ತಮಿಳುನಾಡಿನಲ್ಲಿ ಭಾರೀ ಮಳೆ: ಕುಸಿದು ಬಿದ್ದ ಮನೆಗಳು, 2 ಮಕ್ಕಳು ಸೇರಿ 15 ಸಾವು
ಮೈಸೂರು

ತಮಿಳುನಾಡಿನಲ್ಲಿ ಭಾರೀ ಮಳೆ: ಕುಸಿದು ಬಿದ್ದ ಮನೆಗಳು, 2 ಮಕ್ಕಳು ಸೇರಿ 15 ಸಾವು

December 3, 2019

ಚೆನ್ನೈ,ಡಿ.2-ತಮಿಳುನಾಡು ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಗಳು ಕುಸಿದು ಬಿದ್ದ ಪರಿ ಣಾಮ 10 ಮಹಿಳೆಯರು, 2 ಮಕ್ಕಳು ಸೇರಿ ಒಟ್ಟು 15 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಭವಿಸಿದೆ. ಇನ್ನೆರಡು ದಿನಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ತಿರುವಳ್ಳೂರ್, ವೆಲ್ಲೂರ್, ತಿರುವಣ್ಣಾಮಲೈ, ತೂತ್ತುಕುಡಿ, ರಾಮನಾಥಪುರಂ ಮತ್ತು ತಿರುನ ಲ್ವೇಲಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಅಧಿಕಾರಿಗಳು ಮುನ್ಸೂಚನೆ ನೀಡಿದ್ದು, ಈಗಾಗಲೇ ಈ ಪ್ರದೇಶ ಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಭಾರೀ ಮಳೆಗೆ ಕೊಯಿಮತ್ತೂರು ಜಿಲ್ಲೆಯ ಮೆಟ್ಟುಪಾಳ್ಯಂನ ನಡೂರ್ ಗ್ರಾಮದಲ್ಲಿ ಮೂರು ಮನೆಗಳು ಕುಸಿದು ಬಿದ್ದಿದ್ದು, ಪರಿಣಾಮ ಮಹಿಳೆ ಯರು, ಮಕ್ಕಳು ಸೇರಿ 15 ಮಂದಿ ಸಾವನ್ನಪ್ಪಿ ರುವುದಾಗಿ ವರದಿಗಳು ತಿಳಿಸಿವೆ.

ಈ ನಡುವೆ ರಕ್ಷಣಾ ಕಾರ್ಯಾಚರಣೆ ಭರ ದಿಂದ ಸಾಗಿದ್ದು, ಪೆÇಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸಂಕಷ್ಟದಲ್ಲಿರುವ ಜನರನ್ನು ರಕ್ಷಣೆ ಮಾಡಲು ಹರಸಾಹಸ ಪಡುತ್ತಿದ್ದಾರೆ.

ಮೆಟ್ಟುಪಾಳ್ಯಂನಲ್ಲಿರುವ ಕೋ-ಆಪರೇಟಿವ್ ಸೊಸೈಟಿ ಬಳಿ ದೊಡ್ಡ ಕಾಂಪೌಂಡ್‍ವೊಂದು ಮನೆಗಳ ಮೇಲೆ ಕುಸಿದು ಬಿದ್ದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.

ದುರ್ಘಟನೆಯಲ್ಲಿ ಸಾವಿಗೀಡಾದವರನ್ನು ಗುರು (45), ರಾಮನಾಥ್ (20), ಆನಂದ್‍ಕುಮಾರ್ (40), ಹರಿ ಸುಧಾ (16), ಶಿವಕಾಮಿ (45), ಓವಿಯ ಮ್ಮಳ್ (50), ನಿತ್ಯ (300, ವೈದೇಹಿ (20), ತಿಲಗ ವಥಿ (50), ಅರುಕಾನಿ (55), ರುಕುಮಣಿ (40), ನಿವೇತಾ (18), ಚಿನ್ನಮ್ಮಾಳ್ (70) ಮತ್ತು ಅಕ್ಷಯ (7) ಲೋಗುರಾಮ್ (7) ಎಂದು ಗುರ್ತಿಸಲಾಗಿದೆ. ಮೃತದೇಹಗಳನ್ನು ಮೆಟ್ಟುಪಾಳ್ಯಂ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾ ಗಿದೆ ಎಂದು ಪೆÇಲೀಸರು ಮಾಹಿತಿ ನೀಡಿದ್ದಾರೆ.

Translate »