ನಾಳೆಯಿಂದ ಲೋಕಾಯುಕ್ತ ಅಹವಾಲು ಸ್ವೀಕಾರ
ಮೈಸೂರು

ನಾಳೆಯಿಂದ ಲೋಕಾಯುಕ್ತ ಅಹವಾಲು ಸ್ವೀಕಾರ

June 17, 2018

ಮೈಸೂರು:  ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳಿಂದ ಜೂ.18 ರಿಂದ 26ರವರೆಗೆ ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರಿಂದ ದೂರು/ ಅಹವಾಲು ಸ್ವೀಕರಿಸಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಪೊಲೀಸ್ ಅಧೀಕ್ಷೆ ಜೆ.ಕೆ. ರಶ್ಮಿ ತಿಳಿಸಿದ್ದಾರೆ. ಜೂನ್ 18: ಮೈಸೂರು ನಗರದ ಜೆ.ಎಲ್.ಬಿ. ರಸ್ತೆಯಲ್ಲಿರುವ ಚಾಮುಂಡಿ ಅತಿಥಿ ಗೃಹ, ಜೂನ್ 19: ತಾಲೂಕು ಕಛೇರಿ ಆವರಣ ಮೈಸೂರು, ಜೂನ್ 20: ತಾಲೂಕು ಕಚೇರಿ ಆವರಣ, ಟಿ.ನರಸೀಪುರ ಜೂನ್ 21: ಪಿಡಬ್ಲ್ಯೂಡಿ ಅತಿಥಿ ಗೃಹ ಹೆಚ್.ಡಿ.ಕೋಟೆ, ಜೂನ್ 22: ಪಿಡಬ್ಲ್ಯೂಡಿ ಅತಿಥಿ ಗೃಹ ಪಿರಿಯಾಪಟ್ಟಣ, ಜೂನ್ 23: ಪಿಡಬ್ಲ್ಯೂಡಿ ಅತಿಥಿ ಗೃಹ ಹುಣಸೂರು, ಜೂನ್ 25: ತಾಲೂಕು ಕಚೇರಿ ಆವರಣ ನಂಜನಗೂಡು ಹಾಗೂ ಜೂನ್ 26: ಪಿಡಬ್ಲ್ಯೂಡಿ ಅತಿಥಿ ಗೃಹ ಕೆ.ಆರ್.ನಗರ ತಾಲೂಕಿನಲ್ಲಿ ನಡೆಯಲಿದೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಿಗಾಗಿ ವಿಳಂಬ, ಲಂಚದ ಬೇಡಿಕೆ ಹಾಗೂ ಇನ್ನಿತರೆ ತೊಂದರೆ ನೀಡುವ ಸರ್ಕಾರಿ ಅಧಿಕಾರಿ ನೌಕರರ ವಿರುದ್ಧ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2521100ನ್ನು ಸಂಪರ್ಕಿಸುವುದು. ಸಾರ್ವಜನಿಕರು ಈ ಕಾರ್ಯಕ್ರಮದ ಪ್ರಯೋಜನ ಪಡೆಯಬೇಕೆಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Translate »