ಸೂರಿಗಾಗಿ ಅರ್ಜಿ ಸಲ್ಲಿಸಲು ಜು.30ರ ಕಾಲಾವಕಾಶ
ಮೈಸೂರು

ಸೂರಿಗಾಗಿ ಅರ್ಜಿ ಸಲ್ಲಿಸಲು ಜು.30ರ ಕಾಲಾವಕಾಶ

July 7, 2018
  • ವಿಧಾನಸಭೆಯಲ್ಲಿ ವಸತಿ ಸಚಿವ ಯು.ಟಿ. ಖಾದರ್ ವಿವರಣೆ
  • ಅನರ್ಹರು ಅರ್ಜಿ ಸಲ್ಲಿಸಿದರೆ ಶಿಸ್ತು ಕ್ರಮ

ಬೆಂಗಳೂರು:  ಸೂರಿಲ್ಲದವರಿಗೆ ವಸತಿ ಕಲ್ಪಿಸಲು ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಶಾಶ್ವತ ಮನೆ ಇಲ್ಲದವರು ಇದೇ 30 ರೊಳಗೆ ಅರ್ಜಿ ಸಲ್ಲಿಸುವ ಮೂಲಕ ಹೆಸರು ನೋಂದಾಯಿಸಿಕೊಳ್ಳುವಂತೆ ವಸತಿ ಸಚಿವ ಯು.ಟಿ. ಖಾದರ್ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ರಾಜ್ಯದಲ್ಲಿ ಇದುವರೆಗೆ ಒಟ್ಟು 15 ಲಕ್ಷ ನಿವೇಶನ ಹಾಗೂ ವಸತಿ ರಹಿತರನ್ನು ಗುರುತಿಸಲಾಗಿದೆ. ಗ್ರಾಮ ಪಂಚಾಯ್ತಿ ಅಭಿ ವೃದ್ಧಿ ಅಧಿಕಾರಿ ಹಾಗೂ ಗ್ರಾಮ ಲೆಕ್ಕಿಗರು ನಿವೇಶನ ಮತ್ತು ವಸತಿ ರಹಿತರನ್ನು ಗುರು ತಿಸಿ ಅರ್ಹ ಫಲಾನುಭವಿಗಳಿಂದ ಅರ್ಜಿ ಪಡೆದು ವೆಬ್‍ಸೈಟ್‍ಗೆ ಅಪ್‍ಲೋಡ್ ಮಾಡಲಾಗುತ್ತದೆ ಎಂದರು.

ರಾಜ್ಯಪಾಲರ ವಂದನಾ ನಿರ್ಣಯ ದಲ್ಲಿ ಪಾಲ್ಗೊಂಡ ಸದಸ್ಯರು ಆಶ್ರಯ ಮನೆಗಳ ಗೊಂದಲಕ್ಕೆ ಸಂಬಂಧಿಸಿದಂತೆ ಪ್ರಸ್ತಾಪಿಸಿದಾಗ ಮಧ್ಯೆ ಪ್ರವೇಶಿಸಿ ಮಾತ ನಾಡಿದ ಸಚಿವರು, ಅರ್ಹರನ್ನು ಗುರು ತಿಸಿ, ಅವರಿಂದ ಅರ್ಜಿ ನೋಂದಾಯಿಸಿ ಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿ ವರ್ಗಕ್ಕೆ ಆದೇಶಿಸಲಾಗಿದೆ. ಒಂದು ವೇಳೆ ಅರ್ಹರಲ್ಲದವರ ಹೆಸರನ್ನು ನೋಂದಾ ಯಿಸಿರುವುದು ಕಂಡುಬಂದಲ್ಲಿ, ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಈ ಸಮೀಕ್ಷಾ ಕಾರ್ಯವನ್ನು ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳು ಮೇಲುಸ್ತುವಾರಿ ವಹಿಸಲಿದ್ದಾರೆ. ಕೇಂದ್ರ ಸರ್ಕಾರ ವಸತಿ ಯೋಜನೆಗೆ 72ಸಾವಿರ ಹಾಗೂ ರಾಜ್ಯ ಸರ್ಕಾರ 42 ಸಾವಿರ ರೂ. ನೀಡುತ್ತಿವೆ. ಬಸವ ವಸತಿ ಯೋಜನೆಯಡಿ 1.20 ಲಕ್ಷ ರೂ. ನೀಡಲಾಗುತ್ತಿದೆ ಎಂದು ಹೇಳಿದರು. ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ ಅರಗ ಜ್ಞಾನೇಂದ್ರ, ಕೆ.ಜಿ.ಬೋಪಯ್ಯ ಮತ್ತಿತರ ಸದಸ್ಯರು ವಸತಿ ಯೋಜನೆ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಲು ಮುಂದಾದಾಗ ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷ ರಮೇಶ್ ಕುಮಾರ್, ಇಡೀ ರಾಜ್ಯಕ್ಕೆ ಅನ್ವಯವಾಗು ವಂತೆ ಸಮಗ್ರ ವಸತಿ ನೀತಿಯನ್ನು ರೂಪಿ ಸುವ ಅಗತ್ಯವಿದೆ ಎಂದು ಅಭಿಪ್ರಾಯಿಸಿ ದರು. ಪಕ್ಷಾತೀತವಾಗಿ ಎಲ್ಲಾ ಬಡವರಿಗೂ ವಸತಿ ಸೌಕರ್ಯ ಕಲ್ಪಿಸಬೇಕಾಗುತ್ತದೆ. ಹಿಂದಿನ ಸರ್ಕಾರದಲ್ಲಿ ಒಂದು ಸಮಿತಿ ಯನ್ನು ರಚನೆ ಮಾಡಿ ಮಾರ್ಗ ಸೂಚಿಗಳನ್ನು ನೀಡಲಾಗಿದೆ. ಆ ಸಮಿತಿಯಲ್ಲಿ ನಾವೂ ಒಬ್ಬರಾಗಿದ್ದು, ತಮ್ಮ ಸ್ವಕ್ಷೇತ್ರ ಶ್ರೀನಿವಾಸ ಪುರದಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಕ್ಕೆ ತರಲಾಗಿತ್ತು. ಅದು ಯಶಸ್ವಿಯಾಗಿದೆ. ಇಡೀ ರಾಜ್ಯಕ್ಕೆ ವಿಸ್ತರಣೆ ಮಾಡಿದರೆ ವಸತಿ ಸಮಸ್ಯೆ ಆಗಾಗ ಬರುವುದಿಲ್ಲ ಎಂದರು. ನಾವು ಜನರ ಮಧ್ಯೆ ಇರುವುದರಿಂದ ನಮಗೆ ಮತ ನೀಡಿದವರು, ನೀಡದವರು ಎಂದು ವಿಭಜನೆ ಮಾಡಬಾರದು. ಎಲ್ಲ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಯೋಜನೆಗಳನ್ನು ತಲುಪಿಸಬೇಕು.

Translate »