ರಾಜ್ಯದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ

  • ಯಡಿಯೂರಪ್ಪ ಸಮಾಧಾನ ಹೊರ ರಾಜ್ಯದವರೇ ಕಂಟಕವಾಗುತ್ತಿದ್ದಾರೆ

ಬೆಂಗಳೂರು, ಮೇ 27- ರಾಜ್ಯದಲ್ಲಿ ಕೊರೊನಾ ಸಾಕಷ್ಟು ನಿಯಂತ್ರಣದಲ್ಲಿದೆ. ಮಹಾರಾಷ್ಟ್ರ ಮತ್ತಿತರ ಹೊರರಾಜ್ಯಗಳಿಂದ ಬರುತ್ತಿರುವವರಿಂದ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಕೋವಿಡ್ ಪರೀಕ್ಷೆಗೆ ಸಂಚಾರಿ ಸ್ಮಾರ್ಟ್ ಕಿಯೋಸ್ಕ್ ಪರೀಕ್ಷಾ ಘಟಕಗಳ ಉದ್ಘಾಟನೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಸಾಕಷ್ಟು ನಿಯಂತ್ರಣದಲ್ಲಿ ಇದೆ. ಆದರೆ ಹೊರರಾಜ್ಯಗಳಿಂದ ಬರುವವ ರಿಂದ ಕೋವಿಡ್ ಇಲ್ಲಿ ಸಾಕಷ್ಟು ಹೆಚ್ಚಾಗುತ್ತಿದೆ. ಸರ್ಕಾರ ನಿಯಂತ್ರಣ ವಿಚಾರದಲ್ಲಿ ನಮ್ಮದೇ ಆದಂತಹ ಆರೋಗ್ಯ ಸೇವೆಗಳ ನಿಯಂತ್ರಣ ವಿಧಾನವನ್ನು ಅನುಸರಿಸಿ ಯಶಸ್ವಿಯಾಗಿದೆ ಎಂದರು.

ನಿಯಂತ್ರಣ ಕಾರ್ಯದ ಜೊತೆಗೆ ಕೋವಿಡ್ ಸೋಂಕಿತರನ್ನು ತಪಾಸಣೆಗೆ ಒಳಪಡಿಸುವ ವಿಚಾರದಲ್ಲಿ ನಮ್ಮ ಸಾಧನೆ ಉತ್ತಮವಾಗಿದೆ. ಜನಸಂಖ್ಯೆ ಆಧಾರಗಳ ಮೇಲೆ ಈ ಸ್ಮಾರ್ಟ್ ಕಿಯೋಸ್ಕ್‍ಗಳನ್ನು 15 ಕಡೆ ಸ್ಥಾಪನೆ ಮಾಡಲಿದ್ದೇವೆ. ಇದರಿಂದ ಹೆಚ್ಚು ಪರೀಕ್ಷೆ ಮಾಡಲು ಅನುಕೂಲವಾಗಲಿದೆ. ಸರ್ಕಾರದ ಜತೆ ಕೈಜೋಡಿಸಿ ಸ್ಮಾರ್ಟ್ ಕಿಯೋಸ್ಕ್ ಇತರ ಖಾಸಗಿ ಕಂಪನಿಗಳಿಗೆ ಮಾದರಿಯಾಗಿದೆ. ನಾವು ರಾಷ್ಟ್ರದಲ್ಲಿಯೇ ಪ್ರಥಮ ಸ್ಥಾನದಲ್ಲಿದ್ದೇವೆ. ಬೆಂಗಳೂರು ಕೊರೊನಾ ತಡೆಗಟ್ಡುವಲ್ಲಿ ಯಶಸ್ವಿಯಾಗಿದೆ ಅಂತ ಕೇಂದ್ರ ಸರ್ಕಾರವೇ ಹೇಳಿದೆ ಎಂದಿದ್ದಾರೆ.

ಡಿಸಿಎಂ ಡಾ.ಅಶ್ವಥ್ ನಾರಾಯಣ ಮಾತನಾಡಿ, ವಿಪ್ರೋ ಸಂಸ್ಥೆಯ ಸಹಯೋಗ ದೊಂದಿಗೆ ಸ್ಮಾರ್ಟ್ ಕಿಯೋಸ್ಕ್ ಗಳು ಕಾರ್ಯ ನಿರ್ವಹಣೆ ಮಾಡಲಿದೆ. 15 ಸ್ಮಾರ್ಟ್ ಕಿಯೋಸ್ಕ್‍ಗಳ ಉದ್ಘಾಟನೆ ಆಗಿದೆ. ಸ್ಯಾಂಪಲ್ ಕಲೆಕ್ಷನ್ ಮಾಡೋದು ದೊಡ್ಡ ಸವಾಲಾಗಿತ್ತು. ಈ ಕಿಯೋಸ್ಕ್ ಮೂಲಕ ವೈದ್ಯರು, ಪೆಷೆಂಟ್ ಪರಸ್ಪರ ಸಂಪರ್ಕ ಬರದೇ ಸ್ಯಾಂಪಲ್ ಕಲೆಕ್ಷನ್ ಮಾಡಬಹುದು. ಎಲ್ಲಿ ಬೇಕಾದರೂ ಕಿಯೋಸ್ಕ್‍ಗಳನ್ನ ಬಳಸಬಹುದು. ಕಿಯೋಸ್ಕ್‍ಗಳ ಮೂಲಕ ಸರಳ ಮತ್ತು ಸುಲಭವಾಗಿ ಸ್ಯಾಂಪಲ್ ಕಲೆಕ್ಟ್ ಮಾಡಿಕೊಳ್ಳಬಹುದು ಎಂದರು. ಸ್ಮಾರ್ಟ್ ಕಿಯೋಸ್ಕ್‍ಗಳನ್ನು 15 ಕಡೆ ಸ್ಥಾಪನೆ ಮಾಡಲಿದ್ದೇವೆ. ಇದರಿಂದ ಹೆಚ್ಚು ಪರೀಕ್ಷೆ ಮಾಡಲು ಅನುಕೂಲವಾಗಲಿದೆ. ಸರ್ಕಾರದ ಜತೆ ಕೈಜೋಡಿಸಿ ಸ್ಮಾರ್ಟ್ ಕಿಯೋಸ್ಕ್ ಇತರ ಖಾಸಗಿ ಕಂಪನಿಗಳಿಗೆ ಮಾದರಿಯಾಗಿದೆ. ರಾಷ್ಟ್ರದಲ್ಲಿಯೇ ಪ್ರಥಮ ಸ್ಥಾನದಲ್ಲಿದ್ದೇವೆ ಎಂದರು. ವೈರಸ್ ನಮ್ಮನ್ನು ಬಿಟ್ಟು ಹೋಗೋದಿಲ್ಲ. ಶಾಶ್ವತವಾಗಿ ನಮ್ಮ ಜೊತೆಯಲ್ಲೇ ಉಳಿದುಕೊಳ್ಳಲಿದೆ. ಜನರು ಎಚ್ಚರಿಕೆಯಿಂದಿರಬೇಕು ಎಂದರು.