನಕ್ಕೂ ಅವಕಾಶ ನೀಡಿಲ್ಲ. ಕಾರ್ನಾಡರ ಅಂತ್ಯಕ್ರಿಯೆ ಮಧ್ಯಾಹ್ನ 3 ಗಂಟೆಗೆ ಅವರ ಇಚ್ಛೆಯಂತೆ ಯಾವುದೇ ಧಾರ್ಮಿಕ ವಿಧಿ-ವಿಧಾನಗಳಿ ಲ್ಲದೆ ನೆರವೇರಿಸಲಾಯಿತು.

ಕಾರ್ನಾಡರು 1934 ಮೇ 19ರಂದು ಮಹಾ ರಾಷ್ಟ್ರದ ಮಾಥೇರದಲ್ಲಿ ಜನಿಸಿದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಶಿರಸಿಯಲ್ಲಿ ಪ್ರಾಥಮಿಕ ಶಿಕ್ಷಣ, ಧಾರ ವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆದ ಇವರು ಧಾರ ವಾಡದ ಕರ್ನಾಟಕ ಕಾಲೇಜಿನಲ್ಲಿ ಪದವಿ ಶಿಕ್ಷಣ ಮುಗಿಸಿದ್ದರು. ನಂತರ ಪ್ರತಿಷ್ಠಿತ ರೋಡ್ಸ್ ಸ್ಕಾಲರ್ಶಿಪ್ ಪಡೆದುಕೊಂಡು ಆಕ್ಸ್‍ಫರ್ಡಿ ನಲ್ಲಿ ಹೆಚ್ಚಿನ ವ್ಯಾಸಂಗ ಮಾಡಿದ ಕಾರ್ನಾ ಡರು ಆಕ್ಸ್ ಫರ್ಡಿನ ಡಿಬೇಟ್ ಕ್ಲಬ್ಬಿಗೆ ಅಧ್ಯಕ್ಷ ರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಎನಿಸಿಕೊಂಡಿದ್ದಾರೆ.ಚೆನ್ನೈನಲ್ಲಿ ವೃತ್ತಿಜೀವನ ಪ್ರಾರಂಭಿಸಿ ಶಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ, ಇಂಗ್ಲೆಂಡಿನಲ್ಲಿ ನೆಹರೂ ಸೆಂಟರಿನ ಅಧ್ಯಕ್ಷರಾಗಿ, ಪೂನಾ ಫಿಲ್ಮ್ ಇನ್ಸ್ಟಿಟ್ಯೂಟಿನ ನಿರ್ದೇಶಕರಾಗಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ತಮ್ಮ 42ನೇ ವಯಸ್ಸಿನಲ್ಲಿ ಕೊಡಗಿನ ವೀರಯೋಧ ಕೋದಂಡೇರ ಗಣ ಪತಿಯವರ ಪುತ್ರಿ, ಡಾ.ಸರಸ್ವತಿ ಗಣಪತಿಯ ವರನ್ನು ವಿವಾಹವಾದ ಇವರಿಗೆ ಶಾಲ್ಮಲಿ ರಾಧಾ ಮತ್ತು ರಘು ಅಮಯ್ ಇಬ್ಬರು ಮಕ್ಕಳಿದ್ದಾರೆ. ಮಾ ನಿಷಾಧ-ಏಕಾಂಕ ನಾಟಕ, ಯಯಾತಿ-1961, ತುಘಲಕ್-1964, ಹಯವದನ-1972, ಅಂಜುಮಲ್ಲಿಗೆ-1977, ಹಿಟ್ಟಿನ ಹುಂಜ ಅಥವಾ ಬಲಿ-1980, ನಾಗಮಂಡಲ-1990, ತಲೆದಂಡ-1991, ಅಗ್ನಿ ಮತ್ತು ಮಳೆ-1995, ಟಿಪ್ಪುವಿನ ಕನಸುಗಳು-1997, ಒಡಕಲು ಬಿಂಬ-2005, ಮದುವೆ ಅಲ್ಬಮ್, ಫ್ಲಾವರ್ಸ-2012 ಬೆಂದ ಕಾಳು ಆನ್ ಟೋಸ್ಟ ಇವು ಅವರ ಪ್ರಮುಖ ನಾಟಕಗಳಾದರೆ ಆಡಾಡತ ಆಯುಷ್ಯ ಎಂಬುದು ಅವರ ಆತ್ಮಕಥನ.

ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಕಾಡು, ಒಂದಾನೊಂದು ಕಾಲದಲ್ಲಿ, ಕಾನೂರು ಹೆಗ್ಗಡತಿ, ಉತ್ಸವ್ ಮೊದಲಾದ ಚಿತ್ರಗಳನ್ನು ನಿರ್ದೇಶಿಸಿದ್ದ ಕಾರ್ನಾಡರು ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಸೂಫಿ ಪಂಥ, ಕನಕ ಪುರಂದರ ಸಾಕ್ಷಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಸಾಹಿತ್ಯಕ್ಷೇತ್ರದಲ್ಲಿ ನಾಟಕಗಳನ್ನು ಮಾತ್ರ ರಚಿಸಿ ಜ್ಞಾನಪೀಠ ಪ್ರಶಸ್ತಿಗೆ ಪುರಸ್ಕೃತರಾದವರಲ್ಲಿ ಕಾರ್ನಾಡರು ಮೊದಲಿಗರು ಎನ್ನುವುದು ಇನ್ನೊಂದು ವಿಶೇಷ ಕಾರ್ನಾಡರ ಕೃತಿಗಳು ಇಂಗ್ಲಿಷ್ ಭಾಷೆಯೂ ಸೇರಿದಂತೆ.ವಿದೇಶ ಭಾಷೆಗಳಲ್ಲಿಯೂ ಅನುವಾದವಾಗಿ ಯಶಸ್ವಿಯಾಗಿ ಪ್ರದರ್ಶನ ಕಂಡಿದೆ. ಧೀರ ರಣ ವಿಕ್ರಮ, ರುದ್ರ ತಾಂಡವ, ಸವಾರಿ-2, ಯಾರೇ ಕೂಗಾಡಲಿ. ಕೆÀಂಪೇಗೌಡ, ಆ ದಿನಗಳು, ತನನಂ ತನನಂ, ಎ.ಕೆ-47 ಮುಂತಾದ ಪ್ರಸಿದ್ಧ ಕನ್ನಡ ಚಲನಚಿತ್ರಗಳಲ್ಲಿ ನಟಿಸಿದ್ದರು. ಅಲ್ಲದೇ, ತೆಲುಗು, ತಮಿಳು, ಹಿಂದಿ, ಮಲಯಾಳಂ ಭಾಷೆಗಳ ಸಿನಿಮಾಗಳಲ್ಲೂ ಗಿರೀಶ್ ಕಾರ್ನಾಡ್ ನಟಿಸಿ ದೇಶದಲ್ಲಿ ದೊಡ್ಡ ಹೆಸರು ಮಾಡಿದ್ದರು. ಹೀಗೆ ರಂಗಭೂಮಿ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಗಿರೀಶ್ ಕಾರ್ನಾಡ್ ಸಲ್ಲಿಸಿರುವ ಸೇವೆ ಪರಿಗಣಿಸಿ ಅನೇಕ ಪುರಸ್ಕಾರಗಳು ಲಭಿಸಿವೆ. ಅವುಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಪದ್ಮಶ್ರೀ -1974, ಪದ್ಮಭೂಷಣ -1992, ಜ್ಞಾನಪೀಠ -1998, ಕಾಳಿದಾಸ ಸಮ್ಮಾನ್ – 1998 ಪ್ರಮುಖವಾದವು.

Translate »