ಅಡುಗೆ ತಯಾರಕರ ಹುದ್ದೆ ನೇಮಕಾತಿ ಆದೇಶ ವಿತರಣೆ

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಡುಗೆ ತಯಾರಕರು ಮತ್ತು ಅಡುಗೆ ಸಹಾ ಯಕರಿಗೆ ನೇರ ನೇಮಕಾತಿ ಮಾಡಲಾ ಗಿದ್ದು, ಹೊಸದಾಗಿ ನೇಮಕಗೊಂಡವರಿಗೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಜಿಪಂ ಸಭಾಂಗಣದಲ್ಲಿ ಆದೇಶ ಪತ್ರವನ್ನು ವಿತರಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಅಡುಗೆಯವರು ಹಾಗೂ ಅಡುಗೆ ಸಹಾಯಕರ ಹುದ್ದೆಗೆ ಜಿಲ್ಲಾ ಮಟ್ಟದಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಿ, ಅಂತಿಮ ಪಟ್ಟಿ ಪ್ರಕಟಿಸಲಾಗಿತ್ತು.

ಆಯ್ಕೆಗೊಂಡಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವ ಸಂಬಂಧ ಉಚ್ಚ ನ್ಯಾಯಾಲಯದ ವಿಭಾಗೀಯ ಪೀಠವು ನೀಡಿರುವ ಆದೇಶದನ್ವಯ ಕ್ರಮಕೈಗೊಳ್ಳಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಎಸ್.ಜಿ.ಸೋಮಶೇಖರ್ ತಿಳಿಸಿದರು. ಮೈಸೂರು ಜಿಲ್ಲೆಯಲ್ಲಿ 58 ಮಂದಿ ಅಡುಗೆ ತಯಾರಕರು ಹಾಗೂ 92 ಮಂದಿ ಅಡುಗೆ ಸಹಾಯಕರ ಹುದ್ದೆಗೆ ಹೊಸದಾಗಿ ನೇಮಕಾತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಈ ವೇಳೆ ಜಿಪಂ ಅಧ್ಯಕ್ಷೆ ನಯೀಮಾ ಸುಲ್ತಾನ್ ನಜ್ಹೀರ್ ಅಹಮ್ಮದ್, ಡಿಸಿ ಅಭಿರಾಮ್ ಜಿ.ಶಂಕರ್ ಇದ್ದರು.