ಅಂಚೆ ಬೆಟ್ಟದಲ್ಲಿ ಕಾರ್ಮಿಕ ಆತ್ಮಹತ್ಯೆ

ಗೋಣಿಕೊಪ್ಪಲು:  ಸಿದ್ದಾಪುರ ಠಾಣಾ ವ್ಯಾಪ್ತಿಯ ಅಂಚೆ ಬೆಟ್ಟ ಕಾಫಿ ತೋಟದ ಕಾರ್ಮಿಕ ಕುಮಾರ್(38) ಎಂಬಾತ ವಾಸವಿದ್ದ ಲೈನ್ ಮನೆಯ ಸಮೀಪವಿರುವ ಆಲದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

ನಂಜನಗೂಡು ತಾಲೂಕಿನ ಕಳಂದ ಹೋಬಳಿಯ ನಿವಾಸಿಯಾಗಿರುವ ಮಾರಶೆಟ್ಟಿ ಎಂಬುವರ ಮಗ ಕುಮಾರ್ ಕಳೆದ ಒಂದು ತಿಂಗಳ ಹಿಂದೆ ಕೊಡಗಿಗೆ ಕಾಫಿ ತೋಟದ ಕೆಲಸಕ್ಕಾಗಿ ಕುಟುಂಬ ಸಮೇತ ಆಗಮಿಸಿದ್ದ. ಕುಮಾರ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಲಭ್ಯವಿಲ್ಲದ ಕಾರಣ ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತರಲಾಗಿದ್ದು, ಇಲ್ಲಿಯ ವೈದ್ಯ ಡಾ.ಸುರೇಶ್ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಸಂಬಂ ಧಿಕರಿಗೆ ಹಸ್ತಾಂತರಿಸಿದರು.ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.