ಲಾಕ್‍ಡೌನ್ ಸಡಿಲಿಸಿದೆ, ಮತ್ತಷ್ಟು ಎಚ್ಚರಿಕೆ ಅಗತ್ಯ
ಮೈಸೂರು

ಲಾಕ್‍ಡೌನ್ ಸಡಿಲಿಸಿದೆ, ಮತ್ತಷ್ಟು ಎಚ್ಚರಿಕೆ ಅಗತ್ಯ

June 1, 2020

ನವದೆಹಲಿ, ಮೇ 31- ದೇಶದಲ್ಲಿ ಲಾಕ್‍ಡೌನ್‍ನ್ನು ಸಡಿಲಗೊಳಿಸಲಾಗಿದ್ದು, ಜನರು ಮತ್ತಷ್ಟು ಎಚ್ಚರಿಕೆ ಯಿಂದಿರಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು `ಮನ್ ಕೀ ಬಾತ್’ ರೇಡಿಯೋ ಕಾರ್ಯಕ್ರಮದಲ್ಲಿ ಭಾನುವಾರ ಹೇಳಿದ್ದಾರೆ.

ಕಳೆದ ಬಾರಿ ನಾನು ನಿಮ್ಮೊಂದಿಗೆ ಮಾತನಾಡಿದ ಸಂದರ್ಭದಲ್ಲಿ ದೇಶದಲ್ಲಿ ರೈಲು, ಬಸ್ ಹಾಗೂ ವಿಮಾನ ಸಂಚಾರಗಳು ಬಂದ್ ಆಗಿದ್ದವು. ಆದರೆ, ಈ ಬಾರಿ ಲಾಕ್ ಡೌನ್ ಸಡಿಲಗೊಳಿಸಲಾಗಿದ್ದು, ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿದೆ. ಸಾಕಷ್ಟು ಮುಂಜಾಗ್ರತಾ ಕ್ರಮಗಳೊಂ ದಿಗೆ ಶ್ರಮಿಕ್ ವಿಶೇಷ ರೈಲು, ಇತರೆ ವಿಶೇಷ ರೈಲು ಹಾಗೂ ವಿಮಾನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಇದೀಗ ಜನರು ಈ ಹಿಂದಿನದ್ದಕ್ಕಿಂತಲೂ ಮತ್ತಷ್ಟು ಎಚ್ಚರಿಕೆ ಯಿಂದಿರಬೇಕಿದೆ ಎಂದು ಅವರು ಹೇಳಿದರು.

ಇತರೆ ದೇಶಗಳಿಗಿಂತಲೂ ಭಾರತದಲ್ಲಿ ಜನಸಂಖ್ಯೆ ಹೆಚ್ಚಾ ಗಿದೆ. ಆದರೆ, ನಾವು ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾ ಯಿಸಿದ್ದೇವೆ. ಪ್ರತಿಯೊಬ್ಬರು ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸುತ್ತಿದ್ದಾರೆ. ಆರ್ಥಿಕ ಚಟುವಟಿಕೆಗಳು ಆರಂಭ ವಾಗಿವೆ. ಸಾಮಾಜಿಕ ಅಂತರಗಳು ಹೆಚ್ಚಾಗಬೇಕಿದೆ. ಸಾಧ್ಯ ವಾದಷ್ಟು ಮಾಸ್ಕ್‍ಗಳನ್ನು ಧರಿಸುವುದು, ಮನೆಗಳಲ್ಲಿಯೇ ಹೆಚ್ಚು ಕಾಲ ಕಳೆಯುವುದಕ್ಕೆ ಪ್ರಯತ್ನಿಸಿ. ಪ್ರತಿಯೊಬ್ಬರ ಸಹಕಾರದೊಂದಿಗೆ ಕೊರೊನಾ ವಿರುದ್ಧದ ಹೋರಾಟವನ್ನು ಮತ್ತಷ್ಟು ಬಲಗೊಳಿಸಬೇಕಿದೆ. ನನ್ನ ಹೃದಯವನ್ನು ಮುಟ್ಟಿದ ಇನ್ನೊಂದು ವಿಷಯವೆಂದರೆ ಈ ಬಿಕ್ಕಟ್ಟಿನ ಕ್ಷಣದಲ್ಲಿ ಸಂಶೋ ಧನೆ ನಡೆಸಿರುವುದು. ಹಳ್ಳಿಗಳು ಮತ್ತು ನಗರಗಳಿಂದ, ಸಣ್ಣ ಪ್ರಮಾಣದ ವ್ಯಾಪಾರಿಗಳಿಂದ ಹಿಡಿದು ಸ್ಟಾರ್ಟ್‍ಅಪ್ ಗಳವರೆಗೆ ಅನೇಕರು ಕೊರೊನಾ ವಿರುದ್ಧ ಹೋರಾಡುವ ಹೊಸ ಮಾರ್ಗಗಳನ್ನು ರೂಪಿಸಿದ್ದಾರೆ.

