ಮೂರು ತಿಂಗಳ ವೇತನ ನೀಡಲು ಹೆಚ್‍ಡಿಕೆ ಆಗ್ರಹ
ಮೈಸೂರು

ಮೂರು ತಿಂಗಳ ವೇತನ ನೀಡಲು ಹೆಚ್‍ಡಿಕೆ ಆಗ್ರಹ

July 1, 2020

ಬೆಂಗಳೂರು,ಜೂ.30(ಕೆಎಂಶಿ)-ಕೊರೊನಾ ಸೋಂಕು ಹರ ಡುತ್ತಿರುವ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳಲ್ಲಿನ ಅತಿಥಿ ಉಪ ನ್ಯಾಸಕರಿಗೆ ರಾಜ್ಯ ಸರ್ಕಾರ 3 ತಿಂಗಳ ವೇತನ ನೀಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ವೇತನ ನೀಡುವ ಮೂಲಕ ಮಾನವೀಯ ನೆಲೆಗಟ್ಟಿನಲ್ಲಿ ತುರ್ತು ನೆರವಿಗೆ ಧಾವಿಸಬೇಕು. ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಹತಾಶೆಗೊಂಡು ಸುಮಾರು 8 ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸರ್ಕಾರ ಅತಿಥಿ ಉಪ ನ್ಯಾಸಕರ ಸಮಸ್ಯೆಗೆ ತಕ್ಷಣವೇ ಸ್ಪಂದಿಸ ಬೇಕು ಎಂದು ಒತ್ತಾಯಿಸಿದ್ದಾರೆ.

Translate »