ಸಣ್ಣಪುಟ್ಟ ಆರೋಗ್ಯ ಸಮಸ್ಯೆಗೆ ಮನೆಯಲ್ಲೇ ಮದ್ದು
ಮೈಸೂರು

ಸಣ್ಣಪುಟ್ಟ ಆರೋಗ್ಯ ಸಮಸ್ಯೆಗೆ ಮನೆಯಲ್ಲೇ ಮದ್ದು

July 2, 2020

ಬೆಂಗಳೂರು, ಜು.1 (ಕೆಎಂಶಿ)-ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗೆ ಮನೆಯಲ್ಲಿಯೇ ಪ್ರತ್ಯೇಕ ವಾಗಿರಿಸಿ (ಹೋಮ್ ಐಸೋಲೇಷನ್) ಚಿಕಿತ್ಸೆ ನೀಡುವ ವ್ಯವಸ್ಥೆ ಆಗ ಬೇಕೆಂದು ತಜ್ಞ ವೈದ್ಯರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸೌಧದಲ್ಲಿ ಬುಧವಾರ ಕೋವಿಡ್-19 ತಡೆಗಟ್ಟುವ ಸಂಬಂಧ ತಜ್ಞ ವೈದ್ಯರ ಜೊತೆ ನಡೆಸಿದ ಚರ್ಚೆಯಲ್ಲಿ ಈ ಸಲಹೆ ನೀಡಿದ್ದಾರೆ. ಇಂತಹವರ ಆರೋಗ್ಯದ ಮೇಲೆ ನಿಗಾ ಇಡುವುದು ಸೂಕ್ತ. ಇದ ರಿಂದ ಆಸ್ಪತ್ರೆ ಗಳ ಮೇಲೆ ಒತ್ತಡ ತಡೆಯಬಹುದಾಗಿದೆ ಎಂದು ಬಹು ತೇಕ ತಜ್ಞರು ಅಭಿಪ್ರಾಯಪಟ್ಟರು. ತೀವ್ರ ಸೋಂಕಿನ ಲಕ್ಷಣಗಳನ್ನು ಹೊಂದಿರುವ ವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿ ರುವವರು ಸೋಂಕಿತರಾದಲ್ಲಿ, ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಆದ್ಯತೆ ನೀಡಬೇಕು ಎಂದು ತಜ್ಞರು ಸಲಹೆ ಮಾಡಿದರು. ಪ್ರಕರಣ ದ್ವಿಗುಣಗೊಳ್ಳುವ ವೇಗ ತಗ್ಗಿಸಬೇಕು. ಮುಚ್ಚಿದ ಸ್ಥಳಗಳು, ನಿಕಟ ಸಂಪರ್ಕ ಹಾಗೂ ಜನಸಂದಣಿಯ ಸ್ಥಳಗಳಲ್ಲಿ ಜನತೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ. ಟೆಲಿ ಮೆಡಿಸಿನ್ ವ್ಯವಸ್ಥೆಯ ಮೂಲಕ ಹೆಚ್ಚಿನ ರೋಗಿಗಳಿಗೆ ಚಿಕಿತ್ಸೆ ನೀಡ ಬಹುದು. ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯ ಅಗತ್ಯವಿದೆ. ಸಂಪರ್ಕ ಪತ್ತೆ ಹಚ್ಚಲು ಹೆಚ್ಚುವರಿ ಮಾನವ ಸಂಪನ್ಮೂಲ ಅಗತ್ಯವಿದ್ದು, ಇತರ ಇಲಾಖೆಯ ಸಿಬ್ಬಂದಿ ಸೇವೆ ಬಳಸಿಕೊಳ್ಳಬೇಕು ಎಂಬ ಸಲಹೆಯೂ ಬಂದಿದೆ. ಟೆಲಿ ಐಸಿಯು ಹಾಗೂ ಚಿಕಿತ್ಸೆಯ ನಿಗದಿತ ಮಾನದಂಡಗಳ ಕುರಿತು ಹೆಚ್ಚಿನ ತರಬೇತಿ ಅಗತ್ಯ. ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆ ಸರಪಣಿ ಹಾಗೂ ಹೊಸ ಔಷಧಿಗಳ ಪೂರೈಕೆ ಸರಪಣಿ ಅಬಾಧಿತವಾಗಿರ ಬೇಕು. ರಾಜ್ಯದಲ್ಲಿ ಕೋವಿಡ್ ಕುರಿತು ಭೀತಿಯ ವಾತಾವರಣ ಸೃಷ್ಟಿಯಾಗಿದ್ದು, ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸವಾಗಬೇಕಿದೆ. ತಜ್ಞರ ಈ ಅಭಿಪ್ರಾಯಗಳ ಕುರಿತು ಸರ್ಕಾರದ ಹಂತದಲ್ಲಿ ವಿವರವಾಗಿ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಯವರು ತಿಳಿಸಿದ್ದಾರೆ. ಸಭೆಯಲ್ಲಿ ಕೋವಿಡ್ ಚಿಕಿತ್ಸೆ ಹಾಗೂ ನಿರ್ವಹಣೆಗೆ ಅಳವಡಿಸಬೇಕಾದ ಮಾರ್ಗಸೂಚಿ ಗಳನ್ನು ಶೀಘ್ರವೇ ನಿಗದಿಪಡಿಸುವುದಾಗಿಯು ತಿಳಿಸಿದ್ದಾರೆ. ಸಭೆಯ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಡಾ. ಶರಣ್ ಪಾಟೀಲ್, 60 ವರ್ಷ ಕೆಳಗಿನವರು ಮನೆಯಲ್ಲೇ ಚಿಕಿತ್ಸೆ ಪಡೆಯಲಿ. 60 ವರ್ಷಕ್ಕಿಂತ ಮೇಲ್ಪಟ್ಟವರನ್ನು ಆಸ್ಪತ್ರೆಗೆ ಸೇರಿಸುವುದು ಉತ್ತಮ. ಎ ಲಕ್ಷಣ ಇರುವ ರೋಗಿಗಳಿಗೆ ಆನ್‍ಲೈನ್ ಮೂಲಕ ಚಿಕಿತ್ಸೆ ನೀಡಲಾಗುವುದು. ಒಂದು ವೇಳೆ ಬಿ ಮತ್ತು ಸಿ ಲಕ್ಷಣ ಕಂಡು ಬಂದರೆ ಆಸ್ಪತ್ರೆಗೆ ಬರಲಿ. ಮಾಧ್ಯಮಗಳನ್ನು ನೋಡಿ ಜನ ಹೆದರಿಕೊಳ್ಳುತ್ತಾರೆ. ಗುಣಮುಖರಾಗುವವರನ್ನು ಹೆಚ್ಚಾಗಿ ತೋರಿಸಿ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಡಾ. ಭುಜಂಗಶೆಟ್ಟಿ, ಕೆಲವು ತಂತ್ರಗಾರಿಕೆಗಳನ್ನು ಬದಲಾವಣೆ ಮಾಡಿಕೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿದ್ದೇವೆ. ಮನೆಯಲ್ಲೇ ಚಿಕಿತ್ಸೆ ಕೊಡುವುದು ಉತ್ತಮ. ಉಸಿರಾಟದ ತೊಂದರೆ ಇರುವವರು ಮಾತ್ರ ಆಸ್ಪತ್ರೆಗೆ ಸೇರಲಿ. ಡಾ. ಸುದರ್ಶನ್ ಬಲ್ಲಾಳ್ ಮಾತನಾಡಿ, ಜನರಿಗೆ ಮಾಧ್ಯಮಗಳು ಹೆದರಿಸುತ್ತಿವೆ. ಇದನ್ನು ಮೊದಲು ಸರಿ ಮಾಡಿಕೊಳ್ಳಿ, ಆಸ್ಪತ್ರೆಗಳಲ್ಲಿ ಬೆಡ್‍ಗಳಿಗೆ ತೊಂದರೆಯಾಗುತ್ತಿವೆ. ಆದ್ದರಿಂದ ರೋಗ ಲಕ್ಷಣ ಇಲ್ಲದವರು ಆಸ್ಪತ್ರೆಗೆ ಬರುವುದು ಬೇಡ, ಮನೆಯಲ್ಲೇ ಚಿಕಿತ್ಸೆ ಪಡೆದುಕೊಳ್ಳಲಿ ಎಂದಿದ್ದಾರೆ.

Translate »