ಹಾಸನ, ಹಾವೇರಿ, ಬಾಗಲಕೋಟೆ ಜಿಲ್ಲೆಯಲ್ಲಿ ಬುಧವಾರ ಒಂದೂ ಕೊರೊನಾ ಪ್ರಕರಣವಿಲ್ಲ

ಮೈಸೂರು, ಫೆ.17(ವೈಡಿಎಸ್)- ರಾಜ್ಯದಲ್ಲಿ ದಿನಕಳೆದಂತೆ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಬುಧ ವಾರ ಬಾಗಲಕೋಟೆ, ಹಾಸನ, ಹಾವೇರಿ ಜಿಲ್ಲೆಯಲ್ಲಿ ಒಂದೂ ಪ್ರಕರಣ ವರದಿಯಾಗಿಲ್ಲ. ಆದರೆ, ಬೆಂಗಳೂರು ನಗರದಲ್ಲಿ ಸೋಂಕಿನ ಸಂಖ್ಯೆ ದಿಢೀರ್ ಏರುಮುಖವಾಗಿದೆ. ಬುಧವಾರ ಕೊರೊನಾದ 253 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಉಳಿದ ಜಿಲ್ಲೆಗಳಲ್ಲಿ ಸೋಂಕಿಗೆ ಒಳಗಾದವರಿಗಿಂತ ಸೋಂಕಿ ನಿಂದ ಗುಣವಾದವರ ಸಂಖ್ಯೆಯೇ ಹೆಚ್ಚಿತ್ತು. ರಾಜ್ಯದಲ್ಲಿಂದು ಕೊರೊನಾ ಸೋಂಕಿಗೆ ಮೂವರು ಬಲಿಯಾಗಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಬುಧವಾರ 17 ಮಂದಿಗೆ ಕೊರೊನಾ ಸೋಂಕು ತಗುಲಿದೆ. 41 ಸೋಂಕಿತರಿಗೆ ಗುಣವಾಗಿದ್ದು, ಮೈಸೂ ರಿನ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಸಾವಿನ ವರದಿಯಾಗಿಲ್ಲ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಒಟ್ಟು 53,822 ಮಂದಿಗೆ ಸೋಂಕು ತಗುಲಿದಂತಾಗಿದೆ. 52,639 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 1,029 ಮಂದಿ ಕೊರೊನಾ ಸೋಂಕಿಗೆ ಬಲಿಯಾದಂತಾಗಿದೆ. ಜಿಲ್ಲೆಯಲ್ಲಿ ಇನ್ನೂ 154 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ 46 ಮಂದಿ ಮನೆಯಲ್ಲೇ ಶುಶ್ರೂಷೆ ಪಡೆಯುತ್ತಿದ್ದರೆ, ಸರ್ಕಾರಿ ಆಸ್ಪತ್ರೆಯ ನಿಗಾ ಕೇಂದ್ರ ಗಳಲ್ಲಿ 32, ಖಾಸಗಿ ಆಸ್ಪತ್ರೆಗಳ ನಿಗಾ ಕೇಂದ್ರಗಳಲ್ಲಿ 76 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದ ವಿವರ: ಬಳ್ಳಾರಿ 2, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 253, ಬೀದರ್ 1, ಚಾಮರಾಜನಗರ 5, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 2, ಚಿತ್ರದುರ್ಗ 2, ದಕ್ಷಿಣ ಕನ್ನಡ 25, ದಾವಣಗೆರೆ 5, ಧಾರವಾಡ 5, ಕಲಬುರಗಿ 10, ಕೊಡಗು 3, ಕೋಲಾರ 1, ಮಂಡ್ಯ 3, ಮೈಸೂರು 17, ರಾಯ ಚೂರು 1, ರಾಮನಗರ 1, ಶಿವಮೊಗ್ಗ 5, ತುಮಕೂರು 6, ಉಡುಪಿ 5, ಉತ್ತರಕನ್ನಡ 5, ವಿಜಯಪುರ 6, ಯಾದಗಿರಿ 2 ಮಂದಿ ಸೇರಿ ರಾಜ್ಯದಲ್ಲಿ ಬುಧವಾರ 378 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 537 ಸೋಂಕಿತರು ಗುಣ ಕಂಡಿದ್ದಾರೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 9,46,454ಕ್ಕೇರಿದೆ. 9,28,461 ಸೋಂಕಿತರಿಗೆ ಗುಣವಾಗಿದೆ. ಇದುವರೆಗೆ 12,276 ಮಂದಿ ಮೃತಪಟ್ಟಂತಾಗಿದೆ. ಇನ್ನು 5,698 ಸಕ್ರಿಯ ಪ್ರಕರಣಗಳಿವೆ.