ಮಡಿಕೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ
ಕೊಡಗು

ಮಡಿಕೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

October 25, 2018

ಮಡಿಕೇರಿ: ಮಹರ್ಷಿ ವಾಲ್ಮೀಕಿ ಅಖಂಡ ಭಾರತ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನಿಲ್ ಸುಬ್ರಮಣಿ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಗರದ ಕಾವೇರಿ ಕಲಾ ಕ್ಷೇತ್ರ ದಲ್ಲಿ ಬುಧವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಾನವೀಯತೆಯೇ ಧರ್ಮ ಎಂಬು ದನ್ನು ಪ್ರತಿಪಾದಿಸಿದ ಮಹಾನ್ ದಾರ್ಶ ನಿಕ ಮಹರ್ಷಿ ವಾಲ್ಮೀಕಿಯ ಜೀವನ ಚರಿ ತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತಾಗಬೇಕು ಎಂದರು.

ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಮಾತನಾಡಿ, ಮಹಾಕಾವ್ಯ ರಾಮಾಯಣವನ್ನು ಇಡೀ ಜಗತ್ತಿಗೆ ಪರಿ ಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿಗೆ ಸಲ್ಲು ತ್ತದೆ. ಮಹರ್ಷಿ ವಾಲ್ಮೀಕಿಯವರ ಆದರ್ಶ, ಶ್ರದ್ದೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳು ವಂತಾಗಬೇಕು. ಇದರಿಂದ ಪ್ರೀತಿ, ವಿಶ್ವಾಸ ದಿಂದ ಬದುಕಲು ಸಾಧ್ಯ ಎಂದು ತಿಳಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾದ್ಯಾ ಪಕರಾದ ಡಾ.ಕೆ.ಸಿ.ದಯಾನಂದ ಮಾತ ನಾಡಿ, ಪ್ರಾಚೀನ ಭಾರತದ ಭವ್ಯ ಪರಂ ಪರೆಯ ಮತ್ತು ಮಾನವೀಯ ಮೌಲ್ಯಗ ಳನ್ನು ಹೆಚ್ಚಿಸುವಲ್ಲಿ ರಾಮಾಯಣ ಮಹಾ ಕಾವ್ಯ ಒಳಗೊಂಡಿದೆ. ಇಡೀ ವಿಶ್ವಕ್ಕೆ ರಾಮಾ ರಾಜ್ಯ ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರದ್ದಾಗಿದೆ. ರಾಮಾಯಣ ಮಹಾಕಾವ್ಯ ಬರೆಯುವ ಮೂಲಕ ಸತತ ಪರಿಶ್ರಮವಿದ್ದಲ್ಲಿ ಸಾಧನೆ ಮಾಡಬಹುದು ಎಂಬುದನ್ನು ತೋರಿಸಿದ್ದಾರೆ ಎಂದು ಕೆ.ಸಿ.ದಯಾನಂದ ನುಡಿದರು.

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಮಾತನಾಡಿ, ಆದಿ ಕವಿಯಾದ ಮಹರ್ಷಿ ವಾಲ್ಮೀಕಿಯ ವರು ಸಂಸ್ಕøತದಲ್ಲಿ ಮಹಾಕಾವ್ಯ ಬರೆದಿ ದ್ದಾರೆ. ಸಾಮಾನ್ಯ ಮನುಷ್ಯ, ಮಹರ್ಷಿ ವಾಲ್ಮೀಕಿಯಾಗಿ ನಾಗರಿಕತೆಯ ಬದಲಾವ ಣೆಗೆ ಶ್ರಮಿಸಿದರು, ಆ ನಿಟ್ಟಿನಲ್ಲಿ ಮಹರ್ಷಿ ವಾಲ್ಮೀಕಿಯವರ ಆದರ್ಶ ಗುಣಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದರು.

ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ರಾದ ಮಲ್ಲಪ್ಪ ಅವರು ಮಾತನಾಡಿ, ಮಾನವಕುಲಕ್ಕೆ ಮಹರ್ಷಿ ವಾಲ್ಮಿಕಿ ಅವರ ರಾಮಾಯಣ ಕೃತಿ ಉತ್ತಮ ಕೊಡುಗೆ, ಹಿಂದಿನ ಕಾಲದ ಆದರ್ಶ ಮಹನೀಯರ ಉತ್ತಮ ವಿಚಾರಗಳನ್ನು ಅಧ್ಯಯನ ಮಾಡ ಬೇಕು. ನುಡಿದಂತೆ ನಡೆದುಕೊಳ್ಳುವುದು ವಾಲ್ಮೀಕಿ ರಾಮಯಾಣದಿಂದ ತಿಳಿದು ಬರುತ್ತದೆ ಎಂದರು.

ಆಶ್ರಮ ಶಾಲೆ ಹಾಗೂ ವಸತಿ ಶಾಲೆ ಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ನಾಲ್ಕು ಮಂದಿ ಶಿಕ್ಷಕರು ಹಾಗೂ ನಿಲಯ ಮೇಲ್ವಿಚಾರಕರು ಮತ್ತು ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಪಂಗಡದ 9 ಮಂದಿ ವಿದ್ಯಾರ್ಥಿಗಳನ್ನು ಇದೇ ಸಂದ ರ್ಭದಲ್ಲಿ ಸನ್ಮಾನಿಸಲಾಯಿತು. ಹಾಗೆಯೇ ವಿವಿಧ ಆಶ್ರಮ ಶಾಲೆಗಳಲ್ಲಿ ರಸಪ್ರಶ್ನೆ, ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾ ರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು. ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರವೀಣ್ ಕುಮಾರ್, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರ ರಾಜ್, ಜಿಪಂ ಉಪ ಕಾರ್ಯದರ್ಶಿ ಗುಡೂರು ಭೀಮ್‍ಸೇನ್, ನಾನಾ ಇಲಾಖೆ ಅಧಿಕಾರಿಗಳು ಇತರರು ಇದ್ದರು.

ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಧಿಕಾರಿ ಶಿವಕುಮಾರ ಸ್ವಾಗತಿಸಿದರು, ಸಾರ್ವ ಜನಿಕ ಶಿಕ್ಷಣ ಇಲಾಖೆಯ ರಮೇಶ್ ನಿರೂ ಪಿಸಿದರು, ವಿಜಯಕುಮಾರ್ ಪ್ರಾರ್ಥಿಸಿ ದರು. ತಾಲೂಕು ಸಮಾಜ ಕಲ್ಯಾಣಾಧಿ ಕಾರಿ ಚಿಕ್ಕಬಸವಯ್ಯ ವಂದಿಸಿದರು.

Translate »