ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಕೇಂದ್ರ ಮಧ್ಯಪ್ರವೇಶ
News

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಕೇಂದ್ರ ಮಧ್ಯಪ್ರವೇಶ

December 15, 2022

ನವದೆಹಲಿ: ಕರ್ನಾಟಕ ಮತ್ತು ಮಹಾ ರಾಷ್ಟ್ರ ನಡುವಿನ ಗಡಿ ಗಲಾಟೆಗೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿದ್ದು, ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬುಧ ವಾರ ನಡೆದ ಸಭೆಯಲ್ಲಿ ಈ ಸಂಬಂಧ ಪ್ರತ್ಯೇಕ ಸಮಿತಿ ರಚಿಸಲು ನಿರ್ಧರಿಸಲಾಗಿದೆ.

ಉಭಯ ರಾಜ್ಯಗಳ ಗಡಿ ವಿವಾದ ರಸ್ತೆ ಯಲ್ಲಿ ನಿಂತು ಬಗೆಹರಿಸುವ ವಿಷಯ ವಲ್ಲ. ಸಂವಿಧಾನಬದ್ಧವಾಗಿ ವಿವಾದ ಇತ್ಯರ್ಥಗೊಳಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾ ದದ ಇತ್ಯರ್ಥ ಹಾಗೂ ಸಾಂವಿಧಾನಿಕ ಪರಿಹಾರಕ್ಕಾಗಿ ಮಹಾರಾಷ್ಟ್ರದ ಮುಖ್ಯ ಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಮತ್ತು ಇತರ ಮಂತ್ರಿಗಳ ಜೊತೆ ಅಮಿತ್ ಶಾ ಸಭೆ ನಡೆಸಿದರು. ಬಳಿಕ ಟ್ವೀಟ್ ಮಾಡಿರುವ ಅವರು, ಉಭಯ ರಾಜ್ಯ ಗಳಿಂದ ತಲಾ ಮೂವರು ಮಂತ್ರಿ ಗಳಂತೆ ಒಟ್ಟು ಆರು ಮಂತ್ರಿಗಳ ಸಮಿತಿ ರಚನೆ ಮಾಡಲಾಗುವುದು. ಅವರು ಒಟ್ಟಿಗೆ ಕುಳಿತು ಇದರ ಬಗ್ಗೆ ವಿಸ್ತೃತ ಚಿಂತನೆ, ಚರ್ಚೆ ನಡೆಸಲಿದ್ದಾರೆ. ಎರಡೂ ರಾಜ್ಯ ಗಳ ನಡುವೆ ಇನ್ನೂ ಕೆಲವು ಸಣ್ಣಪುಟ್ಟ ವಿವಾದಗಳಿವೆ. ಅದು ಸಾಮಾನ್ಯವಾಗಿ ಉಭಯ ರಾಜ್ಯಗಳ ನಡುವೆ ಇರುತ್ತದೆ. ಇದನ್ನು ಕೂಡ ಈ ಸಮಿತಿ0iÉುೀ ಬಗೆ ಹರಿಸಲಿದೆ ಎಂದರು. ಭಾರತ ಸರ್ಕಾರದ ಭೂ ವಿವಾದ ಅಧಿಕಾರಿಗಳೊಂದಿಗೆ ಉತ್ತಮ ವಾತಾವರಣದಲ್ಲಿ ಮಾತುಕತೆ ನಡೆಯಿತು. ಇಬ್ಬರು ಮುಖ್ಯಮಂತ್ರಿಗಳ ಸಕಾರಾತ್ಮಕ ಧೋರಣೆ ತೋರಿಸಿದ್ದಾರೆ. ಸಭೆಯಲ್ಲಿ ಕೆಲವು ನಿರ್ಣಯಗಳನ್ನು ತೆಗೆದು ಕೊಳ್ಳಲಾಗಿದೆ. ಸುಪ್ರೀಂ ಕೋರ್ಟ್ ನಿರ್ಣಯ ಹೊರಬರುವವರೆಗೆ ಯಾವುದೇ ರಾಜ್ಯದ ಬಗ್ಗೆ ಒಬ್ಬರ ಮೇಲೊಬ್ಬರು ಆರೋಪಿ ಸುವುದಿಲ್ಲ ಎಂದು ಶಾ ಹೇಳಿದ್ದಾರೆ. ಎರಡೂ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿರಲಿದೆ.

ಇತರ ಭಾಷೆಯ ಪ್ರವಾಸಿಗರು, ವ್ಯಾಪಾರಿಗಳು ಅಥವಾ ಜನರಿಗೆ ಯಾವುದೇ ತೊಂದರೆ ಯಾಗದಿರಲಿ ಎಂಬ ಕಾರಣಕ್ಕೆ  ಹಿರಿಯ ಐಪಿಎಸ್ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರ ಕುರಿತು ಕೇಂದ್ರ ಗೃಹಸಚಿವ ಅಮಿತ್ ಶಾ ಕರೆದಿದ್ದ ಸಭೆಗೂ ಮುನ್ನ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಮಿತ್ ಶಾ ಅವರನ್ನು ಸನ್ಮಾನಿಸಿದರು.  ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾರಾಷ್ಟ್ರ ಸಿಎಂ  ಏಕನಾಥ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹಾಜರಿದ್ದರು.

Translate »