ಉತ್ತರ ಕರ್ನಾಟಕದ 4 ಜಿಲ್ಲೆಗಳಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ
ಮೈಸೂರು

ಉತ್ತರ ಕರ್ನಾಟಕದ 4 ಜಿಲ್ಲೆಗಳಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

August 4, 2019

ಬೆಳಗಾವಿ/ರಾಯಚೂರು, ಆ.3- ಮಹಾರಾಷ್ಟ್ರದಲ್ಲಿ ಭಾರಿ ಮಳೆಯ ಕಾರಣ ಉತ್ತರ ಕರ್ನಾಟಕದ ಬೆಳಗಾವಿ, ಬಾಗಲ ಕೋಟೆ, ಬಿಜಾಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಭೀಕರ ಪ್ರವಾಹ ಎದುರಾಗಿದ್ದು, ಮಾಲ್ವಾಡ ಗ್ರಾಮದ 13 ಕುಟುಂಬ ಗಳನ್ನು ರಕ್ಷಿಸಲಾಗಿದೆ. ಕಳೆದ 3 ದಿನಗಳಲ್ಲಿ 40 ಹಳ್ಳಿ ಗಳು ಜಲಾವೃತವಾಗಿದ್ದು, ಸರ್ಕಾರದ ವತಿ ಯಿಂದ ರಕ್ಷಣಾ ಕಾರ್ಯ ಸಮರೋಪಾದಿ ಯಲ್ಲಿ ಸಾಗಿದೆ. ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ, ರಾಯ ಚೂರಿನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾ ಣವಾಗಿದ್ದು, ಇಲ್ಲಿನ ಜಮೀನುಗಳು ಜಲಾ ವೃತವಾಗಿವೆ. ಸೇತುವೆಗಳು ಮುಳುಗಡೆ ಯಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಬಾಗಲಕೋಟೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಮುಧೋಳ ತಾಲೂ ಕಿನ ಮಾಚಕನೂರು ಗ್ರಾಮದ ಹೊಳೆ ಬಸವೇ ಶ್ವರ ದೇವಸ್ಥಾನ ಜಲಾವೃತವಾಗಿದೆ. ವಿಜಯ ಪುರ ಜಿಲ್ಲೆಯ ಹಲವು ಗ್ರಾಮಗಳ ಜಮೀ ನಿಗೆ ನೀರು ನುಗ್ಗಿದೆ. ಅಪಾರ ಪ್ರಮಾಣದ ತೊಗರಿ, ಸಜ್ಜೆ, ಕಬ್ಬು ಬೆಳೆ ನಾಶವಾಗಿದೆ. ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂ ಕಿನ ಹಳ್ಳಿಗಳು ಜಲಾವೃತವಾಗಿವೆ. ಕೃಷ್ಣಾ ನದಿ ಪಾತ್ರದ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮಾದರ ಗದ್ದಿ ಜಲಾವೃತವಾಗಿದ್ದು, 13 ಕುಟುಂಬ ಗಳನ್ನು ರಕ್ಷಿಸಲಾಗಿದೆ. ಸ್ಥಳಕ್ಕೆ ರಾಯಚೂರು ಉಪ ಆಯುಕ್ತ ಬಿ. ಶರತ್ ಭೇಟಿ ನೀಡಿದ್ದು, ಶಿಲಹಳ್ಳಿ ಸೇತುವೆ ಬಳಿ ಪೆÇಲೀಸರನ್ನು ನಿಯೋಜಿಸಲು ಸೂಚಿಸಿದ್ದು, ರಕ್ಷಣಾ ಕಾರ್ಯಕ್ಕೆ ರಬ್ಬರ್ ದೋಣಿಗಳನ್ನು ಬಳಸು ವಂತೆ ನಿರ್ದೇಶಿಸಿದ್ದಾರೆ. ನೆರೆಯ ಕೊಯ್ನಾ, ವರುಣಾ ಸೇರಿದಂತೆ ಕೆಲವು ಜಲಾಶಯ ಗಳು ಬಹುತೇಕ ತುಂಬಿದ್ದು, ಇದರಿಂದ ಕೃಷ್ಣಾ ಕೊಳ್ಳದಲ್ಲಿ ನೀರಿನ ಹರಿವು ಹೆಚ್ಚಾಗಿದೆ.

