ಕ್ಷೇತ್ರದಲ್ಲಿ ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು
ಚಾಮರಾಜನಗರ

ಕ್ಷೇತ್ರದಲ್ಲಿ ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು

March 3, 2020

ಗುಂಡ್ಲುಪೇಟೆ, ಮಾ.2 (ಸೋಮ್.ಜಿ) – ಕ್ಷೇತ್ರದಲ್ಲಿ ಉತ್ತಮ ರಸ್ತೆ, ಚರಂಡಿ ಮತ್ತು ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ತಿಳಿಸಿದರು.

ತಾಲೂಕಿನ ಹಿರಿಕಾಟಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ನಿಧಿಯಿಂದ 25 ಕೋಟಿ ರೂ. ವೆಚ್ಚದಲ್ಲಿ ಕ್ಷೇತ್ರದ ಹಲವು ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕ್ರಮ ಕೈಗೊಳ್ಳಲಾಗಿದೆ.

ಈಗಾಗಲೇ ತಾಲೂಕಿನ ಚಿಕ್ಕಾಟಿ ಮತ್ತು ಚನ್ನವಡೆಯನಪುರ ಗ್ರಾಮದಲ್ಲಿ ತಲಾ 20 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ, ತೊರವಳ್ಳಿ ಗ್ರಾಮದಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ, ಭೀಮನಬೀಡು ಗ್ರಾಮದಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ, ಕೆಬ್ಬೇಪುರ ಗ್ರಾಮದಲ್ಲಿ 10ಲಕ್ಷ ರೂ.ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ, ಬಾಚಹಳ್ಳಿ ಗ್ರಾಮದಿಂದ ಬಂಡೀಪುರ ರಸ್ತೆ 90 ಲಕ್ಷ ರೂ.ವೆಚ್ಚದಲ್ಲಿ, ಬಾಚಹಳ್ಳಿಯಿಂದ ಕಡ ಬೂರು ಮಾರ್ಗ ರಸ್ತೆ 1ಕೋಟಿ 20ಲಕ್ಷ ರೂ.ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ.

ಅದರಂತೆ ತೆರಕಣಾಂಬಿಹುಂಡಿ ಗ್ರಾಮದ ಶ್ರೀ ರಾಮಲಿಂಗಚೌಡೇಶ್ವರಿ ದೇವಸ್ಥಾನದ ಬಳಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಈ ಕಾಮಗಾರಿಯನ್ನು 30ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಗುರಿ ಹೊಂದಲಾಗಿದೆ ಎಂದರು.

ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿಯಾ ಗದ ಮತ್ತು ವಾಹನ ಸಂಚಾರಕ್ಕೆ ಯೋಗ್ಯ ವಲ್ಲದ ರಸ್ತೆಗಳ ಮಾಹಿತಿ ಪಡೆದು ಶೀಘ್ರ ದಲ್ಲೇ ಹಂತ ಹಂತವಾಗಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗುವುದು ಎಂದರು.

ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆÉ. ಈಗ ಕೋಟ್ಯಾಂತರ ರೂ. ವೆಚ್ಚದಲ್ಲಿ ಬರಗಿ ರಸ್ತೆ, ಬಾಚಹಳ್ಳಿ ರಸ್ತೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆಗಳ ನಿರ್ಮಾಣ ನಡೆಯು ತ್ತಿದ್ದು, ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಲಾಗುವುದು ಎಂದರು.ಈ ವೇಳೆ ಮುಖಂಡರಾದ ಸೋಮ ಶೇಖರ್, ನಿಟ್ರೆ ನಾಗರಾಜಪ್ಪ, ಪ್ರಣಯ್, ದೇವಯ್ಯ ಸೇರಿದಂತೆ ಹಲವರಿದ್ದರು.

Translate »