ನಾಸಿಕ್ ರೈತ ರಾಜೇಂದ್ರ ಎಂಬವರು ತಮ್ಮ ಗ್ರಾಮ ದಲ್ಲಿ ಕೊರೊನಾ ನಿಯಂತ್ರಿಸಲು ತಮ್ಮ ಟ್ರ್ಯಾಕ್ಟರ್‍ನಿಂದ ಸ್ಯಾನಿಟೈಜರ್ ಸಿಂಪಡಣೆ ಮಾಡುತ್ತಿದ್ದಾರೆ. ಇಂತಹ ಹೊಸ ಹೊಸ ಸಂಶೋಧನೆಗಳಿಂದ ಕೊರೊನಾ ವಿರುದ್ಧ ಹೋರಾಟಕ್ಕೆ ಸಹಾಯಕವಾಗಲಿದೆ. ಕೊರೊನಾ ವಿರುದ್ಧದ ಹೋರಾಟ ಸುದೀರ್ಘವಾಗಿದೆ ಎಂದು ಹೇಳಿದರು.

ಸಲೂನ್ ನಡೆಸುತ್ತಿರುವ ತಮಿಳುನಾಡಿನ ಸಿ.ಮೋಹನ್ ಎಂಬವರು ಮಗಳ ಮದುವೆಗಾಗಿ 5 ಲಕ್ಷ ರೂ. ಕೂಡಿಟ್ಟಿ ದ್ದರು. ಆದರೆ ಆ ಹಣವನ್ನು ಸಂಕಷ್ಟದಲ್ಲಿರುವ ಜನರಿ ಗಾಗಿ ನೀಡಿದ್ದಾರೆ. ಪಂಜಾಬ್‍ನ ಪಠಾಣ್‍ಕೋಟ್‍ನ ಅಂಗ ವಿಕಲ ರಾಜು ಎಂಬವರು ಇತರರ ಸಹಾಯದಿಂದ 3,000ಕ್ಕೂ ಹೆಚ್ಚು ಮಾಸ್ಕ್‍ಗಳನ್ನು ತಯಾರಿಸಿದ್ದಾರೆ. ಅವುಗಳನ್ನು ಮಾರಿ 100 ಬಡ ಕುಟುಂಬಗಳಿಗೆ ರೇಷನ್ ವಿತರಿಸಿದ್ದಾರೆ. ಇಂತಹ ಸೇವಾ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳಬೇಕಿದೆ. ಸೇವಾ ಮನೋಭಾವದಿಂದ ಮಾನಸಿಕ ನೆಮ್ಮದಿ, ಆರೋಗ್ಯ ವೃದ್ಧಿಯಾಗುತ್ತದೆ ಎಂದು ಸಲಹೆ ನೀಡಿದರು.

