ಮತದಾನದಿಂದ ದೇಶದ ಭವಿಷ್ಯ ರೂಪಿಸೋಣ: ಚಂದನ್‍ಶೆಟ್ಟಿ
ಹಾಸನ

ಮತದಾನದಿಂದ ದೇಶದ ಭವಿಷ್ಯ ರೂಪಿಸೋಣ: ಚಂದನ್‍ಶೆಟ್ಟಿ

April 11, 2019

ಹಾಸನ: ಯುವ ಸಮುದಾಯದಿಂದ ಅತ್ಯುತ್ತಮ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ನಾವೆಲ್ಲರೂ ತಪ್ಪದೇ ಮತ ಚಲಾಯಿಸುವ ಮೂಲಕ ಉತ್ತಮ ದೇಶದ ಭವಿಷ್ಯ ರೂಪಿಸಲು ಕೈ ಜೋಡಿಸೋಣ ಎಂದು ಬಿಗ್ ಬಾಸ್ ಖ್ಯಾತಿಯ ಹಾಗೂ ರ್ಯಾಪ್ ಗಾಯಕ ಚಂದನ್‍ಶೆಟ್ಟಿ ಹೇಳಿದರು.

ಲೋಕಸಭಾ ಚುನಾವಣೆ ಮತದಾರರ ಜಾಗೃತಿ ರಾಯಭಾರಿಯಾಗಿ ಜಿಲ್ಲೆಗೆ ಆಗಮಿಸಿದ ಅವರು, ನಗರದ ಮಲ್ನಾಡ್ ಎಂಜಿನಿಯರಿಂಗ್ ಕಾಲೇಜು ಸಭಾಂಗಣ ದಲ್ಲಿ ಬುಧವಾರ ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಏ. 18ರಂದು ಪ್ರತಿಯೊಬ್ಬ ನಾಗರಿಕನೂ ತಪ್ಪದೇ ಕಡ್ಡಾಯವಾಗಿ ಮತ ಚಲಾ ಯಿಸುವುದರಿಂದ ಒಂದು ಉತ್ತಮ ದೇಶದ ಭವಿಷ್ಯವನ್ನು ನಿರ್ಮಿಸೋಣ. ಪ್ರಜಾ ಪ್ರಭುತ್ವದ ವ್ಯವಸ್ಥೆಯಲ್ಲಿ ಇಂದು ಹಣ ಆಮಿಷಗಳಿಗೆ ಒಳಗಾದರೆ ಮುಂದೆ ನಾವೇ ಪಶ್ಚಾತಾಪ ಪಡುವಂತಹ ಪರಿಸ್ಥಿತಿ ಬರು ತ್ತದೆ. ನಮ್ಮ ಹಕ್ಕನ್ನು ವಿವೇಚನೆಯಿಂದ ಚಲಾಯಿಸೋಣ ದೇಶದ ಉಜ್ವಲ ಭವಿ ಷ್ಯಕ್ಕೆ ಭಾಗಿಗಳಾಗೋಣ ಎಂದು ಯುವ ಸಮುದಾಯಕ್ಕೆ ಸಲಹೆ ನೀಡಿದರು.

ಇಂದಿನ ಯುವ ಸಮುದಾಯ ಮತ ಚಲಾ ಯಿಸುವ ಮೂಲಕ ತಮ್ಮ ಸುತ್ತ-ಮುತ್ತ ಲಿನ ಜನತೆಗೂ ಕೂಡ ಮತದಾನದ ಅರಿವು ಮೂಡಿಸುವ ಕಾರ್ಯ ಮಾಡಬೇಕು. ನಮ್ಮಿಂದ ಇತರರು ಮತದಾನ ದಂತಹ ಪವಿತ್ರವಾದ ಕಾರ್ಯದ ಬಗ್ಗೆ ಅರಿವು ಮೂಡಿ ಸಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮಾತನಾಡಿ, ನಮ್ಮ ಮತದಾನದಿಂದ ದೃಢ ಭಾರತ ನಿರ್ಮಾಣ ಸಾಧ್ಯವಾಗು ವುದು. ಈ ಒಂದು ಅವಕಾಶವನ್ನು ನಮಗೆ ನೀಡಿದಂತಹ ನಮ್ಮ ಭಾರತ ದೇಶಕ್ಕೆ ಮತ ದಾನ ಮಾಡುವ ಮೂಲಕ ನಮ್ಮ ಕರ್ತವ್ಯ ನಿರ್ವಹಿಸೋಣ ಎಂದು ಹೇಳಿದರು.

ಇಂದಿನ ಯುವ ಸಮುದಾಯವೇ ಮತ ದಾನದಿಂದ ಹಿಂದೆ ಸರಿಯುತ್ತಿದ್ದಾರೆ. ಯುವ ಪೀಳಿಗೆಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ರೀತಿ ಮತದಾರರ ಜಾಗೃತಿ ಜಾಥಾ ಮಾಡುತ್ತಿದ್ದು, ಪ್ರತಿಯೊಬ್ಬ ಯುವಕರು ಏ.18ರಂದು ಮತದಾನ ಮಾಡುವ ಮೂಲಕ ಈ ರೀತಿ ಕಾರ್ಯಕ್ರಮಗಳನ್ನು ಸಾರ್ಥಕಗೊಳಿಸೋಣ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾ ಯಿತಿಯ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಹಾಗೂ ಸ್ವೀಪ್ ಸಮಿತಿಯ ಅಧ್ಯಕ್ಷ ಡಾ.ಕೆ.ಎನ್.ವಿಜಯ್‍ಪ್ರಕಾಶ್ ಅವರು ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಪುಟ್ಟಸ್ವಾಮಿ, ಯೋಜನಾ ನಿರ್ದೇಶಕ ಪರಪ್ಪಸ್ವಾಮಿ, ಮಲ್ನಾಡು ತಾಂತ್ರಿಕ ಕಾಲೇಜಿನ ಪ್ರಾಂಶು ಪಾಲ ಡಾ.ಜಯಂತ್, ಸ್ವೀಪ್ ಸಮಿ ತಿಯ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Translate »