ಹುತಾತ್ಮ ಅರಣ್ಯ ಸಿಬ್ಬಂದಿ ಪರಿಹಾರ 30 ಲಕ್ಷಕ್ಕೆ ಹೆಚ್ಚಳ
ಮೈಸೂರು

ಹುತಾತ್ಮ ಅರಣ್ಯ ಸಿಬ್ಬಂದಿ ಪರಿಹಾರ 30 ಲಕ್ಷಕ್ಕೆ ಹೆಚ್ಚಳ

September 12, 2019

ಬೆಂಗಳೂರು, ಸೆ.11- ಕರ್ತವ್ಯದಲ್ಲಿದ್ದಾಗ ಹುತಾತ್ಮ ರಾಗುವ ಅರಣ್ಯ ಇಲಾಖೆ ಸಿಬ್ಬಂದಿ ಕುಟುಂಬ ಗಳಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು 20 ಲಕ್ಷ ರೂ. ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ನಗರದ ಅರಣ್ಯ ಭವನದಲ್ಲಿಂದು ಏರ್ಪಡಿ ಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಅರಣ್ಯ ಸಿಬ್ಬಂದಿಗೆ ಗೌರವ ಸಲ್ಲಿಸಿದ ನಂತರ ಮಾತನಾಡಿ, ರಾಜ್ಯ ದಲ್ಲಿ ಒಟ್ಟು ಭೌಗೋಳಿಕ ವಿಸ್ತೀರ್ಣದ ಶೇ. 22ರಷ್ಟು ಅರಣ್ಯ ಪ್ರದೇಶ ಇರುವುದು ನೆಮ್ಮದಿ ತರುವ ವಿಚಾರ. ಇದಕ್ಕಾಗಿ ಹಗಲಿರುಳು ಶ್ರಮಿ ಸುವ ಅರಣ್ಯ ಸಿಬ್ಬಂದಿಯ ಕಾಯಕ ಶ್ಲಾಘನೀಯ ಎಂದರು. ಅರಣ್ಯ ಇಲಾಖೆ ಸಿಬ್ಬಂದಿ ಕರ್ತವ್ಯ ದಲ್ಲಿರುವಾಗ ಮೃತಪಟ್ಟರೆ ನೀಡುವ ಪರಿಹಾರ ಮೊತ್ತವನ್ನು ಪೆÇಲೀಸ್ ಇಲಾಖೆಗೆ ಸರಿ ಸಮನಾಗಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಅಲ್ಲದೆ, ಹುತಾತ್ಮರ ಕುಟುಂಬಗಳ ಕ್ಷೇಮಾಭಿವೃದ್ಧಿಗೂ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ದಿನಗೂಲಿ ಸಮಸ್ಯೆಗೂ ಕ್ರಮ: ದಿನಗೂಲಿ ನೌಕ ರರ ಸಮಸ್ಯೆ ಕುರಿತು ಸಹ ಚರ್ಚಿಸಿ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು. ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿ ಸರ್ವೋಚ್ಛ ತ್ಯಾಗವನ್ನು ಮಾಡಿದಂತಹ ಸಮರ್ಪಣಾ ಮನೋಭಾವದ ಹಲವಾರು ಅರಣ್ಯ ಅಧಿಕಾರಿಗಳ ಹೆಸರುಗಳು ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಇಂದಿಗೂ ಹಚ್ಚಹಸಿರಾಗಿ ರಾರಾಜಿ ಸುತ್ತಿವೆ. ಇವರ ಅಸಾಧಾರಣ ಪ್ರಯತ್ನಗಳು, ಧೈರ್ಯಶೀಲ ಕಾರ್ಯಗಳು ನೈಸರ್ಗಿಕ ಸಂಪ ನ್ಮೂಲಗಳನ್ನು ಮತ್ತು ಅಪಾಯಕ್ಕೆ ಒಳಗಾದ ವನ್ಯ ಜೀವಿಗಳನ್ನು ಸಂರಕ್ಷಿಸಿ ಕಾಪಾಡಲು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ ಎಂದು ಮುಖ್ಯ ಮಂತ್ರಿಗಳು ಬಣ್ಣಿಸಿದರು.

