ಶಬರಿಮಲೆ ವಿಚಾರದಲ್ಲಿ ಹಿಂದೆ ಸರಿಯುವುದಿಲ್ಲ: ಕೇರಳ ಸಿಎಂ

ತಿರುವನಂತಪುರ:  ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತ ವಿಚಾರದಿಂದ ರಾಜ್ಯ ಸರ್ಕಾರ ಹಿಂದಕ್ಕೆ ಸರಿಯುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡಿದ್ದ ಅವರು, ಸಂಪ್ರದಾಯಗಳು ಬದಲಾದಾಗ ವಿರೋಧಗಳು ವ್ಯಕ್ತವಾಗುವುದು ಸಾಮಾನ್ಯ. ಆದರೆ, ಶಬರಿಮಲೆ ವಿಚಾರದಲ್ಲಿ ಸರ್ಕಾರದ ಹಿಂದಕ್ಕೆ ಸರಿಯುವುದಿಲ್ಲ. ದೇವಾಲಯಕ್ಕೆ ಬರುವ ಮಹಿಳೆಯರಿಗೆ ಶೌಚಾಲಯ, ಸ್ನಾನ ವ್ಯವಸ್ಥೆಗಳು ಸೇರಿ ಇತರೆ ವ್ಯವಸ್ಥೆಗಳನ್ನು ನೀಡಲಾಗುತ್ತದೆ. ಪ್ರಸ್ತುತ ಎದ್ದಿರುವ ಬಿಕ್ಕಟ್ಟು ತಾತ್ಕಾಲಿಕವಷ್ಟೇ ಎಂದು ಹೇಳಿದ್ದಾರೆ.