ಕಾರ್ಮಿಕರಿಗೆ ಕಾನೂನು-ಅರಿವು ಕಾರ್ಯಕ್ರಮ
ಕೊಡಗು

ಕಾರ್ಮಿಕರಿಗೆ ಕಾನೂನು-ಅರಿವು ಕಾರ್ಯಕ್ರಮ

June 10, 2018

ವಿರಾಜಪೇಟೆ: ಕಾರ್ಮಿ ಕರಿಗಾಗಿ ಸರಕಾರ ಅನೇಕ ಯೋಜನೆ ಗಳನ್ನು ಜಾರಿಗೆ ತಂದಿದ್ದು, ಕಾರ್ಮಿಕರು ಸಿಗುವ ಸೌಲಭ್ಯಗಳನ್ನು ಪಡೆದು ಕೊಂಡು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತಾಗ ಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶಿವಾನಂದ ಲಕ್ಷ್ಮಣ್ ಅಂಚಿ ಹೇಳಿದರು.

ತಾಲೂಕು ಕಾನೂನು ಸೇವೆಗಳ ಸಮಿತಿ, ವಿರಾಜಪೇಟೆ ವಕೀಲರ ಸಂಘ, ಕಾರ್ಮಿಕ ಇಲಾಖೆ, ಮತ್ತು ಪಾಲಿಬೆಟ್ಟದ ಹೊಸಳ್ಳಿ ಟಾಟಾ ಕಾಫಿ ಎಸ್ಟೇಟ್ ಸಂಯುಕ್ತ ಆಶ್ರಯ ದಲ್ಲಿ ಎಸ್ಟೇಟ್ ಸಭಾಂಗಣದಲ್ಲಿ ”ವಿಶ್ವ ಕಾರ್ಮಿಕರ ದಿನಾಚರಣೆ ಹಾಗೂ ತಂಬಾಕು ನಿಷೇಧ ದಿನಾಚರಣೆ ಪ್ರಯುಕ್ತ ಕಾರ್ಮಿ ಕರಿಗಾಗಿ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿದ ನ್ಯಾಯಾಧೀಶ ಶಿವಾನಂದ ಲಕ್ಷ್ಮಣ್ ಅಂಚಿ ಅವರು, ಕಾರ್ಮಿಕರು ಸದಾ ಕೆಲಸದ ಒತ್ತಡದಲ್ಲಿರುತ್ತಾರೆ. ಆದರು ಕಾನೂನು ತಿಳಿದುಕೊಳ್ಳುವುದರೊಂದಿಗೆ ಇರುವಂತ ಸವಲತ್ತುಗಳನ್ನು ಸದುಪಯೋಗ ಪಡಿಸಿ ಕೊಂಡು ತಮ್ಮ ಆರೋಗ್ಯವನ್ನು ಕಾಪಾ ಡಿಕೊಳ್ಳಬೇಕು ಎಂದರು.

ಸರಕಾರಗಳು ತಂಬಾಕು ನಿಷೇಧ ಮಾಡಿದ್ದರೂ ಕೂಡ ಯುವಕರು, ಕಾರ್ಮಿ ಕರು ಹಾಗೂ ವಿದ್ಯಾರ್ಥಿಗಳು ತಂಬಾಕು ಸೇವನೆಯಿಂದ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿರುವುದು ಕಂಡು ಬರುತ್ತಿದೆ. ಅದರಿಂದ ಕಾರ್ಮಿಕರು ಮತ್ತು ಸಾರ್ವಜನಿಕರು ಉಚಿತ ಕಾನೂನಿನ ಅರಿವು ಪಡೆದುಕೊಂಡು ಉತ್ತಮ ಜೀವನ ನಡೆಸುವಂತಾಗಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಕೀಲರ ಸಂಘದ ಅಧ್ಯಕ್ಷ ಎಂ.ಎಂ.ನಂಜಪ್ಪ ಮಾತನಾಡಿ, ಕಾರ್ಮಿಕರು ಕಾನೂನಿನ ಅರಿವು ಪಡೆದು ಕೊಂಡು ತಮ್ಮ ಮಕ್ಕಳ ಶಿಕ್ಷಣದ ಕಡೆಗೆ ಹೆಚ್ಚು ಗಮನ ಹರಿಸುವ ಮೂಲಕ ಅವ ಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳು ವಂತಾಗಬೇಕು ಎಂದರು. ವಿರಾಜಪೇಟೆ ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಮಹದೇವ ಸ್ವಾಮಿ ಮಾತನಾಡಿ, ಸರಕಾರದಿಂದ ಕಾರ್ಮಿ ಕರುಗಳಿಗೆ ಸಿಗುವಂತ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಪಾಲಿಬೆಟ್ಟ ಟಾಟಾ ಕಾಫಿ ಎಸ್ಟೇಟ್‍ನ ವ್ಯವಸ್ಥಾಪಕ ಕೆ.ಎಸ್. ಮಾಚಯ್ಯ ಅವರು ಕಾರ್ಯಕ್ರಮದ ಅಧ್ಯ ಕ್ಷತೆ ವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿ ದರು. ವಕೀಲರಾದ ಬಿ.ಬಿ.ಮಾದಪ್ಪ ಅವರು ಕಾರ್ಮಿಕರುಗಳ ಸೌಲಭ್ಯಗಳ ಬಗ್ಗೆ ಉಪನ್ಯಾಸ ನೀಡಿದರು.

Translate »