ಮಾ.28, ಮಡಿಕೇರಿಯಲ್ಲಿ ಜೆಡಿಎಸ್ ಸಭೆ
ಕೊಡಗು

ಮಾ.28, ಮಡಿಕೇರಿಯಲ್ಲಿ ಜೆಡಿಎಸ್ ಸಭೆ

March 25, 2019

ಮಡಿಕೇರಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇದೇ ಮಾ.28 ರಂದು ಮಡಿಕೇರಿಗೆ ಆಗಮಿಸಿ ಕಾರ್ಯ ಕರ್ತರ ಸಭೆÉ ನಡೆಸಲಿದ್ದಾರೆ ಎಂದ ಜಾತ್ಯಾ ತೀತ ಜನತಾ ದಳದ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಕೊಡಗು, ಮೈಸೂರು ಲೋಕ ಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯ ಪರ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ತಾವು ಜೆಡಿಎಸ್ ಜಿಲ್ಲಾಧ್ಯಕ್ಷನಾಗಿ ಪದ ಗ್ರಹಣ ಮಾಡುವುದಾಗಿ ಹೇಳಿದರು. ಮಾ.28 ರಂದು ಬೆಳಗ್ಗೆ 10 ಗಂಟೆÀಗೆ ಜನರಲ್ ತಿಮ್ಮಯ್ಯ ವೃತ್ತದಿಂದ ಮುಖ್ಯ ಮಂತ್ರಿಗಳ ಮೆರವಣಿಗೆ ನಡೆಯಲಿದ್ದು, ನಂತರ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಬಳಿಯ ಗೆಸ್ಟ್‍ಹೌಸ್ ಮೈದಾನದಲ್ಲಿ ಕಾರ್ಯ ಕರ್ತರ ಸಭೆÉ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್, ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ಮಂಡ್ಯ ಉಸ್ತು ವಾರಿ ಸಚಿವ ಪುಟ್ಟರಾಜು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇ ಗೌಡ, ಅಖಿಲ ಭಾರತ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್, ಕರ್ನಾ ಟಕ ಪ್ರದೇಶ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸೈಯ್ಯದ್ ಅಲ್ತಾಫ್, ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ ಸೇರಿದಂತೆ ಜಿಲ್ಲೆಯ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು.

ವರಿಷ್ಟರ ಸೂಚನೆಯಂತೆ ಮೈತ್ರಿ ನಿಲುವಿಗೆ ಬದ್ಧರಾಗಿ ಕೊಡಗು-ಮೈಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಒಗ್ಗಟ್ಟಾಗಿ ಶ್ರಮಿಸು ವುದಾಗಿ ಗಣೇಶ್ ತಿಳಿಸಿದರು. ಈ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಮೈತ್ರಿ ಧರ್ಮವನ್ನು ಪಾಲಿಸುತ್ತೇವೆ, ಇದೇ ಪ್ರಕಾರವಾಗಿ ಕಾಂಗ್ರೆಸ್ಸಿ ಗರು ಕೂಡ ಮಂಡ್ಯ ಮತ್ತು ಹಾಸನದಲ್ಲಿ ಕಾರ್ಯ ನಿರ್ವಹಿಸಬೇಕೆಂದರು.

ಜಿಲ್ಲೆಯಲ್ಲಿ ಪಕ್ಷದೊಳಗೆ ಉಂಟಾಗಿರುವ ಗೊಂದಲದ ಬಗ್ಗೆ ಉತ್ತರಿಸಿದ ಗಣೇಶ್, ಪಕ್ಷದ ನಾಯಕರು ಜಿಲ್ಲಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ ಎಂದು ಸೂಚನೆ ನೀಡಿದ ಪ್ರಕಾರವಾಗಿ ನಾನು ಕಾರ್ಯನಿರ್ವಹಿಸು ತ್ತಿದ್ದೇನೆ. ಕೆಲವರು ಪಕ್ಷ ಬಿಡುವ ಕುರಿತು ನೀಡಿರುವ ಹೇಳಿಕೆಗಳು ಅವರ ವೈಯಕ್ತಿಕ ವಿಚಾರವಾಗಿದೆ. ಮಾಜಿ ಸಚಿವ ಬಿ.ಎ. ಜೀವಿಜಯ ಅವರು ಇಂದಿಗೂ ನಮ್ಮ ನಾಯಕರಾಗಿದ್ದು, ನೂತನ ಜಿಲ್ಲಾ ಧ್ಯಕ್ಷನಾದ ನನಗೆ ಅವರ ಮಾರ್ಗ ದರ್ಶನದ ಅಗತ್ಯವಿದೆ ಎಂದರು.

ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಮಾತನಾಡಿ, ವಿಧಾನಸಭಾ ಚುನಾವಣೆ ಮುಗಿದ ನಂತರ ಜಿಲ್ಲೆಯಲ್ಲಿ ಜೆಡಿಎಸ್‍ಗೆ ನಾಯಕತ್ವದ ಕೊರತೆ ಎದ್ದು ಕಾಣುತ್ತಿತ್ತು. ಆದರೆ, ಇದೀಗ ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗುವ ಶಕ್ತಿ ಹೊಂದಿರುವ ಕೆ.ಎಂ.ಗಣೇಶ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸ್ವಾಗತಾರ್ಹವೆಂದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕುಸುಮ್ ಕಾರ್ಯಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡೆನ್ನಿ ಬರೋಸ್, ಹಿಂದುಳಿದ ವರ್ಗಗಳ ಅಧ್ಯಕ್ಷ ಎನ್.ಸಿ.ಸುನಿಲ್ ಹಾಗೂ ಮಡಿಕೇರಿ ನಗರ ಮಹಿಳಾ ಘಟಕದ ಅಧ್ಯಕ್ಷೆ ಲೀಲಾ ಶೇಷಮ್ಮ ಉಪಸ್ಥಿತರಿದ್ದರು.

Translate »