ವರಮಹಾಲಕ್ಷ್ಮಿ ಹಬ್ಬದಲ್ಲಿ ಕಾಲಚಕ್ರ ಹಾಡು

ವಸಿಷ್ಠ ಸಿಂಹ ನಾಯಕರಾಗಿರುವ ರಶ್ಮಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ರಶ್ಮಿ ಕೆ. ನಿರ್ಮಿಸಿರುವ ಕಾಲಚಕ್ರ ಚಿತ್ರದ ‘ತರಗೆಲೆ’ ಎಂಬ ಹಾಡನ್ನು ಚಿತ್ರತಂಡ ವರಮಹಾಲಕ್ಷ್ಮಿ ಹಬ್ಬದ ಈದಿನ ಸಂಜೆ 6 ಗಂಟೆಗೆ ಆನಂದ್ ಆಡಿಯೋದಲ್ಲಿ ಬಿಡುಗಡೆ ಮಾಡಲಿದೆ. ಸಂತೋಷ್ ನಾಯಕ್ ರಚಿಸಿರುವ ಈ ಹಾಡಿಗೆ ಕೈಲಾಷ್ ಕೇರ್ ದನಿಯಾಗಿz್ದÁರೆ. ಗುರುಕಿರಣ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿz್ದÁರೆ. ಸುಮಂತ್ ಕ್ರಾಂತಿ ಅವರ ರಚನೆ ಹಾಗೂ ನಿರ್ದೇಶನದ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲು ಸಿದ್ದವಾಗಿದೆ. ಸೈಕಲಾಜಿಕಲ್ ಕಥಾ ಹಂದರವಿರುವ ಈ ಚಿತ್ರಕ್ಕೆ ಬೆಂಗಳೂರು ಹಾಗೂ ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ.

ಲಾಕ್‍ಡೌನ್‍ಗೂ ಮುನ್ನ ನಡೆದಿದ್ದ ಅದ್ದೂರಿ ಸಮಾರಂಭದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರು ‘ಕಾಲಚಕ್ರ’ ಚಿತ್ರದ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದರು. ‘ಕಾಲಚಕ್ರ’ ಚಿತ್ರದ ಈ ವಿಶೇಷ ಟೀಸರ್ ಅಧಿಕ ಸಂಖ್ಯೆಯಲ್ಲಿ ವೀP್ಷÀಣೆಗೊಂಡು ಸಿನಿರಸಿಕರ ಮನಗೆದ್ದಿದೆ.

ಎಲ್.ಎಂ. ಸೂರಿ ಅವರ ಛಾಯಾಗ್ರಹಣ, ಸೌಂದರ ರಾಜನ್ ಅವರ ಸಂಕಲನ, ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ, ಮುರಳಿ ಅವರ ನೃತ್ಯ ನಿರ್ದೇಶನ ಹಾಗೂ ಮೋಹನ್ ಬಿ.ಕೆರೆ ಅವರ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ಬಿ.ಎ.ಮಧು ಸಂಭಾಷಣೆ ಬರೆದಿz್ದÁರೆ. ವಸಿಷ್ಠ, ರP್ಷÀ, ದೀಪಕ್ ಶೆಟ್ಟಿ, ಸುಚೇಂದ್ರ ಪ್ರಸಾದ್ ಮುಂತಾದವರು ಈ ಚಿತ್ರದ ಪ್ರಮುಖ ತಾರಾಬಳಗದಲ್ಲಿz್ದÁರೆ.