519.60 ಮೀ.ಎತ್ತರದ ಆಲಮಟ್ಟಿ ಜಲಾಶಯ ಮೈದುಂಬಲು ಕೇವಲ 25 ಸೆಂಟಿ ಮೀಟರ್ ಮಾತ್ರ ಬಾಕಿ ಇದೆ. ಈಗಾಗಲೇ ಸುಮಾರು ಎರಡು ಲಕ್ಷ ಕ್ಯೂಸೆಕ್ಸ್ ನೀರು ನಾರಾಯಣ ಪುರ ಬ್ಯಾರೇಜ್‍ಗೆ ಹರಿಬಿಡಲಾಗುತ್ತಿದ್ದು, ರಾಯಚೂರು, ಯಾದಗಿರಿ ಪ್ರದೇಶಗಳಲ್ಲೂ ಪ್ರವಾಹದ ಭೀತಿ ಉಂಟಾಗಿದೆ. ಮಹಾರಾಷ್ಟ್ರದಿಂದ ಸತತವಾಗಿ ಹರಿದುಬರುತ್ತಿರುವ ನೀರಿನಿಂದ ಬೆಳಗಾವಿ, ಬಾಗಲಕೋಟ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳ ಕೃಷ್ಣಾ, ಭೀಮಾ ನದಿಗಳಲ್ಲಿ ನೆರೆಹಾವಳಿಯ ಭೀತಿ ಎದುರಾಗಿದೆ. 105 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಕೊಯ್ನಾ ಅಣೆಕಟ್ಟು ಶೇಕಡಾ 80ರಷ್ಟು ಭರ್ತಿಯಾಗಿದೆ. 2.20 ಲಕ್ಷ ಕ್ಯೂಸೆಕ್ ನೀರು ಕೃಷ್ಣೆಯ ಒಳ ಹರಿವು ಇದ್ದು, ಕೊಯ್ನಾ ಜಲಾಶಯದಿಂದ ನೀರು ಬಿಟ್ಟರೆ ಪ್ರವಾಹ ಉಂಟಾಗಲಿದೆ. ಇದರಿಂದ ಬೆಳಗಾವಿಯ 37 ಗ್ರಾಮಗಳಲ್ಲಿ ಜಿಲ್ಲಾಡಳಿತ ಕಟ್ಟೆಚ್ಚರ ಘೋಷಿಸಿದೆ. ಯಾದಗರಿಯಲ್ಲಿ ಛಾಯಾ ಭಗವತಿ, ದಂಡಗುಂಡ ಬಸವೇಶ ದೇವಾಲಯ ಸೇರಿದಂತೆ ಹಲವು ದೇವಸ್ಥಾನಗಳು ಮುಳುಗಡೆಯಾಗಿವೆ. ನಾರಾಯಣಪುರ ಜಲಾಶಯದ ಹಿನ್ನೀರಿನ 500 ಎಕರೆಯಲ್ಲಿ ಬೆಳೆಯಲಾಗಿದ್ದ ಬೆಳೆಗಳು ಕೊಚ್ಚಿಹೋಗಿವೆ. ಗದ್ದಿಯ ನೀಲಕಂಠರಾಯನ ಗದ್ದಿಗೆ ಸಂಪರ್ಕ ಕಲ್ಪಿಸಿ, ನಿವಾಸಿಗಳನ್ನು ರಕ್ಷಿಸುವ ಸಲುವಾಗಿ ಕೃಷ್ಣ ನದಿಯ ಸುತ್ತ ಕಾಲ್ಸೇತುವೆ ನಿರ್ಮಿಸಲಾಗಿದೆ.

Translate »