ಕೋವಿಡ್ ಹೋಯ್ತು… ಕ್ಷಯ ಬಂತು…
News

ಕೋವಿಡ್ ಹೋಯ್ತು… ಕ್ಷಯ ಬಂತು…

March 25, 2022

Áಮಾನ್ಯವಾಗಿ ರೋಗ ಬಂದ ಬಳಿಕ ಚಿಕಿತ್ಸೆ

ಪಡೆಯಲಾಗುತ್ತದೆ. ಇದರ ಬದಲು ಲಕ್ಷಣಗಳು ಕಂಡು ಬಂದ ಕೂಡಲೇ ಚಿಕಿತ್ಸೆ ಪಡೆಯಲು ಆರಂ ಭಿಸಬೇಕು. 2 ವಾರಕ್ಕೂ ಹೆಚ್ಚು ಕಾಲ ಕೆಮ್ಮು, ಸಂಜೆ ಜ್ವರ, ತೂಕ ಇಳಿಕೆಯಾಗುವುದು ಮೊದಲಾದ ಲಕ್ಷಣ ಕಂಡು ಬಂದರೆ ಕಡ್ಡಾಯವಾಗಿ ಪರೀಕ್ಷೆ ಮಾಡಿಸಬೇಕು. ಈಗ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ಷಯ ರೋಗ ಪರೀಕ್ಷೆ ಸೌಲಭ್ಯವಿದೆ. ಜನರು ಈ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರೀಕ್ಷೆ ಮಾಡಿಸಬೇಕು. ಬೇಗ ಪರೀಕ್ಷೆ ಮಾಡಿಸಿದರೆ ಉತ್ತಮ ಚಿಕಿತ್ಸೆ ಪಡೆಯಬಹುದು. ಗ್ರಾಮೀಣ ಭಾಗ ಗಳಲ್ಲಿ ಜನರು ಖಾಯಿಲೆ ಇದ್ದರೂ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸುವುದಿಲ್ಲ, ಒಬ್ಬ ಕ್ಷಯ ರೋಗಿಯಿಂದ ಕನಿಷ್ಠ 10 ಜನರಿಗೆ ರೋಗ ಹರಡಬಹುದು, ಒಬ್ಬರ ತಪ್ಪಿನಿಂದ ಎಲ್ಲರಿಗೂ ಸಮಸ್ಯೆ ಉಂಟಾಗುತ್ತದೆ. ಆದ್ದ ರಿಂದ ಈ ಕುರಿತು ಹೆಚ್ಚು ಜಾಗೃತಿ ಮೂಡಿಸಬೇಕಿದೆ.

-ಡಾ.ಕೆ.ಸುಧಾಕರ್, ಆರೋಗ್ಯ ಸಚಿವ

ಬೆಂಗಳೂರು, ಮಾ.24(ಕೆಎಂಶಿ)- ಕೋವಿಡ್ ನಿಂದ ಗುಣಮುಖರಾದವರ ಪೈಕಿ ಹಲವರಲ್ಲಿ ಕ್ಷಯ ರೋಗ ಪತ್ತೆಯಾಗಿದೆ, ಈ ಕುರಿತು ವಿಸ್ತøತ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಸೌಧದಲ್ಲಿ ನಡೆದ, ‘ವಿಶ್ವ ಕ್ಷಯರೋಗ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೋವಿಡ್‍ನಿಂದ ಗುಣಮುಖರಾದವರಿಗೆ ಮೊಟ್ಟ ಮೊದಲ ಬಾರಿಗೆ ಸರ್ಕಾರದಿಂದಲೇ ಕ್ಷಯ ರೋಗ ಪತ್ತೆ ಪರೀಕ್ಷೆ ಮಾಡಲಾಗಿದೆ. ಪರೀಕ್ಷೆಗೊಳಪಟ್ಟ 25 ಲಕ್ಷ ಜನರಲ್ಲಿ 144 ಜನರಿಗೆ ಕ್ಷಯ ದೃಢಪಟ್ಟಿದೆ. ಕೋವಿಡ್ ಬಂದ ಬಳಿಕವೇ ಇವರಿಗೆ ಕ್ಷಯ ಬಂದಿದೆ. ಹೀಗಾಗಿ ಈ ಬಗ್ಗೆ ಹೆಚ್ಚು ಅಧ್ಯಯನ ಮಾಡಿ ವರದಿ ಸಿದ್ಧಪಡಿಸಲು ಸೂಚಿಸಲಾಗಿದೆ. ರಾಜ್ಯವನ್ನು ಕ್ಷಯ ಮುಕ್ತ ಮಾಡುವ ಗುರಿಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.
ಕೋವಿಡ್‍ನಂತೆಯೇ ಕ್ಷಯವೂ ಸಾಂಕ್ರಾಮಿಕ ರೋಗ, ಕೋವಿಡ್ ವೈರಸ್‍ನಿಂದ ಬಂದರೆ, ಕ್ಷಯವು ಬ್ಯಾಕ್ಟೀರಿಯಾ ದಿಂದ ಬರುತ್ತದೆ. 2030ರ ವೇಳೆಗೆ ಜಗತ್ತನ್ನು ಕ್ಷಯ ರೋಗದಿಂದ ಮುಕ್ತ ಮಾಡಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 2025ರೊಳಗೆ ಭಾರತವನ್ನು ಕ್ಷಯ ರೋಗ ಮುಕ್ತ ಮಾಡಬೇಕು ಎಂಬ ಗುರಿ ಪ್ರಕಟಿಸಿದೆ. ಇದು ಕೇವಲ ವೈದ್ಯರು ಅಥವಾ ಸರ್ಕಾರದಿಂದ ಸಾಧ್ಯವಿಲ್ಲ. ಇದಕ್ಕೆ ಸಾಮೂಹಿಕ ಪ್ರಯತ್ನ ಅಗತ್ಯ ಎಂದರು.

