ಕೊಡಗು

ಎಂಎಲ್‍ಸಿ ಶರವಣದಿಂದ ಅಯ್ಯಂಗೇರಿ ಸರ್ಕಾರಿ ಶಾಲೆ ದತ್ತು

September 5, 2018

ಮಡಿಕೇರಿ: ಭಾಗಮಂಡಲ ಸಮೀಪವಿರುವ ಅಯ್ಯಂಗೇರಿ ಸರಕಾರಿ ಪ್ರಾಥಮಿಕ ಶಾಲೆಯನ್ನು ದತ್ತು ಪಡೆಯುವುದಾಗಿ ಜೆಡಿಎಸ್ ಎಂಎಲ್‍ಸಿ ಆರ್.ಶರವಣ ಘೋಷಿಸಿದ್ದಾರೆ.

ಮಡಿಕೇರಿಗೆ ಆಗಮಿಸಿದ ಅವರು ಅತಿ ವೃಷ್ಟಿಯಿಂದ ಹಾನಿ ಗೀಡಾದ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದರು. ಮಳೆಯಿಂದ ಹಾನಿಗೀಡಾದ ಅಯ್ಯಂಗೇರಿ ಸರಕಾರಿ ಶಾಲೆಯನ್ನು ದತ್ತು ಪಡೆದು ಮಾದರಿ ಶಾಲೆಯನ್ನಾಗಿ ರೂಪಿಸುವ ಕನಸು ಹೊಂದಿದ್ದೇನೆ. ತನ್ನ ಹುಟ್ಟು ಹಬ್ಬದ ಸಂದರ್ಭ ಈ ಬಗ್ಗೆ ತೀರ್ಮಾನ ತೆಗೆದು ಕೊಂಡಿದ್ದೆ. ಹೆಚ್ಚುವರಿ ಕಟ್ಟಡ ವ್ಯವಸ್ಥೆ, ಪೀಠೋಪಕರಣ ಸೇರಿ ದಂತೆ ಶಾಲೆಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸುವುದಾಗಿ ಶರವಣ ಹೇಳಿದರು. ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ನಿರಾಶ್ರಿತ ಕೇಂದ್ರಗಳಿಗೆ ಬೇಕಾಗುವ ವಸ್ತುಗಳನ್ನು ಲಾರಿಯಲ್ಲಿ ತರಲಾಗಿದ್ದು ಅಗತ್ಯವಿದ್ದಲ್ಲಿ ಮತ್ತಷ್ಟು ವಸ್ತುಗಳನ್ನು ಒದಗಿಸಲು ಸಿದ್ದವಿರುವುದಾಗಿ ತಿಳಿಸಿದರು.

‘ಮೈತ್ರಿ’ಗೆ ಜನ ಬೆಂಬಲ: ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೇಸ್ ಮೈತ್ರಿ ಸರ್ಕಾರಕ್ಕೆ ಜನ ಬೆಂಬಲವಿರುವುದು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸಾಬೀತಾಗಿದೆ ಎಂದರು. ಬಿಜೆಪಿ ಮುಖಂಡರ ಟೀಕೆಗಳಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಾಜ್ಯದ ಮತದಾರರು ಸಮರ್ಪಕ ಉತ್ತರ ನೀಡಿ ಸಮ್ಮಿಶ್ರ ಸರಕಾರಕ್ಕೆ ಆಶೀರ್ವಾದ ಮಾಡಿದ್ದಾರೆ ಎಂದರು.

Translate »