ಬಸ್‍ನಲ್ಲೇ ಹೃದಯಾಘಾತ; ಯುವಕ ಸಾವು
ಕೊಡಗು

ಬಸ್‍ನಲ್ಲೇ ಹೃದಯಾಘಾತ; ಯುವಕ ಸಾವು

June 20, 2018

ಸೋಮವಾರಪೇಟೆ:  ಖಾಸಗಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಬಜೆಗುಂಡಿ ಗ್ರಾಮದ ಸುರೇಶ್ ಎಂಬವರ ಮನೆ ಯಲ್ಲಿ ನೆಲೆಸಿದ್ದ ಪ್ರಕಾಶ್ (28) ಸಾವನ್ನಪ್ಪಿದವನಾಗಿದ್ದು, ಈತ ಇಂದು ಬೆಳಗ್ಗೆ 8.30ಕ್ಕೆ ಕುಂಬೂರು ಗ್ರಾಮದ ಕಾಫಿ ತೋಟಕ್ಕೆ ಕೆಲಸಕ್ಕೆಂದು ತೆರಳಿದ್ದ ಎದೆನೋವು ಕಾಣಿಸಿಕೊಂಡಿದ್ದರಿಂದ ವಾಪಸ್ ಮನೆಗೆ ಬರಲೆಂದು ಮಧ್ಯಾಹ್ನ ಖಾಸಗಿ ಬಸ್ ಹತ್ತಿದ್ದು, ಸ್ವಲ್ಪ ದೂರ ಸಂಚರಿಸು ವಷ್ಟರಲ್ಲೇ ಹೃದಯಾಘಾತ ಸಂಭವಿಸಿದೆ. ತಕ್ಷಣ ಸಹ ಪ್ರಯಾಣಿಕರು ಸಂಬಂಧಿಕರಿಗೆ ವಿಷಯ ಮುಟ್ಟಿಸಿದ್ದು, ಪ್ರಕಾಶ್ ಅವರನ್ನು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲು ಮುಂದಾಗಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಆತ ಸಾವನ್ನಪ್ಪಿರುವದಾಗಿ ವೈದ್ಯರು ಖಚಿತಪಡಿಸಿದ್ದಾರೆ.

Translate »