ಭಾರತದ ಪೂರ್ವ ಭಾಗವು ಚಂಡಮಾರುತದಿಂದ ಉಂಟಾಗುವ ನೈಸರ್ಗಿಕ ವಿಪತ್ತನ್ನು ಎದುರಿಸುತ್ತಿದ್ದರೆ ದೇಶದ ಅನೇಕ ಭಾಗಗಳು ಮಿಡತೆಗಳ ದಾಳಿಗೆ ಒಳಗಾಗುತ್ತಿವೆ. ಇದರಿಂದ ಮತ್ತಷ್ಟು ತೊಂದರೆ ಉಂಟಾಗಿದೆ ಎಂದು ಹೇಳಿದರು. ನಿಧಾನವಾಗಿ ರೈಲು ಪ್ರಾರಂಭ ವಾಗಲಿದ್ದು, ದೇಶದ ಆರ್ಥಿಕತೆ ಚಟುವಟಿಕೆಗೆ ಚೇತರಿಕೆ ಸಿಗಲಿದೆ. ದೇಶದ ವಿವಿಧ ಪ್ರದೇಶದಲ್ಲಿ ‘ಮೇಕ್ ಇನ್ ಇಂಡಿಯಾ’ ಯಶಸ್ವಿಯಾಗುತ್ತಿದೆ. ಕೊರೊನಾ ಬಿಕ್ಕಟ್ಟು ಮುಕ್ತಾಯದ ವೇಳೆ ಭಾರತದ ಆಮದು ಪ್ರಮಾಣ ಕಡಿಮೆಯಾಗಲಿದ್ದು, ರಫ್ತು ಹೆಚ್ಚಾಗುವ ಸಾಧ್ಯತೆ ಇದೆ. ದೇಶದಲ್ಲಿ ಬಿದಿರಿನಿಂದ ತಯಾರಿಸಿದ ವಸ್ತುಗಳಿಗೆ ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ಕಲ್ಪಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ನಮ್ಮ ದೇಶ, ನಮ್ಮ ರಾಜ್ಯ, ನಮ್ಮ ಊರು ಮತ್ತು ಗ್ರಾಮಗಳಲ್ಲಿ ‘ಆತ್ಮನಿರ್ಭರ್’ ಮಂತ್ರ ಪಠಿಸಬೇಕಿದೆ. ಕೊರೊನಾ ವಿರುದ್ಧ ಭಾರತ ಸರಿಯಾದ ಮಾರ್ಗದಲ್ಲಿ ಹೋರಾಟ ನಡೆಸುತ್ತಿದೆ. ಇಂದು ನಾವು ಎದುರಿಸುತ್ತಿರುವ ಸವಾಲುಗಳು ಮುಂದಿನ ಭವಿಷ್ಯಕ್ಕೆ ಪಾಠವಾಗಲಿದೆ. ಕಳೆದ ಕೆಲವು ವರ್ಷಗಳಿಂದ ಉತ್ತರ ಭಾರತದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ದೇಶದ ಉತ್ತರ ಭಾರತದಲ್ಲಿನ ವಲಸೆ ಕಾರ್ಮಿಕರನ್ನು ಕಂಡಾಗ ಅವರಿಗಾಗಿ ಮತ್ತಷ್ಟು ಯೋಜನೆಗಳನ್ನು ರೂಪಿಸಬೇಕೆನಿಸುತ್ತಿದೆ.

ಆಯುಷ್ಮಾನ್ ಯೋಜನೆ ಮೂಲಕ ದೇಶದ ಕೋಟ್ಯಾಂತರ ಬಡ ಜನರಿಗೆ ನೆರವು ನೀಡಲಾಗುತ್ತಿದೆ. ನಾರ್ವೆ ಮತ್ತು ಸಿಂಗಾಪುರ ದೇಶಗಳ ಜನಸಂಖ್ಯೆಗಿಂತ ದುಪ್ಪಟ್ಟು ಜನರಿಗೆ ಆಯುಷ್ಮಾನ್ ಯೋಜನೆ ಮೂಲಕ ನೆರವು ನೀಡಲಾಗಿದೆ. ಆಯುಷ್ಮಾನ್ ಯೋಜನೆ ಮೂಲಕ 1 ಕೋಟಿಗೂ ಹೆಚ್ಚು ರೋಗಿಗಳಿಗೆ ಸಹಾಯಕವಾಗಿದೆ. ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಅಂಫಾನ್ ಚಂಡಮಾರುತವು ಅಪ್ಪಳಿಸಿದ್ದು, ಪರಿಸ್ಥಿತಿ ಅವಲೋಕನಕ್ಕಾಗಿ ನಾನು ಎರಡೂ ರಾಜ್ಯಗಳಿಗೆ ಭೇಟಿ ನೀಡಿದ್ದೆ. ಎರಡೂ ರಾಜ್ಯಗಳ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿಮ್ಮನ್ನು, ನಿಮ್ಮ ಕುಟುಂಬವನ್ನು ವೈರಸ್‍ನಿಂದ ರಕ್ಷಿಸಿಕೊಳ್ಳಲು ಮಾಸ್ಕ್ ಧರಿಸಿ, ತೀವ್ರ ಎಚ್ಚರಿಕೆ ವಹಿಸಬೇಕಿದೆ. ಕೊರೊನಾ ವಿರುದ್ಧದ ಹೋರಾಟಕ್ಕೆ ನೀವೆಲ್ಲರೂ ನಮ್ಮೊಂದಿಗೆ ಕೈಜೋಡಿಸುತ್ತೀರಾ ಎಂಬುದಾಗಿ ನಂಬಿದ್ದೇನೆಂದು ತಿಳಿಸಿದ್ದಾರೆ

Translate »