ಮೈಸೂರು ಮುಕ್ತ ವಿವಿಯಿಂದ ಮಾತ್ರ ದೂರಶಿಕ್ಷಣ
ಮೈಸೂರು

ಮೈಸೂರು ಮುಕ್ತ ವಿವಿಯಿಂದ ಮಾತ್ರ ದೂರಶಿಕ್ಷಣ

December 10, 2020

ಕರ್ನಾಟಕ ರಾಜ್ಯ ವಿವಿಗಳ ತಿದ್ದುಪಡಿ ಮಸೂದೆ-2020ಕ್ಕೆ ವಿಧಾನಸಭೆ ಒಪ್ಪಿಗೆ
ಬೆಂಗಳೂರು, ಡಿ.9-ದೂರಶಿಕ್ಷಣ ಪದ್ಧತಿಯನ್ನು ಮೈಸೂರಿ ನಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ಮಾತ್ರ ಸೀಮಿತ ಗೊಳಿಸುವ, ಬೆಂಗಳೂರು ವಿವಿ ಹೆಸರನ್ನು ಬದಲಾಯಿಸುವ ಅಂಶವೂ ಸೇರಿದಂತೆ ಉನ್ನತ ಶಿಕ್ಷಣ ಸುಧಾರಣೆಗೆ ಸಂಬಂ ಧಿಸಿದ ಮಹತ್ವದ ಆಡಳಿತಾತ್ಮಕ, ಕಾನೂನಾತ್ಮಕ ಸುಧಾರಣೆ ಗಳುಳ್ಳ ಮಸೂದೆಗೆ ವಿಧಾನಸಭೆ ಒಪ್ಪಿಗೆ ನೀಡಿದೆ.

ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಬುಧವಾರ ಸದನದಲ್ಲಿ ಈ ಅಂಶಗಳನ್ನೊಳ ಗೊಂಡ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಮತ್ತು ಕೆಲವು ಇತರೆ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕ-2020ಯನ್ನು ಮಂಡಿಸಿದರು.

ಈ ಮೊದಲು ದೂರ ಶಿಕ್ಷಣವು ರಾಜ್ಯದ ಎಲ್ಲ ವಿಶ್ವವಿದ್ಯಾಲಯ ಗಳಲ್ಲಿಯೂ ಲಭ್ಯವಿತ್ತು. ಇನ್ನು ಮುಂದೆ ದೂರಶಿಕ್ಷಣಕ್ಕೆ ಮಾತ್ರವೇ ಮೀಸಲಾಗಿದ್ದ ಈ ಶಿಕ್ಷಣವನ್ನು ಮೈಸೂರಿನಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ವತಿಯಿಂದ ಮಾತ್ರ ನೀಡಲಾಗುತ್ತದೆ. ಮುಕ್ತ ವಿವಿಯ ವ್ಯಾಪ್ತಿಯೂ ರಾಜ್ಯಾದ್ಯಂತ ಇದ್ದು, ಇನ್ನು ಮುಂದೆ ಇತರೆ ವಿವಿಗಳಲ್ಲಿ ದೂರಶಿಕ್ಷಣ ನೀಡುವುದನ್ನು ನಿಲ್ಲಿಸಲಾಗುವುದು.

ಬೆಂಗಳೂರಿನಲ್ಲಿ ಕೇಂದ್ರಸ್ಥಾನ ಹೊಂದಿರುವ ಸರಕಾರಿ ವಿಜ್ಞಾನ ಕಾಲೇಜು ಸಂಸ್ಥೆಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪ್ರತ್ಯೇಕ ಗೊಳಿಸಿ ಏಕಾತ್ಮಕ ಸ್ವರೂಪದ ನೃಪತುಂಗಾ ವಿವಿಯನ್ನು ಸ್ಥಾಪಿಸಲಾಗು ತ್ತಿದ್ದು, ಇದರ ಕೇಂದ್ರಸ್ಥಾನವು ಬೆಂಗಳೂರು ನಗರದಲ್ಲೇ ಇರುತ್ತದೆ.

ಗುಣಮಟ್ಟದ ಶಿಕ್ಷಣ ಹಾಗೂ ಸಂಪನ್ಮೂಲ ಕೊರತೆ ಆಗದಂತೆ ಎಲ್ಲ ವಿಶ್ವವಿದ್ಯಾಲಯಗಳಿಗೆ ಆದಾಯ ತೆರಿಗೆ ವಿನಾಯಿತಿ ಪ್ರಯೋ ಜನಗಳನ್ನು ಪಡೆದುಕೊಳ್ಳಲು ಅವಕಾಶ ನೀಡುವುದು. ಇದರಿಂದ ಎಲ್ಲ ವಿವಿಗಳಿಗೂ ಆರ್ಥಿಕ ಬಲ ಸಿಗಲಿದೆ.

ಮಹಾರಾಣಿ ಕ್ಲಸ್ಟರ್, ಬೆಂಗಳೂರು ಮತ್ತು ಮಂಡ್ಯ ಏಕೀಕೃತ ವಿವಿ ಗಳಿಗೆ ಉಪ ಕುಲಪತಿಗಳನ್ನು ಸರಕಾರದಿಂದಲೇ ನೇಮಕ ಮಾಡುವುದು. ಎಲ್ಲ ವಿವಿಗಳಿಗೆ ಆಡಳಿತಾಧಿಕಾರಿ ಅಥವಾ ಕುಲಸಚಿವರನ್ನಾಗಿ ಐಎಎಸ್ ಅಥವಾ ಕೆಎಎಸ್ ಅಧಿಕಾರಿಗಳನ್ನು ನೇಮಕ ಮಾಡಲು ಅವಕಾಶ ಕಲ್ಪಿಸುವುದು. ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಹೆಸರನ್ನು ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರು ನಾಮಕರಣ ಮಾಡುವುದು. ವಿವಿಗಳಲ್ಲಿ ಕೆಲಸ ಮಾಡುವ ಲೆಕ್ಕಪತ್ರ ನಿಯಂತ್ರಕರ ಪದನಾಮವನ್ನು ಪ್ರಧಾನ ನಿರ್ದೇಶಕರು, ಕರ್ನಾಟಕ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಎಂದು ಬದಲಿಸಲಾಗುವುದು.

ಸುಗ್ರೀವಾಜ್ಞೆ ಹೊರಡಿಸಲಾಗಿತ್ತು: ಈ ಹಿಂದೆಯೇ ಸುಗ್ರೀವಾಜ್ಞೆ ಜಾರಿಗೆ ತರುವ ಮೂಲಕ ಮಸೂದೆಯಲ್ಲಿ ಪ್ರಸ್ತಾಪಿಸಲಾಗಿರುವ ಬಹುತೇಕ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಮಹಾರಾಣಿ ಕ್ಲಸ್ಟರ್, ರಾಯಚೂರು, ಬೆಂಗಳೂರು-ಮಂಡ್ಯ ಏಕೀಕೃತ ವಿವಿಗಳಿಗೆ ಕುಲಪತಿಗಳನ್ನು ನೇಮಕ ಮಾಡಲಾಗಿತ್ತು. ಆದರೆ, ಈ ವಿವಿಗಳಿಗೆ ಕುಲ ಸಚಿವರು ಹಾಗೂ ಆಡಳಿತಾಧಿಕಾರಿಗಳನ್ನು ಸರಕಾರ ನೇಮಕ ಮಾಡಬೇಕಿದೆ. ಉನ್ನತ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಇನ್ನು ಮುಂದೆ ಹೆಚ್ಚು ಶಕ್ತಿ ಬರಲಿದೆ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

Translate »