ಲಖಿಂಪುರ ಹಿಂಸಾಚಾರ ಪ್ರಕರಣ: ಇಂದು ವಿಚಾರಣೆ
ದೇಶ-ವಿದೇಶ, ಮೈಸೂರು

ಲಖಿಂಪುರ ಹಿಂಸಾಚಾರ ಪ್ರಕರಣ: ಇಂದು ವಿಚಾರಣೆ

November 8, 2021

ನವದೆಹಲಿ,ನ.೭-ಲಖಿಂಪುರ ಖೇರಿ ಹಿಂಸಾಚಾರದ ಪ್ರಕರಣವನ್ನು ಸುಪ್ರೀಂ ಕೋರ್ಟ್ ನಾಳೆ(ನ.೮) ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ರೈತರ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ ಘಟನೆಯಲ್ಲಿ ನಾಲ್ವರು ರೈತರು ಸೇರಿ ೮ ಮಂದಿ ಸಾವ ನ್ನಪ್ಪಿದ್ದರು. ನ್ಯಾ.ಎನ್.ವಿ.ರಮಣ ಹಾಗೂ ನ್ಯಾ.ಸೂರ್ಯಕಾಂತ್ ಹಾಗೂ ಹಿಮಾ ಕೊಹ್ಲಿ ನೇತೃತ್ವದ ಸುಪ್ರೀಂಕೋರ್ಟ್ ಪೀಠ ಅ.೨೬ರಂದು ಉತ್ತರಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿ, ೨೦೧೮ರ ಸಾಕ್ಷಿ ರಕ್ಷಣಾ ಯೋಜನೆಯಡಿ ಸಾಕ್ಷ÷್ಯ ಗಳಿಗೆ ರಕ್ಷಣೆ ಒದಗಿಸುವಂತೆ ಸೂಚಿಸಿತ್ತು.

ನ್ಯಾಯಾಂಗ ಮ್ಯಾಜಿಸ್ಟೆçÃಟ್ ಎದುರು ಸಿಆರ್‌ಪಿಸಿ ಸೆಕ್ಷನ್ ೧೬೪ ಅಡಿ ಹೇಳಿಕೆ ಗಳನ್ನು ದಾಖಲಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು ಹಾಗೂ ತಜ್ಞರ ಮೂಲಕ ಡಿಜಿಟಲ್ ಸಾಕ್ಷ÷್ಯ ಪರಿಶೀಲನೆ ತ್ವರಿತಗೊಳಿಸಬೇಕೆಂದು ಹೇಳಿತ್ತು. ಇನ್ನು ಪತ್ರಕರ್ತನೋರ್ವರಿಗೆ, ಶ್ಯಾಮ್ ಸುಂದರ್ ಎಂಬಾತನ ಮೇಲೆ ಗುಂಪು ಹಲ್ಲೆ ನಡೆದಿದ್ದರ ಬಗ್ಗೆಯೂ ರಾಜ್ಯ ಸರ್ಕಾರದಿಂದ ಕೋರ್ಟ್ ಸ್ಥಿತಿಗತಿ ವರದಿಯನ್ನು ಕೇಳಿತ್ತು.

Translate »