ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಕೊಡಗು

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

October 5, 2018

ಮಡಿಕೇರಿ: ಕಾಫಿ ಮಂಡಳಿಯಿಂದ ಕಾಫಿ ತೋಟದ ಕ್ಯೂರಿಂಗ್ ಕಾರ್ಮಿಕರ ಮಕ್ಕಳಿಗೆ 2017-18ರಲ್ಲಿ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿ ಪ್ರಸಕ್ತ 2018-19ನೇ ಸಾಲಿ ನಲ್ಲಿ ಪ್ರಥಮ ಪಿಯುಸಿ, ಪಾಲಿಟಿಕ್ನಿಕ್, ವೃತ್ತಿಪರ ಶಿಕ್ಷಣಗಳಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ದೊರೆಯಲಿದೆ.

2017-18ರಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿ ಪ್ರಥಮ ವರ್ಷದ ಎಂಬಿಬಿಎಸ್, ಬಿಇ, ಫಾರ್ಮಸಿ, ನರ್ಸಿಂಗ್ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಅಧಿಕ ಅಂಕ ಪಡೆದ ಆಧಾರದ ಮೇಲೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಹತ್ತಿರದ ಕಾಫಿ ಮಂಡಳಿ ಕಚೇರಿಗಳಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಆಯಾಯ ಕಾಲೇಜುಗಳಿಂದ ದೃಢೀಕರಿಸಿ ಹತ್ತಿರದ ಕಾಫಿ ಮಂಡಳಿ ಕಚೇರಿಗಳಿಗೆ ಖುದ್ದಾಗಿ ಸಲ್ಲಿಸಲು ಕೋರಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕಾಫಿ ಮಂಡಳಿಯ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಮಡಿಕೇರಿ ಕಾಫಿ ಮಂಡಳಿಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Translate »