ಮಡಿಕೇರಿ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಹೆಚ್.ಎ.ಹಂಸ
ಕೊಡಗು

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಹೆಚ್.ಎ.ಹಂಸ

July 15, 2021

ಪೆÇನ್ನಂಪೇಟೆ, ಜು.14- ಕೊಡಗು ಜಿಲ್ಲೆಯ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕೊಟ್ಟಮುಡಿಯ ಕಾಫಿ ಬೆಳೆಗಾರರಾದ ಹೆಚ್.ಎ.ಹಂಸ ಅವರನ್ನು ಕೆಪಿಸಿಸಿ ನೇಮಕಗೊಳಿಸಿದೆ.

ಕೊಡಗು ಕಾಂಗ್ರೆಸ್ ಪ್ರಮುಖರ ತಂಡ ವನ್ನು ಬೆಂಗಳೂರಿಗೆ ಕರೆಸಿಕೊಂಡ ಕೆಪಿಸಿಸಿ ನಾಯಕರು, ಕಾರ್ಯಾಧ್ಯಕ್ಷರ ಸಮ್ಮುಖ ದಲ್ಲಿ ಹಂಸ ಅವರಿಗೆ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ಯಂತೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಪಕ್ಷ ಸಂಘಟನೆಗೆ ಮೊದಲ ಆದ್ಯತೆ ನೀಡಿ ಕಾಂಗ್ರೆಸನ್ನು ಮತ್ತಷ್ಟು ಬಲ ಪಡಿಸುವಂತೆ ಸೂಚಿಸಿದ್ದಾರೆ.
ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿಯ ಹಾಲಿ ಸದಸ್ಯರಾಗಿ ರುವ ಹೆಚ್.ಎ.ಹಂಸ, ಕಳೆದ 25 ವರ್ಷ ಗಳಿಂದ ಸತತವಾಗಿ ಗ್ರಾಪಂ ಸದಸ್ಯರಾಗಿ ಚುನಾಯಿಸಲ್ಪಟ್ಟಿದ್ದು, 2009-10ರಲ್ಲಿ ಹೊದ್ದೂರು ಗ್ರಾಪಂ ಉಪಾಧ್ಯಕ್ಷರಾಗಿ, 2011ರಿಂದ 2013ರವರೆಗೆ ಹೊದ್ದೂರು ಗ್ರಾಪಂ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ)ಯ ಉಪಾಧ್ಯಕ್ಷರಾಗಿ, ಕೊಡಗು ಜಿಲ್ಲಾ ಪಂಚಾಯಿತಿ ಕೆಡಿಪಿ ಸದಸ್ಯರಾಗಿ, ಕೊಡಗು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಸದಸ್ಯರಾಗಿ, ಹೊದವಾಡದ ಜ್ಹಿನತ್ ಯುವಕ ಸಂಘದ ಅಧ್ಯಕ್ಷರಾಗಿ ಈ ಹಿಂದೆ ಕಾರ್ಯ ನಿರ್ವಹಿಸಿರುವ ಹಂಸ, ಪ್ರಸ್ತುತ ಕೊಡವ ಮುಸ್ಲಿಂ ಅಸೋಸಿಯೇಷನ್(ಕೆಎಂಎ)ನ ಕೋಶಾಧಿಕಾರಿಯಾಗಿ, ಕೊಡಗು ಮುಸ್ಲಿಂ ಸ್ಪೋಟ್ರ್ಸ್ ಮತ್ತು ಸಾಂಸ್ಕೃತಿಕ ಸಂಸ್ಥೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಹಂಸ ಅವರು ನೇಮಕಾತಿ ಆದೇಶ ಪತ್ರ ಪಡೆದ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಕೆಪಿಸಿಸಿ ಮುಖಂಡ ಮೆಹರೋಜ್ಹ್ ಖಾನ್, ಜಿಲ್ಲಾ ಕಾಂಗ್ರೆಸ್ ಪ್ರಮುಖರಾದ ಕೆ.ಎಂ.ಅಬ್ದುಲ್ ರಹಿಮಾನ್ (ಬಾಪು), ಜಿಪಂ ಮಾಜಿ ಸದಸ್ಯರಾದ ಬಿ.ಎನ್. ಪ್ರತ್ಯು, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾ ಗದ ರಾಜ್ಯ ಉಪಾಧ್ಯಕ್ಷರಾದ ಹ್ಯಾರಿಸ್ ಕೊಳಕೇರಿ, ಮುಖಂಡರಾದ ಕಾವೇರಪ್ಪ ಮೊದಲಾದವರು ಹಾಜರಿದ್ದರು.

Translate »