ರಾಜ್ಯ ಸರ್ಕಾರ ರೋಗಗಳ ಬಗ್ಗೆ ಅರಿವು ಮೂಡಿಸಲು ವರ್ಷಕ್ಕೆ 5 ಕೋಟಿ ರೂ.ಗೂ ಅಧಿಕ ಹಣ ಖರ್ಚು ಮಾಡುತ್ತಿದೆ ಎಂದರು. ಸಾಂಕ್ರಾಮಿಕ ರೋಗವೆಂದರೆ, ರೋಗಿಯ ವಿರುದ್ಧ ಯುದ್ಧ ಆರಂಭವಾಗಿ ಬಿಡುತ್ತದೆ, ಈ ರೀತಿಯ ಪರಿಸ್ಥಿತಿ ಸಮಾಜದಲ್ಲಿ ಉಂಟಾಗಬಾರದು. ಇದರಿಂದಾಗಿ ರೋಗಿಗಳು ಮಾನಸಿಕವಾಗಿ ಬಳಲುತ್ತಾರೆ. ಇಂತಹವರಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ಕೋವಿಡ್ ಬಂದ ಬಳಿಕ ನಿಮ್ಹಾನ್ಸ್ ಸಂಸ್ಥೆಯು 25 ಲಕ್ಷ ಜನರಿಗೆ ಆಪ್ತ ಸಮಾಲೋಚನೆ ನಡೆಸಿದೆ. ಇದೇ ರೀತಿ, ಕ್ಷಯದ ಚಿಕಿತ್ಸೆ ಜೊತೆಗೆ ರೋಗಿಗೆ ಹಾಗೂ ಕುಟುಂಬದವರಿಗೆ ಆಪ್ತ ಸಮಾಲೋಚನೆ ಮಾಡ ಬೇಕಿದೆ. ಕ್ಷಯ ರೋಗಿಯು ಮನೆಯವರಿಗೆ ಹರಡದಂತೆ ಎಚ್ಚರ ವಹಿಸಲು ಮಾರ್ಗ ದರ್ಶನ ನೀಡಬೇಕು ಎಂದರು. ಕ್ಷಯ ನಿಯಂತ್ರಣದಲ್ಲಿ ರಾಜ್ಯದ 5 ಜಿಲ್ಲೆಗಳಿಗೆ ಬೆಳ್ಳಿ ಪದಕ ಬಂದಿದೆ. ಈ ಜಿಲ್ಲೆಗಳಲ್ಲಿ ಹಿಂದಿನ ಸಾಲಿಗೆ ಹೋಲಿಸಿದರೆ ಈ ವರ್ಷ ಕ್ಷಯ ರೋಗ ಪ್ರಕರಣಗಳ ಪ್ರಮಾಣ ಶೇ.40ರಷ್ಟು ಇಳಿಕೆಯಾಗಿದೆ. ಇದೇ ರೀತಿ 9 ಜಿಲ್ಲೆಗಳಿಗೆ ಕಂಚಿನ ಪದಕ ಲಭಿಸಿದೆ. ಒಟ್ಟು 14 ಜಿಲ್ಲೆಗಳಲ್ಲಿ ಕ್ಷಯ ನಿಯಂತ್ರಣದಲ್ಲಿದೆ ಎಂಬುದೇ ಗಮನಾರ್ಹ ಸಾಧನೆಯಾಗಿದೆ. ಮುಂದಿನ ವರ್ಷಗಳಲ್ಲಿ ಇನ್ನಷ್ಟು ಹೆಚ್ಚು ಕ್ರಮ ಕೈಗೊಂಡು ಚಿನ್ನದ ಪದಕ ಪಡೆಯುವಂತಾಗಬೇಕು ಎಂದು ಸಲಹೆ ನೀಡಿದರು.

Translate »