ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಬದ್ಧ
ಮೈಸೂರು

ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಬದ್ಧ

November 1, 2020

ಬೆಂಗಳೂರು, ಅ. 31- ವಾಲ್ಮೀಕಿ ಸಮು ದಾಯದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಲ್ಮೀಕಿ ಸಮುದಾಯದ ಮೀಸಲಾತಿ ಕುರಿತು ಪ್ರತಿ ಕ್ರಿಯೆ ನೀಡಿದ್ದಾರೆ. ಇಂದು ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಾಸಕರ ಭವನದ ವಾಲ್ಮೀಕಿ ತಪೆÇೀವನದಲ್ಲಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಸಮು ದಾಯದ ಮೀಸಲಾತಿ ಹೆಚ್ಚಳ ಕುರಿತು ಸುದ್ದಿ ಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಯಡಿಯೂರಪ್ಪ, ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಮೀಸ ಲಾತಿ ಹೆಚ್ಚಳ ಬಗ್ಗೆ ನೀತಿ ಸಂಹಿತೆ ಬಳಿಕ ಚರ್ಚಿಸಲಾಗುವುದು ಎಂದರು. ಇದೇ ವೇಳೆ ಈ ಬಾರಿ ವಾಲ್ಮೀಕಿ ಪ್ರಶಸ್ತಿಗೆ ಐವರನ್ನು ಆಯ್ಕೆ ಮಾಡಲಾಗಿದ್ದು, ಅವರ ಹೆಸರುಗಳನ್ನು ಘೋಷಿಸಿದರು. ಕೊರೊನಾ ವೈರಸ್ ಹಿನ್ನೆಲೆ ಈ ಬಾರಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲಾಗಿದೆ. ಮುಂದಿನ ದಿನಗಳಲ್ಲಿ ಅದ್ಧೂರಿ ಕಾರ್ಯಕ್ರಮ ಮಾಡಿ, ಪ್ರಶಸ್ತಿ ವಿತರಿಸಲಾಗುತ್ತದೆ ಎಂದು ತಿಳಿಸಿದರು. ಡಾ. ಕೆ.ಆರ್.ಪಾಟೀಲ್, ಬಿ.ಎಲ್.ವೇಣು, ಗೌರಿ ಕೊರಗ, ಮಾರಪ್ಪ ನಾಯಕ, ತಿಪ್ಪೇಸ್ವಾಮಿ ವಾಲ್ಮೀಕಿ ಪ್ರಶಸ್ತಿಗೆ ಭಾಜನರಾದವರು.

ಮೀಸಲಾತಿಗೆ ಆಗ್ರಹಿಸಿ ಘೋಷಣೆ: ಮುಖ್ಯಮಂತ್ರಿಗಳು ಶಾಸಕರ ಭವನದ ವಾಲ್ಮೀಕಿ ತಪೆÇೀವನದಿಂದ ತೆರಳಿದ ಬಳಿಕ ಅಲ್ಲಿ ನೆರೆದಿದ್ದ ವಾಲ್ಮೀಕಿ ಸಮುದಾಯದ ಮುಖಂಡರು ಮೀಸಲಾತಿಗೆ ಆಗ್ರಹಿಸಿ ವಾಲ್ಮೀಕಿ ಪ್ರತಿಮೆ ಮುಂದೆ ಘೋಷಣೆ ಕೂಗಿದರು. ನಂತರ ಪ್ರಸನ್ನಾನಂದ ಸ್ವಾಮೀಜಿ ಮಾತನಾಡಿ, ನಾಲ್ಕು ದಶಕಗಳಿಂದ ಸಮುದಾಯ ಮೀಸಲಾತಿಯ ಬೇಡಿಕೆ ಇಡುತ್ತಾ ಬಂದಿದೆ. ಸದ್ಯ ನೀತಿ ಸಂಹಿತೆ ಜಾರಿಯಲ್ಲಿದ್ದು, ನವೆಂಬರ್ 10ರ ಬಳಿಕ ಸಿಎಂ ಜೊತೆ ಚರ್ಚಿಸಿ ಮೀಸಲಾತಿ ಹೆಚ್ಚಳದ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಸಮುದಾಯದ ನಾಯಕ ಶ್ರೀರಾಮುಲು ಭರವಸೆ ಕೊಟ್ಟಿದ್ದಾರೆ ಎಂದು ತಿಳಿಸಿದರು.

 

Translate »