ವಿದೇಶದಿಂದ ಬರುವವರ ಬಗ್ಗೆ ಮಾಹಿತಿ ನೀಡಲು ಡಿಸಿ ಮನವಿ
ಕೊಡಗು

ವಿದೇಶದಿಂದ ಬರುವವರ ಬಗ್ಗೆ ಮಾಹಿತಿ ನೀಡಲು ಡಿಸಿ ಮನವಿ

March 14, 2020

ಮಡಿಕೇರಿ,ಮಾ.13-ಕೊಡಗು ಜಿಲ್ಲೆ ಯಲ್ಲಿ ಕೊರೊನಾ ಸೋಂಕಿನ ಪ್ರಕರಣ ಇದುವರೆಗೆ ವರದಿಯಾಗಿಲ್ಲ. ಆದರೂ ಒಬ್ಬರು ಕೊಡಗು ವೈದ್ಯಕೀಯ ಕಾಲೇಜು ಆಸ್ಪತ್ರೆಯ ವಿಶೇಷ ವಾರ್ಡ್‍ನಲ್ಲಿ ದಾಖಲಾಗಿದ್ದು, ಕೊರೊನಾ ಸಂಬಂಧಿಸಿದಂತೆ ವರದಿಗಾಗಿ ಕಾಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಕೊಡಗಿನಲ್ಲಿ ಈವರೆಗೂ ಕೊರೊನಾ ಸೋಂಕಿನ ಪ್ರಕರಣ ವರದಿ ಯಾಗಿಲ್ಲ. ದುಬೈನಿಂದ ಮರಳಿದ ವ್ಯಕ್ತಿ ಯೋರ್ವರಿಗೆ ಗಂಟಲು ನೋವು ಕಾಡಿದ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ಸ್ವಯಂ ದಾಖಲಾಗಿ ಪರೀಕ್ಷೆ ಕೈಗೊಂಡಿದ್ದಾರೆ. ಅವರ ರಕ್ತದ ಮಾದರಿಯನ್ನು ಮೈಸೂರಿನ ಪ್ರಯೋ ಗಾಲಯಕ್ಕೆ ಕಳುಹಿಸಲಾಗಿದ್ದು, ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಕೇರಳ ಗಡಿಭಾಗವಾಗಿರುವ ಕೊಡಗಿ ನಲ್ಲಿ ಕೊರೊನಾ ಸೋಂಕು ಹರಡದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳ ಲಾಗಿದೆ. ಸರ್ಕಾರದ ನಿರ್ದೇಶನದಂತೆ ವಿದೇಶ ದಿಂದ ಮರಳುವ ಪ್ರವಾಸಿಗರ ಮೇಲೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಡಿಸಿ ತಿಳಿಸಿದರು.

ಕೊಡಗಿನಲ್ಲಿ ಸಾರ್ವಜನಿಕ ಕಾರ್ಯ ಕ್ರಮಗಳನ್ನು ನಿಷೇಧಿಸುವ ಯಾವುದೇ ತೀರ್ಮಾನ ಜಿಲ್ಲಾಡಳಿತ ಕೈಗೊಂಡಿಲ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಬಗ್ಗೆ ಯಾವುದೇ ರೀತಿಯ ಭಯ, ಆತಂಕ ಅನಗತ್ಯ, ಆದರೆ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಆರೋಗ್ಯ ಇಲಾಖೆಯಿಂದ ಕೈಗೊಳ್ಳಲಾಗುತ್ತಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

