ನ್ಯಾಯಾಂಗ ಆಡಳಿತ ತರಬೇತಿ

ಮೈಸೂರು: -ಮೈಸೂರು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಒಂದು ಮುಸ್ಲಿಂ ಅಭ್ಯರ್ಥಿಗೆ ಹಾಗೂ ಒಂದು ಕ್ರಿಶ್ಚಿಯನ್ ಅಭ್ಯರ್ಥಿಗಳ ಕಾನೂನು ಪದವೀಧರರಿಂದ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ತರಬೇತಿ ಭತ್ಯೆ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿ ವಿತರಿಸುವ ಜು.16ರಿಂದ 31ರವರೆಗೆ ಸಂಜೆ 4.30 ಗಂಟೆವರೆಗೆ, ಅರ್ಜಿ ಸಲ್ಲಿಸಲು ಕಡೆಯ ದಿನಾಂಕ: 10.08.2018 ರಂದು ಸಂಜೆ 5.00 ಗಂಟೆಯೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೈಸೂರು. # 446, ಎಸ್.ಕೆ.ಆರ್. ವಿದ್ಯಾಸಂಸ್ಥೆ, ಸರಸ್ವತಿ ನಿಲಯ, ಕೆಂಪನಂಜಾಂಭ ಅಗ್ರಹಾರ, ಕೆ.ಆರ್. ಮೊಹಲ್ಲಾ, ಮೈಸೂರು-570024. ದೂರವಾಣಿ ಸಂಖ್ಯೆ: 0821-2422088 ಅನ್ನು ಸಂಪರ್ಕಿಸಬಹುದು.