ಪಿಯು ಕಾಲೇಜು ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ
ಕೊಡಗು

ಪಿಯು ಕಾಲೇಜು ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

October 27, 2020

ಮಡಿಕೇರಿ, ಅ.26- ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನೀಲ್ ಸುಬ್ರಮಣಿ ಅವರು ಶುಕ್ರವಾರ ಭೂಮಿ ಪೂಜೆ ನೆರವೇ ರಿಸಿದರು. ಬಳಿಕ ಮಾತನಾಡಿದ ಅವರು, 96 ಲಕ್ಷ ರೂ. ವೆಚ್ಚದಲ್ಲಿ 6 ಕೊಠಡಿ ಒಳ ಗೊಂಡ ಸುಸಜ್ಜಿತ ಕಟ್ಟಡ ನಿರ್ಮಾಣ ವಾಗಲಿದೆ ಎಂದು ತಿಳಿಸಿದರು.

ಜಿಲ್ಲಾ ಕೇಂದ್ರ ಸ್ಥಾನವಾದ ಮಡಿಕೇರಿ ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ಮಾಡಲಾಗಿದೆ. ನೂತನ ಕಟ್ಟಡ ನಿರ್ಮಾಣ ವಾಗುತ್ತಿರುವುದು ಅಭಿವೃದ್ಧಿಯ ಸಂಕೇತ ವಾಗಿದೆ. ಉತ್ತಮ ರೀತಿಯಲ್ಲಿ ಕಟ್ಟಡ ನಿರ್ಮಾಣ ವಾಗಿ, ಶೀಘ್ರದಲ್ಲಿಯೇ ಬಳಕೆಗೆ ಲಭ್ಯವಾಗಲಿ ಎಂದರು. ಮಡಿಕೇರಿ ದಸರಾ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೋವಿಡ್-19 ಹಿನ್ನೆಲೆ ಸರಳ ಹಾಗೂ ಸಾಂಪ್ರದಾಯಿಕವಾಗಿ ದಸರಾ ಆಚರಿಸ ಲಾಗುತ್ತಿದೆ. ಕಟ್ಟಡ ಅಲಂಕಾರ ಮತ್ತಿತರ ವಿಚಾರಗಳಿ ಗಿಂತ ಜನರ ಜೀವ ರಕ್ಷಣೆ ಅತೀ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ ಎಂದರು. ಜಿಲ್ಲಾ ಡಳಿತ ಮತ್ತು ಪೊಲೀಸ್ ಇಲಾಖೆ ಉತ್ತಮವಾಗಿ ಕಾರ್ಯ ನಿರ್ವಹಿ ಸುತ್ತಿದ್ದು, ಜಿಲ್ಲಾ ಡಳಿತಕ್ಕೆ ಸಹಕಾರ ನೀಡಬೇಕಿದೆ. ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕಿದೆ ಎಂದರು.

ಎಸ್‍ಡಿಎಂಸಿ ಉಪಾಧ್ಯಕ್ಷ ಧನಂಜಯ, ಸದಸ್ಯರಾದ ಉಮಾದೇವಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇ ಶಕರಾದ ಮಹಾಲಿಂಗಯ್ಯ, ಪ್ರಾಂಶು ಪಾಲರಾದ ವಿಜಯ, ಉಪನ್ಯಾಸಕರಾದ ಚಿದಾನಂದ್, ಮಹಾಂತೇಶ್, ಸಿದ್ದರಾಜು ಬೆಳ್ಳಯ್ಯ, ಲೋಕೋಪಯೋಗಿ ಇಲಾಖೆ ಎಂಜಿನಿ ಯರ್ ದೇವರಾಜ್ ಇತರರು ಇದ್ದರು. ಫೋಟೊ: 08

 

 

Translate »