ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆ ಇಂದು ಅಪ್ಪುಗೆ `ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ
News

ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆ ಇಂದು ಅಪ್ಪುಗೆ `ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

November 1, 2022

ಬೆಂಗಳೂರು, ಅ. 31 (ಕೆಎಂಶಿ)-ಅರವತ್ತೇಳನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಅರ್ಥ ಪೂರ್ಣವಾಗಿ ಆಚರಿಸುವ ಸಂಕಲ್ಪವನ್ನು ರಾಜ್ಯ ಸರ್ಕಾರ ಮಾಡಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯೋತ್ಸವ, ಕರ್ನಾ ಟಕ ರತ್ನ ಪ್ರಶಸ್ತಿ ಹಾಗೂ ಜಾಗತಿಕ ಹೂಡಿಕೆದಾರರ ಸಮಾ ವೇಶಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಿದರು. ನಾಳೆ ನಾಡಿನಾ ದ್ಯಂತ ಗ್ರಾಮಗಳಲ್ಲಿ, ನಗರಗಳಲ್ಲಿ ಶಾಲೆ ಹಾಗೂ ಇತರೆ ಸಂಘ ಸಂಸ್ಥೆಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ರಾಜ್ಯೋತ್ಸವ ಆಚರಿಸಬೇಕು, ಕನ್ನಡದ ಧ್ವಜಗಳನ್ನು ಹಾರಿಸಬೇಕು ಎಂದು ಕರೆ ನೀಡಿದರು.

ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ನಾಳೆ ಸಂಜೆ 4 ಗಂಟೆಗೆ ಕರ್ನಾ ಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಹಮ್ಮಿಕೊಳ್ಳಲಾಗಿದೆ. ದಿವಂಗತ ಡಾ. ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ಸರ್ಕಾರ ಕೊಡ ಮಾಡುತ್ತಿದ್ದು, ಅಭಿಮಾನಿ ಕನ್ನಡಿಗರು ಭಾಗವಹಿಸಬೇಕೆಂದು ಮುಖ್ಯಮಂತ್ರಿಗಳು ಕೋರಿದರು.

ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಎಲ್ಲಾ ಶ್ರೇಷ್ಠ ವ್ಯಕ್ತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು. ನವೆಂಬರ್ 2, 3, 4 ರಂದು ಬಂಡವಾಳ ಹೂಡಿಕೆ ದಾರರ ಸಮಾವೇಶವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಜಗತ್ತಿನಾದ್ಯಂತ ಪ್ರಮುಖ ಉದ್ಯಮಿಗಳು, ಉದ್ದಿಮೆಯ ನಾಯಕರು ಈ ಸಮಾವೇಶದಲ್ಲಿ ಭಾಗವಹಿಸುತ್ತಿದ್ದು, ಜೊತೆಗೆ 5 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಬಂಡವಾಳ ಹೂಡಿಕೆಯಾಗುತ್ತದೆ.

ಈಗಾಗಲೇ ಬಹಳಷ್ಟು ಜನ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಿ ದ್ದಾರೆ. ಅವರ ಯೋಜನೆಗಳ ಅನುಮೋದನೆಯನ್ನೂ ಮಾಡಲಾ ಗಿದೆ. ಭರವಸೆ ಪತ್ರವನ್ನೂ ನಾಳೆ ವಿತರಿಸಲಿದ್ದು, ಮುಂದಿನ 3 ದಿನಗಳ ಕಾಲ ಹಲವಾರು ಕ್ಷೇತ್ರಗಳಲ್ಲಿ ಆಗುತ್ತಿರುವ ಪ್ರಗತಿ ಹಾಗೂ ನವೀಕರಿಸಬಹುದಾದ ಇಂಧನ, ಸೆಮಿಕಂಡಕ್ಟರ್, ಏರೋಸ್ಪೇಸ್, ರಕ್ಷಣಾ ಕ್ಷೇತ್ರ ಮುಂತಾದ ಪ್ರಮುಖ ಕ್ಷೇತ್ರಗಳ ಸವಾಲುಗಳು ಹಾಗೂ ಬೆಳವಣಿಗೆಯ ಬಗ್ಗೆ ಚರ್ಚಾಗೋಷ್ಠಿಗಳು ನಡೆಯಲಿವೆ. ದೇಶ ಹಾಗೂ ಅಂತರರಾಷ್ಟ್ರೀಯ ಮಟ್ಟದ ಎಲ್ಲಾ ಪರಿಣಿತರು ಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ. ಮೂರು ದಿನಗಳ ಈ ಕಾರ್ಯ ಕ್ರಮ ರಾಜ್ಯದಲ್ಲಿ ಮುಂದಿನ 5 ವರ್ಷಗಳ
ಕಾಲ ಆರ್ಥಿಕ ಚಟುವಟಿಕೆಗಳ ಕುರಿತ ದಿಕ್ಸೂಚಿಯಾಗಲಿದೆ. ಇದರಲ್ಲಿಯೂ ಆಸಕ್ತರು, ಉದ್ಯಮಿಗಳು ಹಾಗೂ ಸಣ್ಣ ಕೈಗಾರಿಕೋದ್ಯಮಿಗಳಿಗೆ ಪಾಲ್ಗೊಳ್ಳುವ ಅವಕಾಶವಿದೆ. ಹೆಸರುಗಳನ್ನು ನೋಂದಾಯಿಸಿಕೊಂಡು ಭಾಗವಹಿಸಬೇಕು. ನೋಂದಣಿ ಮೂಲಕ ಮಾತ್ರವೇ ಸಮಾವೇಶಕ್ಕೆ ಪ್ರವೇಶವಿದೆ ಎಂದರು. ನವೆಂಬರ್ 11ರಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್, ಬೆಂಗಳೂರು ರೈಲ್ವೇ ನಿಲ್ದಾಣದಲ್ಲಿ ಚೆನ್ನೈ-ಬೆಂಗಳೂರು- ಮೈಸೂರು ನಡುವಿನ `ವಂದೇ ಭಾರತ್’ ಹೈಸ್ಪೀಡ್ ರೈಲನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಲಿದ್ದಾರೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಇದರ ಜೊತೆಗೆ ಬೆಂಗಳೂರು ನಿರ್ಮಾತೃ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಉದ್ಘಾಟನೆಯಾಗುತ್ತಿದೆ. ಕೆಂಪೇಗೌಡರು ಪ್ರಗತಿಯ ಸಂಕೇತವಾಗಿದ್ದು, ಅವರ ಪ್ರತಿಮೆಗೆ `ಪ್ರಗತಿಯ ಪ್ರತಿಮೆ’ ಎಂದು ಹೆಸರಿಡಲಾಗಿದೆ. ಲಕ್ಷಾಂತರ ಜನ ಇದರಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಸಾರ್ವಜನಿಕ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡುತ್ತಾರೆ ಎಂದು ವಿವರಿಸಿದರು. ಇನ್ಸ್‍ಪೆಕ್ಟರ್ ನಂದೀಶ್ ಆತ್ಮಹತ್ಯೆ ಪ್ರಕರಣದ ತನಿಖೆ ಪ್ರಾರಂಭಿಸಲು ಡಿಜಿಪಿ ಅವರಿಗೆ ಸೂಚನೆ ನೀಡಲಾಗಿದೆ. ಸಂಪೂರ್ಣ, ವಿಸ್ತೃತ ತನಿಖೆ ಕೈಗೊಳ್ಳಲು ತಿಳಿಸಿದ್ದೇನೆ ಎಂದರು.

Translate »