ಅರಣ್ಯ ಸಂಪತ್ತಿನ ರಕ್ಷಣೆ ಮಾಡುವಾಗ ದುರದೃಷ್ಟವಶಾತ್ ಕಳ್ಳಕಾಕರ, ವನ್ಯಪ್ರಾಣಿಗಳ ಹಾಗೂ ಇತರೆ ದುಷ್ಟಶಕ್ತಿಗಳ ದಾಳಿಗೆ ಸಿಲುಕಿ ಈವರೆಗೆ 47 ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಈ ಹಿಂದೆ ಕುಖ್ಯಾತ ಕಾಡುಗಳ್ಳ ವೀರಪ್ಪನ್‍ನ ಮೋಸದ ಬಲೆಗೆ ಸಿಲುಕಿ ಪಿ.ಶ್ರೀನಿವಾಸ್, ಭಾರತೀಯ ಅರಣ್ಯ ಸೇವಾ (ಐಎಫ್‍ಎಸ್) ಅಧಿಕಾರಿ ಹುತಾತ್ಮರಾದರು. ಇವರು ಸಹ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ತಮ್ಮ ಜೀವನ ವನ್ನೇ ಮುಡುಪಾಗಿಟ್ಟಿದ್ದರು. ಇವರ ಕಾರ್ಯದಕ್ಷತೆ ಪ್ರಾಮಾಣಿಕತೆ ಹಾಗೂ ಅಮೋಘ ಸೇವೆಯನ್ನು ಮೆಚ್ಚಿ ಭಾರತ ಸರ್ಕಾರ ಇವರಿಗೆ ‘ಕೀರ್ತಿ ಚಕ್ರ’ ಶೌರ್ಯ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿ ಗೌರವಿಸಿರುವುದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು. ಕರ್ತವ್ಯ ನಿರ್ವಹಿಸುವಾಗ ಕಾಡಾನೆಯ ದಾಳಿಯಿಂದ ಮೃತಪಟ್ಟ ಕ್ಷೇಮಾಭಿ ವೃದ್ಧಿ ನೌಕರರಾದ ಕಾವೇರಿ ವನ್ಯಜೀವಿ ವಿಭಾಗದ ಅಲಗಾ ಹಾಗೂ ಹಾಸನ ವಿಭಾಗದ ಎಲ್.ಎನ್.ಅಣ್ಣೇಗೌಡ ಇವರಿಗೆ ಶ್ರದ್ಧಾಂಜಲಿ ಅರ್ಪಿಸಿದ ಮುಖ್ಯಮಂತ್ರಿಗಳು, ಆನೆಗಳ ದಾಳಿಯಿಂದ ಪ್ರಾಣ ಹಾನಿ, ರೈತರ ಬೆಳೆ ಹಾನಿ ಹಾಗೂ ಆರ್ಥಿಕ ಸಂಕಷ್ಟವನ್ನು ಪರಿಗಣಿಸಿ ಮಾನವ-ಆನೆ ಸಂಘರ್ಷ ನಿಯಂತ್ರಣಕ್ಕೆ ಸರ್ಕಾರ ಯೋಜನೆ ರೂಪಿಸಿದೆ. ರಾಜ್ಯದ ಅರಣ್ಯ ಸಂಪತ್ತು ಮತ್ತು ವನ್ಯಜೀವಿ ಸಂರಕ್ಷಣೆಗಾಗಿ ಅರಣ್ಯ ಇಲಾಖೆಯನ್ನು ಇನ್ನಷ್ಟು ಸದೃಢಗೊಳಿಸಬೇಕಾಗಿದ್ದು, ಅದಕ್ಕಾಗಿ ವಿವಿಧ ಹಂತದ ಕ್ಷೇತ್ರ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಿಸಲು ಸರ್ಕಾರ ಕ್ರಮ ಕೈಗೊಂಡಿ ರುತ್ತದೆ ಎಂದರು. ಅರಣ್ಯ ಪ್ರದೇಶಗಳಲ್ಲಿ ಬೇಟೆ ಹಾಗೂ ಅಕ್ರಮ ಚಟು ವಟಿಕೆಗಳ ನಿಗ್ರಹಕ್ಕಾಗಿ ಅತ್ಯಾಧುನಿಕ ಸಲಕರಣೆಗಳನ್ನು ಅರಣ್ಯ ಸಿಬ್ಬಂದಿಗೆ ಪೂರೈಸ ಲಾಗುತ್ತಿದೆ. ಈ ಕ್ರಮ ಸಿಬ್ಬಂದಿಯ ಕಾರ್ಯ ಕ್ಷಮತೆಯನ್ನು ಹೆಚ್ಚಿಸುವುದರೊಂ ದಿಗೆ ಕಳ್ಳಬೇಟೆ ಮೇಲೂ ಕಣ್ಣಿಡಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು. ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಸಂದೀಪ್ ದವೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪುನ ಟಿ ಶ್ರೀಧರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Translate »