ಪರಮೇಶ್ವರ್, ಎಚ್.ಡಿ.ರೇವಣ್ಣ, ಡಿಕೆಶಿ, ಜಾರ್ಜ್, ಎಂ.ಬಿ.ಪಾಟೀಲ್ ಭದ್ರತೆ ಕಡಿತಕ್ಕೆ ತುರ್ತು ಆದೇಶ
ಮೈಸೂರು

ಪರಮೇಶ್ವರ್, ಎಚ್.ಡಿ.ರೇವಣ್ಣ, ಡಿಕೆಶಿ, ಜಾರ್ಜ್, ಎಂ.ಬಿ.ಪಾಟೀಲ್ ಭದ್ರತೆ ಕಡಿತಕ್ಕೆ ತುರ್ತು ಆದೇಶ

January 31, 2020

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರದ ಅವಧಿ ಯಲ್ಲಿ 27 ಮಂದಿ ಸಚಿವರಿಗೆ ನೀಡಲಾಗಿದ್ದ ಅಂಗರಕ್ಷಕ ಭದ್ರತೆ ಹಾಗೂ ನಿವಾಸದ ಗಾರ್ಡ್ ಭದ್ರತೆ ಹಿಂಪಡೆಯುವಂತೆ ಆದೇಶ ಹೊರಡಿಸಲಾಗಿದೆ. ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಮಾಜಿ ಸಚಿವರಾದ ಎಚ್.ಡಿ.ರೇವಣ್ಣ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್ ಸೇರಿದಂತೆ ಹಲವರ ಭಧ್ರತೆ ಕಡಿತಕ್ಕೆ ನಗರ ಪೆÇಲೀಸ್ ಆಯುಕ್ತ ಎನ್.ಭಾಸ್ಕರ್ ರಾವ್ ತುರ್ತು ಆದೇಶ ಹೊರಡಿಸಿದ್ದಾರೆ. ಇನ್ನು ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಬಂಡೆಪ್ಪ ಕಾಶಪ್ಪನವರ್, ಜಿ.ಟಿ.ದೇವೇಗೌಡ, ಡಿ.ಸಿ. ತಮ್ಮಣ್ಣ, ಕೃಷ್ಣ ಭೈರೇಗೌಡ, ಎಂ.ಸಿ.ಮನಗೂಳಿ, ಎನ್.ಎಚ್.ಶಿವಶಂಕರ ರೆಡ್ಡಿ, ಶ್ರೀನಿವಾಸ, ರಮೇಶ್ ಜಾರಕಿಹೋಳಿ, ವೆಂಕಟರಾವ್ ನಾಡಗೌಡ, ಪ್ರಿಯಾಂಕ್ ಖರ್ಗೆ, ಸಿ.ಎಸ್. ಪುಟ್ಟರಾಜು, ಯು.ಟಿ.ಖಾದರ್, ಸಾ.ರಾ.ಮಹೇಶ್‍ಗೆ ನೀಡಲಾಗಿದ್ದ ಅಂಗರಕ್ಷಕ ಭದ್ರತೆ ಯನ್ನು ವಾಪಸ್ಸು ಪಡೆಯಲಾಗಿದೆ. ಜತೆಗೆ ಉಚ್ಚಾಟಿತ ಬಿಎಸ್‍ಪಿ ಶಾಸಕ ಎನ್.ಮಹೇಶ್, ಶಿವಾನಂದ ಪಾಟೀಲ್, ವೆಂಕಟರಮಣಪ್ಪ, ರಾಜಶೇಖರ ಪಾಟೀಲ್, ಸಿ.ಪುಟ್ಟರಂಗ ಶೆಟ್ಟಿ, ಆರ್.ಶಂಕರ್, ಜಯಮಾಲಾ, ಬಿ.ಆರ್.ತಿಮ್ಮಾಪೂರ್, ತುಕಾರಾಂ ಇ., ರಹೀಂ ಖಾನ್, ಸತೀಶ್ ಜಾರಕಿಹೊಳಿ, ಪಿ.ಟಿ.ಪರಮೇಶ್ವರ್ ನಾಯಕ್, ಜಮೀರ್ ಅಹ್ಮದ್ ಸೇರಿ 27 ಮಂದಿ ಅಂಗರಕ್ಷಕ ಭದ್ರತೆಯನ್ನು ವಾಪಸ್ಸು ಪಡೆದಿದ್ದಾರೆ.

ಈ ಹಿಂದೆಯೇ ನಗರ ಆಯುಕ್ತರು ಮಾಜಿ ಸಚಿವರಿಗೆ ನೀಡಲಾಗಿದ್ದ ಎ ಮತ್ತು ಬಿ ಶ್ರೇಣಿ ಎಂದು ವಿಭಾಗ ಮಾಡಿ ಭದ್ರತೆ ವಾಪಸ್ಸು ಪಡೆದಿದ್ದಾರೆ. ಆದರೆ, ಎ ಶ್ರೇಣಿ ಯಲ್ಲಿದ್ದ ಮಾಜಿ ಸಚಿವ ಡಾ.ಜಿ.ಪರಮೇಶ್ವರ, ಹೆಚ್.ಡಿ.ರೇವಣ್ಣ, ಡಿ.ಕೆ.ಶಿವಕುಮಾರ, ಕೆ.ಜೆ.ಜಾರ್ಜ್ ಹಾಗೂ ಎಂ.ಬಿ.ಪಾಟೀಲ್ ಐದು ಮಂದಿಗೆ ಝಡ್ ಪ್ಲಸ್ ಶ್ರೇಣಿ ಮತ್ತು ಪೈಲಟ್ ಮುಂದುವರಿಸಲಾಗಿತ್ತು. ಇದೀಗ ಅದನ್ನು ಕಡಿತಗೊಳಿಸಲಾಗಿದೆ.

Translate »