ವೃದ್ಧಾಪ್ಯ, ಅಂಗವಿಕಲ ಮಾಸಾಶನ ಹೆಚ್ಚಳ
ಮೈಸೂರು

ವೃದ್ಧಾಪ್ಯ, ಅಂಗವಿಕಲ ಮಾಸಾಶನ ಹೆಚ್ಚಳ

June 27, 2019

ರಾಯಚೂರು: ವೃದ್ಧಾಪ್ಯ ವೇತನವನ್ನು 1000 ರಿಂದ ಎರಡು ಸಾವಿರಕ್ಕೆ ಹಾಗೂ ಅಂಗವಿಕಲರ ಮಾಸಾಶನವನ್ನು 2500 ವರೆಗೆ ಏರಿಸ ಲಾಗುವುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ರಾಯಚೂರಿನ ಕರೆಗುಡ್ಡ ಗ್ರಾಮದಲ್ಲಿ ಗ್ರಾಮ ವಾಸ್ತವ್ಯದ ಕಾರ್ಯ ಕ್ರಮ ಉದ್ಘಾಟನೆ ಮಾಡಿ ಮಾತನಾ ಡಿದ ಸಿಎಂ ಕುಮಾರಸ್ವಾಮಿ ಅವರು, ಮುಂದಿನ ವರ್ಷದಿಂದ ಇದು ಜಾರಿಗೆ ಬರಲಿದೆ ಎಂದಿದ್ದಾರೆ.

ಈ ಮೊದಲು ಹಿರಿಯ ನಾಗರಿಕರಿಗೆ ಇದ್ದ 600 ಮಾಸಾಶನವನ್ನು 1 ಸಾವಿರಕ್ಕೆ ಹೆಚ್ಚಿಸಿದ್ದೆ. ಈಗ ಅದನ್ನು 2 ಸಾವಿರಕ್ಕೆ ಹಾಗೂ ವಿಕಲಚೇತನರೂ ನೆಮ್ಮದಿಯಿಂದ ಇರ ಬೇಕು ಎಂಬ ದೃಷ್ಟಿಯಿಂದ ಅವರ ಮಾಸಾಶನ ವನ್ನು 2500ಕ್ಕೆ ಹೆಚ್ಚಿಸಲು ನಿರ್ಧರಿಸಿ ದ್ದೇನೆ ಎಂದರು. ಕೃಷಿ ಅಭಿವೃದ್ಧಿಗೆ ಸರ ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದ್ದು, ಕೃಷಿಕರು ಸುಸ್ಥಿರ ಬದುಕು ರೂಪಿಸಿಕೊಳ್ಳು ವುದಕ್ಕೆ ಮುಂದಾಗಬೇಕು ಎಂದರು.

Translate »