ಸದ್ಯಕ್ಕೆ ಪೆÇಲೀಸ್ ಕಂಟ್ರೋಲ್ ರೂಮ್ ನ 100 ಸಂಖ್ಯೆಗೆ ಕರೆ ಮಾಡಿ ಕೊರೊನಾ ಸೋಂಕಿನ ಅನುಮಾನವಿದ್ದವರು ಮಾಹಿತಿ ನೀಡಬಹುದಾಗಿದೆ. ಜೊತೆಗೆ ಜಿಲ್ಲಾ ಸರ್ವೇ ಕ್ಷಣಾಧಿಕಾರಿ ಮೊಬೈಲ್ ಸಂಖ್ಯೆ: 944984 3263, ಮಡಿಕೇರಿ ತಾಲೂಕು ಆರೋಗ್ಯಧಿ ಕಾರಿಗಳ ಮೊಬೈಲ್ ಸಂಖ್ಯೆ ಮಡಿಕೇರಿ 9449843203, ವಿರಾಜ ಪೇಟೆ 94484 48481 ಮತ್ತು ಸೋಮವಾರಪೇಟೆ 9880 996893ಗೆ ಮಾಹಿತಿ ನೀಡುವಂತೆ ಸಾರ್ವ ಜನಿಕರಲ್ಲಿ ಮನವಿ ಮಾಡಿದು.
ಯಾವುದೇ ಸಂಶಯಾಸ್ಪದ ರೋಗಿಯ ವೈದ್ಯಕೀಯ ಪರೀಕ್ಷಾ ವರದಿಗಳನ್ನು ಪಕ್ಕದ ಮೈಸೂರಿನ ಪ್ರಯೋಗಾಲಯಕ್ಕೆ ರವಾನಿಸ ಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಕೊಡಗು ಜಿಲ್ಲೆಯ ಕಾಫಿ ಬೆಳೆಗಾರ ಸಂಘಟನೆಗಳು, ವೈದ್ಯರ ಸಂಘ, ಕಾರ್ಮಿ ಕರ ಸಂಘಟನೆ, ಹೋಂ ಸ್ಟೇಗಳು, ರೆಸಾರ್ಟ್ ಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಸಲಾಗಿದ್ದು, ಎಲ್ಲರಿಗೂ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಕೊರೊನಾ ಸೋಂಕು ಸಂಬಂಧಿಸಿ ದಂತೆ ಕೆಲವರು ಸಾಮಾಜಿಕ ಜಾಲತಾಣ ಗಳಲ್ಲಿ ವದಂತಿ ಹಬ್ಬಿಸುತ್ತಿದ್ದು, ಜನರ ಆತಂಕಕ್ಕೆ ಕಾರಣರಾಗುತ್ತಿದ್ದಾರೆ. ಇಂಥ ಸುಳ್ಳು ಸಂದೇಶಗಳ ಮೇಲೂ ಜಿಲ್ಲಾಡಳಿತ ನಿಗಾ ವಹಿಸಲಿದೆ. ಇಂಥ ವದಂತಿಗಳಿಗೆ ಯಾರೂ ಕಿವಿಗೊಡದಿರಿ. ಯಾವುದೇ ಅಧಿಕೃತ ಮಾಹಿತಿಯಿದ್ದರೂ ಜಿಲ್ಲಾಡಳಿತದಿಂದಲೇ ಲಭ್ಯವಾಗಲಿದೆ ಎಂದು ಸ್ಪಷ್ಟಪಡಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಮಾಹಿತಿ ನೀಡಿ, ಕೆಮ್ಮು, ಶೀತ ಭಾಧಿತರಷ್ಟೇ ಮಾಸ್ಕ್ ಧರಿಸಬೇಕೇ ವಿನಾ ಅನಗತ್ಯವಾಗಿ ಮಾಸ್ಕ್ ಧರಿಸಬೇಕಾಗಿಲ್ಲ ಎಂದರು.

ಪಶುವೈದ್ಯಕೀಯ ಇಲಾಖೆಯ ಅಧಿಕಾರಿ ತಮ್ಮಯ್ಯ ಮಾತನಾಡಿ, ಹಕ್ಕಿಜ್ವರ ಪ್ರಕರಣ ಗಳೂ ರಾಜ್ಯದ ಕೆಲವೆಡೆ ವರದಿಯಾಗು ತ್ತಿದ್ದು, ಈ ನಿಟ್ಟಿನಲ್ಲಿಯೂ ಕೊಡಗಿನಲ್ಲಿ ಗಮನಹರಿಸಿ ಮುಂಜಾಗ್ರತೆ ವಹಿಸಲಾಗಿದೆ ಎಂದರು. ಜಿಲ್ಲಾ ಆರೋಗ್ಯ ಸರ್ವೇಕ್ಷಣಾ ಧಿಕಾರಿ ಡಾ.ಶಿವಕುಮಾರ್ ಹಾಜರಿದ್ದರು.

Translate »