ಎಪಿಎಂಸಿ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ಮೈಸೂರು

ಎಪಿಎಂಸಿ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

May 17, 2020

ಬೆಂಗಳೂರು, ಮೇ 16- `ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ತಿದ್ದುಪಡಿ) ಸುಗ್ರೀವಾಜ್ಞೆ-2020ಕ್ಕೆ ರಾಜ್ಯಪಾಲರು ಶನಿವಾರ ಸಂಜೆ ಅಂಕಿತ ಹಾಕಿದ್ದು, ಸುಗ್ರೀವಾಜ್ಞೆ ಅಧಿಕೃತವಾಗಿ ರಾಜ್ಯದಲ್ಲಿ ಜಾರಿಯಾಗಿದೆ. ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ಇಲ್ಲದೇ ಇರುವುದರಿಂದ ಎಪಿಎಂಸಿ ತಿದ್ದುಪಡಿ ಕಾಯಿದೆಗೆ ಸುಗ್ರೀವಾಜ್ಞೆ ಹೊರಡಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯ ಸಚಿವ ಸಂಪುಟ ಸಭೆ ಗುರುವಾರ ತೀರ್ಮಾನಿಸಿತ್ತು. ಈ ಸುಗ್ರೀವಾಜ್ಞೆಯಲ್ಲಿ2 ಪ್ರಮುಖ ತಿದ್ದುಪಡಿಗಳಿವೆ. ರೈತರು ಯಾವುದೇ ಎಪಿಎಂಸಿಗಳ ಅಧೀನಕ್ಕೆ ಒಳಪಡುವುದಿಲ್ಲ. ತಮ್ಮಿಷ್ಟದಂತೆ ಯಾರಿಗೆ ಬೇಕಾದರೂ ಬೆಳೆ ಮಾರಬಹುದು. ಖಾಸಗಿಯವರು ರೈತರಿಂದ ನೇರವಾಗಿ ಬೆಳೆ ಖರೀದಿಸಬಹುದು. ತಾಲೂಕು, ಜಿಲ್ಲಾಮಟ್ಟದಲ್ಲಿ ಎಪಿಎಂಸಿಗಳಿಗೆ ಮೊದಲಿನ ಅಧಿಕಾರ ಇರುವುದಿಲ್ಲ. ಯಾರ್ಡ್ ಹೊರಗೆ ನಡೆಯುವ ವಹಿವಾಟಿನ ಮೇಲೆ ನಿಯಂತ್ರಣದ ಅಧಿಕಾರ ಇರುವುದಿಲ್ಲ. ಆದರೆ, ರಾಜ್ಯ ಮಟ್ಟದ ಎಪಿಎಂಸಿ ನಿರ್ದೇಶನಾಲಯದ ಅಧಿಕಾರವನ್ನು ಮೊಟಕು ಗೊಳಿಸಿಲ್ಲ. ರೈತರಿಗೆ ಅನ್ಯಾಯವಾದರೆ ಸಮಿತಿ ಕ್ರಮ ಕೈಗೊಳ್ಳಲು ಅವಕಾಶವಿದೆ.

ವಿರೋಧ: ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ವಿರೋಧ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಹಾಗೂ ರೈತ ಸಂಘಟನೆಗಳಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಆದರೆ ಬಿಎಸ್‍ವೈ ಸರ್ಕಾರ ಪಟ್ಟು ಬಿಡದೆ ತಿದ್ದುಪಡಿ ಕಾಯ್ದೆಯನ್ನು ಸುಗ್ರೀವಾಜ್ಞೆ ಜಾರಿಗೆ ತಂದಿದೆ.

Translate »