ಬೆಂಗಳೂರು ಮಾರ್ಚ್ 26: ಮಾನ್ಯ ಪ್ರಧಾನ ಮಂತ್ರಿ ಅವರ ಸೂಚನೆಯಂತೆ 21 ದಿನಗಳ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಅಂತ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಲಾಕ್ ಡೌನ್ ಮೀರಿ ಹೊರಬರುವವರನ್ನು ಅರೆಸ್ಟ್ ಮಾಡುವಂತೆ ಸೂಚನೆ ನೀಡಲಾಗಿದೆ.
ಎಲ್ಲಾ ಜಿಲ್ಲೆಯ ಬಾರ್ಡರ್ ಗಳನ್ನು ಸೀಲ್ ಮಾಡುವಂತೆ ಸೂಚನೆ ನೀಡಿಲಾಗಿದೆ.
ವಿಶೇಷವಾಗಿ ಕಾಸರಗೋಡು ಮೂಲಕ ಬರುವವರ ಮೇಲೆ ತೀವ್ರ ನಿಗಾ ಇಡುವಂತೆ ಸೂಚನೆ ನೀಡಲಾಗಿದೆ.
ಈಗಾಗಲೇ ಡಿಸ್ಟಲರಿ ಕಂಪನಿಗಳ ಜೊತೆ ಸ್ಯಾನಿಟೈಸರ್ ಉತ್ಪಾದನೆ ಮಾಡಲು ಸೂಚನೆ ನೀಡಲಾಗಿದ್ದು ಕೆಲವು ಕಂಪನಿಗಳ ಉಚಿತವಾಗಿ ನೀಡಲು ಮುಂದೆ ಬಂದಿವೆ ಅದರ ಸದಾವಕಾಶ ಬಳಸಿಕೊಳ್ಳಲು ಸೂಚನೆ ನೀಡಲಾಯಿತು.
ನಿಮ್ಮ ಏನೇ ಸಮಸ್ಯೆ ಇದ್ದರು ಕೂಡಲೇ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಬೇಕು ಅಂತ ಸೂಚನೆ ನೀಡಲಾಯಿತು.
ಇಡೀ ರಾಜ್ಯದಲ್ಲಿ ಖಾಸಗಿ ಕ್ಲಿನಿಕ್ ಗಳು ಬಂದ್ ಮಾಡುವ ಹಾಗಿಲ್ಲ. ಕ್ಲಿನಿಕ್ ಬಂದ್ ಮಾಡುವವರ ವಿರುದ್ದ ಕ್ರಮಕೈಗೊಳ್ಳಲು ತಿಳಿಸಲಾಗಿದೆ.
ದಿನನಿತ್ಯ ಬಳಸುವ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡುಬಂದರೆ ಅಂತವರ ವಿರುದ್ದ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.
ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಬೆಡ್ ಕೋವಿಡ್ ಗಾಗಿ ಮೀಸಲಿಡುವಂತೆ ಸೂಚನೆ ನೀಡಲಾಯಿತು.
ವೈದ್ಯರು ಮತ್ತು ನರ್ಸ್ ಗಳಿಗೆ ತೊಂದರೆ ಕೊಡುವ ಮನೆ ಮಾಲೀಕರಿಗೆ ಎಚ್ಚರಿಕೆ ನೀಡಬೇಕು.